Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.21, 22 ರಂದು ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ – `ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಫೆ.21, 22 ರಂದು ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ – `ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ

Bengaluru City

ಫೆ.21, 22 ರಂದು ಶಟಲ್‌ ಬ್ಯಾಡ್ಮಿಂಟನ್‌ ಟೂರ್ನಿ – `ಸಿಎಂ ಕಪ್‌ 2026’ರ ಜೆರ್ಸಿ ಅನಾವರಣ

Public TV
Last updated: January 26, 2026 1:00 pm
Public TV
Share
3 Min Read
CM CUP
SHARE

– ಸಚಿವರು, ಶಾಸಕರು, ಐಎಎಸ್‌, ಐಪಿಎಸ್‌, ಸರ್ಕಾರಿ ನೌಕರರು, ಸೆಲೆಬ್ರೆಟಿಗಳು ಸ್ಪರ್ಧಿಗಳಾಗಿ ಕಣಕ್ಕೆ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ರೀತಿಯ ಸೇವೆ ಸಲ್ಲಿಸುತ್ತಿರುವ ಮಹನೀಯರ ಕ್ರೀಡಾಸಕ್ತಿಯನ್ನು ಪ್ರದರ್ಶಿಸಲು ವೇದಿಕೆ ರೂಪಿಸುವ ಉದ್ದೇಶದೊಂದಿಗೆ ‘ಸಿಎಂ ಕಪ್‌ 2026’ (CM Cup 2026) ಶಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ (Shuttle Badminton Tournament) ಆಯೋಜಿಸಲಾಗಿದೆ. ಕ್ರೀಡಾಕೂಟದ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಕಾರ್ಯಕ್ರಮ ಭಾನುವಾರ ಅದ್ಧೂರಿಯಾಗಿ ನಡೆಯಿತು.

ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಜಿ ಮತ್ತು ಐಜಿಪಿ ಡಾ.ಎಂ.ಎ ಸಲೀಂ, ಡಿಜಿಪಿ ಅಲೋಕ್ ಕುಮಾರ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ (Bengaluru Police Commissioner) ಸೀಮಂತ್ ಕುಮಾರ್ ಸಿಂಗ್ ಅವರು ತಂಡದ ಜರ್ಸಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿದ ಡಾ.ಎಂ.ಎ ಸಲೀಂ, ಇದು ಐಪಿಎಲ್ (IPL) ಮಾದರಿಯಲ್ಲಿ ಆಯೋಜನೆ ಮಾಡಿರುವುದು ಬಹಳ ಖುಷಿ ನೀಡಿದೆ. ನಾನೂ ಬ್ಯಾಡ್ಮಿಂಟನ್‌ ಆಡುತ್ತೇನೆ. ಇದು ಕ್ರೀಡಾ ಸ್ಪೂರ್ತಿಯನ್ನು ತೋರಿಸುತ್ತದೆ. ನಮ್ಮ ಇಲಾಖೆಯವರು ಇದರಲ್ಲಿ ಆಡುತ್ತಿರುವುದು ಬಹಳ ಸಂತೋಷ ತಂದಿದೆ. ಎಲ್ಲರೂ ಕ್ರೀಡೆಯಲ್ಲಿ ಭಾಗವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

CM CUP 2

ಅಲೋಕ್ ಕುಮಾರ್ ಮಾತನಾಡಿ, ನಾನು ಬ್ಯಾಡ್ಮಿಂಟನ್‌ ಆಡುತ್ತೇನೆ. ಈ ಪಂದ್ಯಾವಳಿಯಲ್ಲಿ ರಾಜಕೀಯ ಮುಖಂಡರು, ಮಾಧ್ಯಮದ ಮಿತ್ರರು, ವೈದ್ಯರು, ಆಡಳಿತಾಧಿಕಾರಿಗಳು ಎಲ್ಲರ ಸಮ್ಮಿಲನ ನೋಡಿ ಬಹಳ ಖುಷಿಯಾಯಿತು. ಬಹುಶಃ ಈ ರೀತಿ ಎಲ್ಲಿಯೂ ನಡೆದಿಲ್ಲ. ಪಂದ್ಯಾವಳಿ ತುಂಬಾ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಅಗ್ರಗಣ್ಯ ಮಾಧ್ಯಮಗಳಲ್ಲಿ ಹಲವು ವರ್ಷಗಳ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಜಿ.ವೈ ಮಂಜುನಾಥ್‌ ಅವರ ಪರಿಕಲ್ಪನೆಯಲ್ಲಿ ಸಿಎಂ ಕಪ್‌ 2026 ಆಯೋಜಿಸಲಾಗುತ್ತಿದೆ. ಅವರಿಗೆ ಹಲವು ಗೆಳೆಯರು ಸಿಎಂ ಕಪ್‌ 2026ರ ಆಯೋಜನೆಗೆ ಸಹಕಾರ ನೀಡಿದ್ದಾರೆ. ರಾಜ್ಯದಲ್ಲಿಯೇ ವಿಭಿನ್ನ ಮತ್ತು ವಿಶೇಷ ರೀತಿಯಲ್ಲಿ ಸಿಎಂ ಕಪ್‌ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ. ರಾಜ್ಯದ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡುತ್ತಿರುವ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವವರು ಸ್ಪರ್ಧಿಗಳಾಗಿ ಶಟಲ್‌ ಕೋರ್ಟ್‌ನಲ್ಲಿ ಮುಖಾಮುಖಿಯಾಗುತ್ತಿದ್ದಾರೆ. ಆ ಮೂಲಕ ಸಿಎಂ ಕಪ್‌ ಒಂದು ಕ್ಷೇತ್ರ ಆಟಗಾರರಿಗೆ ಮಾತ್ರ ಸೀಮಿತವಾಗಿರದೆ, ಎಲ್ಲ ಕ್ಷೇತ್ರದವರನ್ನ ಕ್ರೀಡೆಯಲ್ಲಿ ತೊಡಗಿಸುವ ದೊಡ್ಡ ಸಾಹಸವಾಗಿದೆ.

siddaramaiah dk shivakumar

8 ತಂಡಗಳ ನಡುವೆ ಹಣಾಹಣಿ:
ಸಿಎಂ ಕಪ್‌ ಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟದ ಮತ್ತೊಂದು ವಿಶೇಷವೆಂದರೆ ಪ್ರತಿ ಕ್ಷೇತ್ರದವರು ಒಂದೇ ತಂಡದಲ್ಲಿ ಆಡುತ್ತಿಲ್ಲ. ಬದಲಿಗೆ, ಎಲ್ಲರೂ ಒಂದೊಂದು ತಂಡದಿಂದ ಒಟ್ಟಾಗಿ ಕಣಕ್ಕಿಳಿಯುತ್ತಿದ್ದಾರೆ. ಒಟ್ಟು 8 ಫ್ರಾಂಚೈಸಿ ತಂಡಗಳಿರಲಿದ್ದು, ಪ್ರತಿ ತಂಡಕ್ಕೂ ಪ್ರತ್ಯೇಕ ಮಾಲೀಕರಿರಲಿದ್ದಾರೆ. ಜೊತೆಗೆ ಪ್ರತಿ ತಂಡದಲ್ಲೂ ಪುರುಷ ಮತ್ತು ಮಹಿಳಾ ಆಟಗಾರ್ತಿಯರಂತೆ ಒಟ್ಟು 15 ಆಟಗಾರರಿರಲಿದ್ದಾರೆ. ಹಾಗೆಯೇ, ಪ್ರತಿ ತಂಡದಲ್ಲೂ ಜನಪ್ರತಿನಿಧಿಗಳು, ಐಎಎಸ್‌, ಐಪಿಎಸ್‌, ಕೆಎಎಸ್‌, ಪೊಲೀಸ್‌, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಚಲನಚಿತ್ರ ನಟ-ನಟಿಯರು ಮತ್ತು ಪತ್ರಕರ್ತ ಆಟಗಾರರಿರಲಿದ್ದಾರೆ.

para badminton

ಪ್ರತಿ ತಂಡಕ್ಕೂ ಒಬ್ಬರು ಕ್ಯಾಪ್ಟನ್‌, ಒಬ್ಬರು ವೈಸ್‌-ಕ್ಯಾಪ್ಟನ್‌ ಇರಲಿದ್ದಾರೆ. ಅವರ ಜತೆಗೆ ಚಲನಚಿತ್ರ ರಂಗದ ಒಬ್ಬರು ಐಕಾನ್‌ ಪ್ಲೇಯರ್‌ ಆಗಿರಲಿದ್ದಾರೆ. ಪ್ರತಿ ತಂಡಕ್ಕೂ ತಲಾ ಒಬ್ಬರು ಶಾಸಕರು (ಜನಪ್ರತಿನಿಧಿ), ಐಎಎಸ್‌, ಐಪಿಎಸ್‌, ಪೊಲೀಸ್‌ ಅಧಿಕಾರಿಗಳು, ಸಚಿವಾಲಯದ ಅಧಿಕಾರಿಗಳು, ವೈದ್ಯರು, ಮಾಧ್ಯಮ ಪ್ರತಿನಿಧಿ ಹಾಗೂ ಚಲನಚಿತ್ರ ರಂಗದವರು ಆಟಗಾರರಾಗಿ ಆಯ್ಕೆ ಮಾಡಲಾಗಿದೆ. ಪಂದ್ಯಾವಳಿಯು ಮೆನ್ಸ್‌ ಸಿಂಗಲ್ಸ್‌, ಮೆನ್ಸ್ ಡಬಲ್ಸ್‌, ವುಮೆನ್‌ ಸಿಂಗಲ್ಸ್‌, ವುಮೆನ್ಸ್ ಡಬಲ್ಸ್‌, ಮಿಕ್ಸೆಡ್‌ ಡಬಲ್ಸ್ ಮತ್ತು ಪವರ್‌ ಡಬಲ್ಸ್‌ ಕೆಟಗರಿಯಲ್ಲಿ ನಡೆಯಲಿದೆ. ಇದರ ಜೊತೆಗೆ ಗೇಮ್‌ ಚೇಂಜರ್‌ ಎನ್ನುವ ಹೊಸ ಪರಿಕಲ್ಪನೆಯನ್ನೂ ಕ್ರೀಡಾಕೂಟದಲ್ಲಿ ಪರಿಚಯಿಸಲಾಗುತ್ತಿದೆ. ಕ್ರೀಡಾಕೂಟದ ವಿಜೇತ ತಂಡಕ್ಕೆ 7 ಲಕ್ಷ ರೂಪಾಯಿ ನಗದು ಮತ್ತು ಆಕರ್ಷಕ ಟ್ರೋಫಿ ನೀಡಲಾಗುತ್ತಿದೆ.

ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಫೆ. 21-22ರಂದು ಕ್ರೀಡಾಕೂಟ:
ಸಿಎಂ ಕಪ್‌ 2026 ಕ್ರೀಡಾಕೂಟವು ಫೆ. 21 (ಶನಿವಾರ) ಮತ್ತು ಫೆ. 22 (ಭಾನುವಾರ)ರಂದು ಕರ್ನಾಟಕ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ನಲ್ಲಿ ನಡೆಯಲಿದೆ. ಅದರ ಪೂರ್ವಭಾವಿಯಾಗಿ ಭಾನುವಾರ (ಜ. 25)ದಂದು ಅರಮನೆ ಮೈದಾನದ ವೈಟ್‌ಪೆಟಲ್ಸ್ ನಲ್ಲಿ ಆಟಗಾರರ ಆಯ್ಕೆ ಮತ್ತು ಜೆರ್ಸಿ ಅನಾವರಣ ಮಾಡಲಾಯಿತು.

TAGGED:bengaluruBengaluru city policeCelebritiesCM Cup 2026Shuttle Badmintonsiddaramaiahಬೆಂಗಳೂರುಶಟಲ್‌ ಬ್ಯಾಡ್ಮಿಂಟನ್‌ ಕ್ರೀಡಾಕೂಟಸಿಎಂ ಕಪ್‌ 2026ಸಿಎಂ ಕಪ್‌ ಜೆರ್ಸಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
3 minutes ago
Train
Bengaluru City

ಬೇಸಿಗೆಯ ದಟ್ಟಣೆ ನಿರ್ವಹಣೆ; ಬೆಂಗಳೂರು ಕಂಟೋನ್ಮೆಂಟ್-ಚೆನ್ನೈ ನಡುವೆ ವಿಶೇಷ ರೈಲು ಸಂಚಾರ

Public TV
By Public TV
7 minutes ago
Anjanadri Hils
Districts

ಹನುಮ ಜಯಂತಿ – ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು

Public TV
By Public TV
31 minutes ago
Rajnath Singh
Latest

ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ: ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ಎಚ್ಚರಿಕೆ

Public TV
By Public TV
35 minutes ago
Vinay Kulkarni 3
Court

ಯೋಗೇಶ್ ಗೌಡ ಹತ್ಯೆ ಕೇಸ್ – ಏ.9ಕ್ಕೆ ತೀರ್ಪು ಕಾಯ್ದಿರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

Public TV
By Public TV
48 minutes ago
NAMMA METRO 4
Bengaluru City

ಏ.5ರಂದು 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ ಸೇವೆ ಸ್ಥಗಿತ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?