ಪ್ರಧಾನಿ ಮೋದಿ ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ ಎಚ್‍ಡಿಕೆ

Public TV
1 Min Read
HD KUMARASWAMY MODI

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಹೆಚ್ಚಾಗಿದ್ದು, ಬರನಿರ್ವಹಣೆಗೆ ಕೇಂದ್ರ ಸರ್ಕಾರ ರಾಜ್ಯದ ನೆರವಿನಿಗೆ ಆಗಮಿಸಬೇಕು ಎಂದು ಸಿಎಂ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಪ್ರಧಾನಿಗಳ ಗೃಹಕಚೇರಿಯಲ್ಲಿ ಸಿಎಂ ಭೇಟಿ ಮಾಡಿ ಸರಾಜ್ಯದ ಬರದ ಪರಿಸ್ಥಿತಿ ಬಗ್ಗೆ ಮನವರಿಕೆ ಮಾಡಿದರು. ರಾಜ್ಯದಲ್ಲಿ 156 ತಾಲೂಕು ಬರಪೀಡಿತವಾಗಿದ್ದು, ಬರ ಪರಿಹಾರ ಹಾಗು ನರೇಗಾ ಬಾಕಿ ಅನುದಾನ ಬಿಡುಗಡೆ ಮಾಡಬೇಕು. ಬರನಿರ್ವಹಣೆಗೆ ರಾಷ್ಟ್ರೀಯ ವಿಕೋಪ ನಿರ್ವಹಣಾ ನಿಧಿ ಮಾರ್ಗ ಸೂಚಿಯನ್ವಯ 2064.30 ಕೋಟಿ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ರಾಜ್ಯಕ್ಕೆ ಇದುವರೆಗೂ ಕೇವಲ ಕೇವಲ 949 ಕೋಟಿ ರೂ. ಮಾತ್ರ ಪರಿಹಾರ ಬಂದಿದೆ. ಅಂದರೆ ಅರ್ಧದಷ್ಟು ಕೂಡ ಹಣ ಬಿಡುಗಡೆಯಾಗಿಲ್ಲ. ಹಿಂಗಾರು ಅವಧಿಯಲ್ಲಿ 11,384 ಕೋಟಿ ರೂ. ಮೌಲ್ಯ ಬೆಳೆ ನಷ್ಟಗಿದ್ದಾರೆ. ಹಿಂಗಾರು ಮತ್ತು ಮುಂಗಾರು ಸೇರಿ ಒಟ್ಟು 32,335 ಕೋಟಿ ರೂ. ರಾಜ್ಯಕ್ಕೆ ನಷ್ಟ ಆಗಿದೆ. ಇದು ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಮನ್ರೇಗಾ ಯೋಜನೆಯಡಿ ಕೇಂದ್ರದಿಂದ 1,351 ಕೋಟಿ ರೂ. ಬಾಕಿ ಬಿಡುಗಡೆ ಆಗಬೇಕಾಗಿತ್ತು. ಆದ್ದರಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ಎಂದು ಕೋರಿದ್ದಾರೆ.

ಇದೇ ವೇಳೆ ದೆಹಲಿಯ ಕೃಷ್ಣ ಮೆನನ್ ಮಾರ್ಗ್ ನಲ್ಲಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನ ಸಿಎಂ ಭೇಟಿ ಮಾಡಿದರು. ಈ ವೇಳೆ ಹಾಸನದ ನ್ಯಾಯಾಲಯದ ಸಂಕೀರ್ಣ ಉದ್ಘಾಟನೆಗೆ ಆಹ್ವಾನ ನೀಡಿದರು. ಸಿಎಂ ಕುಮಾರಸ್ವಾಮಿ ಅವರಿಗೆ ಲೋಕೋಪಯೋಗಿ ಸಚಿವ ರೇವಣ್ಣ ಸಾಥ್ ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *