ಸಿಎಂ ಎಚ್‍ಡಿಕೆಗಾಗಿ ಹರಕೆ ಹೊತ್ತಿದ್ದ ಮಂದಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ

Public TV
1 Min Read
CKM PADAYATRE

ಚಿಕ್ಕಮಗಳೂರು: ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಜಿಲ್ಲೆಯ ಕಂಚೀಪುರ ಗ್ರಾಮದ ಹತ್ತು ಜನ 219 ಕಿ.ಮೀ ದೂರದಲ್ಲಿರುವ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದಾರೆ.

ಏಳು ದಿನಗಳ ಪಾದಯಾತ್ರೆಯಲ್ಲಿ ಈಗಾಗಲೇ ಮೂರು ದಿನ ಕಳೆದಿದ್ದು, ಪ್ರತಿ ರಾತ್ರಿ ದೇವಸ್ಥಾನಗಳಲ್ಲಿ ಆಶ್ರಯ ಪಡೆದು ಮುಂದೆ ಸಾಗುತ್ತಿದ್ದಾರೆ. ಸದ್ಯ ಇವರ ಪಾದಯಾತ್ರೆ ಚಿಕ್ಕಮಗಳೂರಿನಲ್ಲಿ ಸಾಗುತ್ತಿದೆ. ಕಾಲ್ನಡಿಗೆ ಮೂಲಕ ಸಾಗುತ್ತಿರುವ ಇವರು ಕುಮಾರಸ್ವಾಮಿಗೆ ಎಲ್ಲಾ ಸವಾಲುಗಳನ್ನ ಧರ್ಮಸ್ಥಳದ ಮಂಜುನಾಥ ಸ್ವಾಮಿ ಎದುರಿಸುವ ಶಕ್ತಿ ನೀಡಲೆಂದು ಬೇಡಿಕೊಳ್ಳುತ್ತೇವೆ ಅಂತ ಅವರು ಹೇಳಿದ್ದಾರೆ.

ಸಿಎಂ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಮೊದಲ ದಿನದಿಂದಲೂ ಹಲವು ಸವಾಲುಗಳನ್ನ ಎದುರಿಸುತ್ತಿದ್ದಾರೆ. ಅವರ ನೈತಿಕ ಸ್ಥೈರ್ಯ ಕುಗ್ಗಿಸಲೆಂದೇ ಬಿಜೆಪಿ ಹಲವು ಆರೋಪಗಳನ್ನ ಮಾಡುತ್ತಿದೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಕೂಡ ಕುಮಾರಸ್ವಾಮಿ ಅವರಿಗೆ ತೊಂದರೆ ಕೊಡಲೆಂದೇ ಮಾಡುತ್ತಿರುವ ಹಿಡನ್ ಅಜೆಂಡಾ ಎಂದು ಅವರು ಆರೋಪಿಸಿದರು.

ಕುಮಾರಸ್ವಾಮಿಯ ಅಪ್ಪಟ ಭಕ್ತರಂತೆ ಹತ್ತು ಜನರೂ ಎಚ್‍ಡಿಕೆಯ ಭಾವಚಿತ್ರವಿರುವ ಒಂದೇ ರೀತಿಯ ಟೀ ಶರ್ಟ್ ಧರಿಸಿಕೊಂಡು ಪಾದಯಾತ್ರೆ ತೆರಳುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *