Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮೈತ್ರಿ ಸರ್ಕಾರ 1 ವರ್ಷದ ಸಾಧನೆ ತೃಪ್ತಿ ತಂದಿದೆ: ಸಿಎಂ ಎಚ್‍ಡಿ ಕುಮಾರಸ್ವಾಮಿ

Public TV
Last updated: May 22, 2019 10:25 pm
Public TV
Share
3 Min Read
CM HDK
SHARE

ಬೆಂಗಳೂರು: ಮೇ 23ಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ರಚನೆಯಾಗಿ 1 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವರ್ಷದ ಸಾಧನೆಯ ಬಗ್ಗೆ ಸಿಎಂ ಕುಮಾರಸ್ವಾಮಿ ಅವರು ತೃಪ್ತಿ ವ್ಯಕ್ತಪಡಿಸಿದ್ದಾರೆ.

ಸರ್ಕಾರ ಒಂದು ವರ್ಷದ ಸಾಧನೆಗಳನ್ನು ಜನತೆಗೆ ತಿಳಿಸಿರುವ ಸಿಎಂ ಕುಮಾರಸ್ವಾಮಿ ಅವರು, ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ವೇಣುಗೋಪಾಲ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸಂಪುಟ ಸದಸ್ಯರು ಸೇರಿದಂತೆ ರಾಜ್ಯದ ಜನರಿಗೆ ಕೃತಜ್ಞತೆ ತಿಳಿಸಿದ್ದಾರೆ.

JDS CONGRESS LEADERS 1

ಸಿಎಂ ಪತ್ರಿಕಾ ಹೇಳಿಕೆ ಇಂತಿದೆ:
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಹೊಂಗನಸಿನೊಂದಿಗೆ ನಮ್ಮ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾಗುತ್ತಿದೆ. ಈ ಅವಧಿಯಲ್ಲಿ ನಾವು ಮಂಡಿಸಿದ ಎರಡು ಆಯವ್ಯಯಗಳು ನಮ್ಮ ಸರ್ಕಾರದ ಒಲವು, ನಿಲುವುಗಳು, ಸಾಗಬೇಕಾದ ಹಾದಿಯನ್ನು ಸ್ಪಷ್ಟಪಡಿಸಿವೆ. ಈ ಅವಧಿಯಲ್ಲಿ ನಾವು ರೂಪಿಸಿರುವ ಕಾರ್ಯಕ್ರಮಗಳು ಜನರಲ್ಲಿ ಜನಪರ ಸರ್ಕಾರ, ರೈತರ ಪರವಾದ ಸರ್ಕಾರ, ಎಲ್ಲ ವರ್ಗದವರ ಆಶೋತ್ತರಗಳಿಗೆ ಸ್ಪಂದಿಸುವ ಸರ್ಕಾರ ಎಂಬ ಭಾವನೆ ಮೂಡಿಸಿರುವುದು ತೃಪ್ತಿ ತಂದಿದೆ. ಜೊತೆಗೆ ನಮ್ಮ ಮುಂದಿನ ನಡೆಗೆ ಸ್ಫೂರ್ತಿಯೂ ಆಗಿದೆ.

ರೈತರ ನೋವಿಗೆ ಸ್ಪಂದಿಸಿದ ನಮ್ಮ ಮೈತ್ರಿ ಸರ್ಕಾರ ಈ ನಿಟ್ಟಿನಲ್ಲಿ ಕೆಲವು ಮಹತ್ವಪೂರ್ಣ ಹೆಜ್ಜೆಗಳನ್ನಿಟ್ಟಿದೆ. ಕೃಷಿ ಸಾಲ ಮನ್ನಾ ಯೋಜನೆಯನ್ನು ಅತ್ಯಂತ ಪಾರದರ್ಶಕವಾಗಿ ಜಾರಿಗೊಳಿಸಲಾಗುತ್ತಿದ್ದು, ಈಗಾಗಲೇ 15.5 ಲಕ್ಷ ರೈತರ ಸಾಲ ಮನ್ನಾ ಮಾಡಲಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಎಲ್ಲ ಅರ್ಹ ರೈತರಿಗೂ ಈ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಇಸ್ರೇಲ್ ಮಾದರಿ ಕೃಷಿ, ಸಾವಯವ ಕೃಷಿಗೆ ಒತ್ತು, ರೈತ ಸಲಹಾ ಸಮಿತಿ ಸ್ಥಾಪನೆ ಮತ್ತಿತರ ಉಪಕ್ರಮಗಳು ರೈತರಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಪ್ರಯತ್ನಗಳು. ಮುಂದಿನ ದಿನಗಳಲ್ಲಿಯೂ ಇಂತಹ ಹಲವಾರು ಉಪಕ್ರಮಗಳ ಮೂಲಕ ರೈತರ ಹೆಗಲಿಗೆ ಹೆಗಲು ಕೊಟ್ಟು ಮುನ್ನಡೆಯುವ ಆಶಯ ನಮ್ಮದು.

indian farmer

ಅಂತೆಯೇ ಕೈಗಾರಿಕೆಗಳ ಮೂಲಕ ಉದ್ಯೋಗ ಸೃಷ್ಟಿ, ಬೆಂಗಳೂರು ನಗರ, ಎರಡನೇ ಹಂತದ ನಗರಗಳ ಅಭಿವೃದ್ಧಿ, ನಾಡಿನ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುವ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಉತ್ತಮಪಡಿಸುವತ್ತ ಅಡಿಯಿಟ್ಟಿದ್ದೇವೆ. ಶಾಲೆಗಳ ಮೂಲಸೌಕರ್ಯಕ್ಕೆ ಆದ್ಯತೆ, ಶಿಕ್ಷಣದ ಗುಣಮಟ್ಟದ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದು, ಆಶಾದಾಯಕ ಬೆಳವಣಿಗೆಯನ್ನೂ ಸಾಧಿಸಿದ್ದೇವೆ. ಕಡು ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಿರಂತರವಾಗಿ ಮುಂದುವರಿದಿದೆ.

ಸಾಮಾಜಿಕ ವಲಯದಲ್ಲಿಯೂ ನಮ್ಮ ಕಳಕಳಿ, ಕಾರ್ಯಕ್ರಮಗಳ ರೂಪು ತಳೆದು ದಮನಿತರ ಬದುಕು ಹಸನುಗೊಳಿಸಲು ಮುಂದಾಗಿದೆ. ನಮ್ಮ ಮಿತ್ರ ಪಕ್ಷ ತನ್ನ ಆಡಳಿತಾವಧಿಯಲ್ಲಿ ಜಾರಿಗೊಳಿಸಿರುವ ಮಹತ್ವಾಕಾಂಕ್ಷಿ ಹಾಗೂ ಜನಪ್ರಿಯ ಯೋಜನೆಗಳನ್ನೂ ಸಹ ಮುಂದುವರೆಸಿಕೊಂಡು ಜನಪರ ಆಡಳಿತದ ಹೊಸ ಮಾದರಿ ಸೃಷ್ಟಿಸುವತ್ತ ಮುನ್ನಡೆದಿದ್ದೇವೆ.

Rahul gandhi a

ಪ್ರಕೃತಿ ಮಾತೆಯ ಮುನಿಸಿನಿಂದ ನಾಡು ಪ್ರವಾಹ, ಭೂಕುಸಿತ ಹಾಗೂ ತೀವ್ರ ಬರದಂತಹ ವೈರುಧ್ಯವನ್ನು ಈ ವರ್ಷ ನಮ್ಮ ನಾಡು ಎದುರಿಸಿದೆ. ಈ ಪರಿಸ್ಥಿತಿಯನ್ನು ನಮ್ಮ ಸರ್ಕಾರ, ಕೇಂದ್ರ, ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳ ನೆರವಿನೊಂದಿಗೆ ಯಶಸ್ವಿಯಾಗಿ ನಿರ್ವಹಿಸಿದೆ. ಕಳೆದ ಎರಡು ತಿಂಗಳಿನಿಂದ ಚುನಾವಣಾ ನೀತಿ ಸಂಹಿತೆ ಘೋಷಣೆಯಾದ ನಂತರವೂ ಅಧಿಕಾರಿಗಳು ಬರ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಈ ನಿಟ್ಟಿನಲ್ಲಿ ನಮ್ಮ ಸರ್ಕಾರವನ್ನು ಬೆಂಬಲಿಸಿ ಸಹಕರಿಸಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ, ನನ್ನ ಮಾರ್ಗದರ್ಶಕರೂ ಆದ ನನ್ನ ತಂದೆ, ಮಾಜಿ ಪ್ರಧಾನಿ ಶ್ರೀ ಹೆಚ್.ಡಿ. ದೇವೇಗೌಡ ಅವರಿಗೆ, ಮಿತ್ರ ಪಕ್ಷದ ನೇತಾರರಾದ ಶ್ರೀ ರಾಹುಲ್ ಗಾಂಧಿ, ಶ್ರೀ ಕೆ.ಸಿ. ವೇಣುಗೋಪಾಲ್, ಶ್ರೀ ಸಿದ್ದರಾಮಯ್ಯನವರಿಗೆ, ಎಲ್ಲ ಜನಪ್ರತಿನಿಧಿಗಳಿಗೆ ಹಾಗೂ ಎಲ್ಲ ಅಧಿಕಾರಿ ವೃಂದದವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮ್ಮೆಲ್ಲರ ಸಹಕಾರ, ಸ್ಫೂರ್ತಿ ನಮ್ಮ ಸರ್ಕಾರದ ಮುಂದಿನ 4 ವರ್ಷಗಳ ಅವಧಿಯಲ್ಲಿ ಹೀಗೇ ಮುಂದುವರಿಯಲಿ. ನಾಡಿನ ಪ್ರಗತಿಗೆ ಕೈಜೋಡಿಸಿ ದುಡಿಯೋಣ. ಕಲ್ಯಾಣ ಕರ್ನಾಟಕದ ಆಶಯ, ಸಾಕಾರಗೊಳಿಸೋಣ.

The JDS-INC coalition govt is completing a year tomorrow with pro-people initiatives and schemes for the overall devlpmnt of the state.I thank the people of Karnataka, my cabinet colleagues; ..1/2

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 22, 2019

TAGGED:bengaluruCM HD KumaraswamyCoalition GovernmentcongressEx CM SiddaramaiahPublic TVRahul Gandhiಕಾಂಗ್ರೆಸ್ಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂ ಸಿದ್ದರಾಮಯ್ಯಮೈತ್ರಿ ಸರ್ಕಾರರಾಹುಲ್ ಗಾಂಧಿಸಿಎಂ ಎಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories
Vijay Devarakonda
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ವಿಜಯ್ ದೇವರಕೊಂಡ
Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Latest

ಟೇಕಾಫ್ ವೇಳೆ ಅಹಮದಾಬಾದ್-ದಿಯು ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ಬೆಂಕಿ – ಹಾರಾಟ ಸ್ಥಗಿತ

Public TV
By Public TV
9 minutes ago
IPS Soumyalatha
Bengaluru City

ಧರ್ಮಸ್ಥಳ ಹೂತಿಟ್ಟ ಶವ ಕೇಸ್‌- ಓರ್ವ ಐಪಿಎಸ್ ಅಧಿಕಾರಿಯನ್ನು ಕೈಬಿಡಲು ಸರ್ಕಾರಕ್ಕೆ ಶಿಫಾರಸು

Public TV
By Public TV
26 minutes ago
big bulletin 23 July 2025 part 1
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-1

Public TV
By Public TV
31 minutes ago
big bulletin 23 July 2025 part 2
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-2

Public TV
By Public TV
32 minutes ago
big bulletin 23 July 2025 part 3
Big Bulletin

ಬಿಗ್‌ ಬುಲೆಟಿನ್‌ 23 July 2025 ಭಾಗ-3

Public TV
By Public TV
34 minutes ago
AI ಚಿತ್ರ
Dakshina Kannada

ಉಡುಪಿ, ಮಂಗಳೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ

Public TV
By Public TV
38 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?