ಈಗಲ್ಟನ್ ರೆಸಾರ್ಟಿನಲ್ಲಿ ಸಣ್ಣ ಅಚಾತುರ್ಯವಾಗಿರೋದು ನಿಜ: ಸಿಎಂ ಎಚ್‍ಡಿಕೆ

Public TV
1 Min Read
CM HDK RESORT

ಬೆಂಗಳೂರು: ರೆಸಾರ್ಟಿನಲ್ಲಿ ಕಾಂಗ್ರೆಸ್ ಶಾಸಕರ ಕಿತ್ತಾಟ ಪ್ರಕರಣದಲ್ಲಿ ಕಾನೂನಿನ ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಮಾತನಾಡಿದ ಸಿಎಂ, ಕಾಂಗ್ರೆಸ್ ಸಭೆಯಲ್ಲಿ ಸಣ್ಣ ಅಚಾತುರ್ಯವಾಗಿರುವದನ್ನು ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಎರಡು ದಿನಗಳಿಂದ ಸಿದ್ದಗಂಗಾ ಮಠದಲ್ಲಿ ಇದ್ದೆ. ಆದ್ದರಿಂದ ನನ್ನ ಗಮನ ಮಠದ ಕಡೆ ಇತ್ತು. ಇಂದು ಆನಂದ್ ಸಿಂಗ್ ಅವರನ್ನು ಭೇಟಿ ಮಾಡುತ್ತೇನೆ ಎಂದರು.

cm hdk

ಘಟನೆ ಬಗ್ಗೆ ಮಾಹಿತಿ ಪಡೆದಿದ್ದು, ಪ್ರಕರಣದಲ್ಲಿ ಸರ್ಕಾರವನ್ನ ದುರುಪಯೋಗ ಪಡಿಸಿಕೊಳ್ಳೋದಿಲ್ಲ ಎಂದು ವೇಳೆ ಸ್ಪಷ್ಟಪಡಿಸಿದರು. ಕಾನೂನಿನ ವ್ಯಾಪ್ತಿಯಲ್ಲಿ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆ ಜನಪ್ರತಿನಿಧಿಗಳ ಮೇಲೆ ವಿಶ್ವಾಸ ಕಡಿಮೆ ಮಾಡುತ್ತದೆ. ಇಂತಹ ವಾತಾವರಣ ನಿರ್ಮಾಣ ಆಗದಂತೆ ಕ್ರಮಕೈಗೊಳ್ಳಲಾಗುವುದು.

ಈ ಸಮಸ್ಯೆ ತಿಳಿಗೊಳಿಸಲು ನನ್ನದೇ ಆದ ವೈಯಕ್ತಿವಾಗಿ ರೀತಿಯಲ್ಲಿ ಪ್ರಯತ್ನ ಮಾಡುತ್ತೇನೆ. ಒಂದು ಕುಟುಂಬ ಅಂದ ಮೇಲೆ ಜಗಳ ಇರುತ್ತದೆ. ಅಣ್ಣ-ತಮ್ಮಂದಿರು ಗಲಾಟೆ ಮಾಡಿಕೊಳ್ಳೋದಿಲ್ಲವಾ? ಇದನ್ನ ಬಗೆಹರಿಸಲು, ತಿಳಿಗೊಳಿಸಲು ಕ್ರಮವಹಿಸುತ್ತೇನೆ. ಘಟನೆ ಬಗ್ಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸಲು ನನ್ನದೇ ರೀತಿಯಲ್ಲಿ ವೈಯಕ್ತಿಕವಾಗಿ ತಿಳಿಗೊಳಿಸುತ್ತೇನೆ ಎಂದರು.

EAGLETON RESORT CONGRESS

ಟಿ.ನರಸೀಪುರ ತಾಲೂಕಿನಲ್ಲಿ 11ನೇ ಕುಂಭಮೇಳ ಹಿನ್ನಲೆ ಪೂರ್ವ ಸಿದ್ಧತಾ ಸಭೆ ನಡೆಸಲಾಯಿತು. ಸಿಎಂ ಕುಮಾರಸ್ವಾಮಿ, ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಸ್ವಾಮೀಜಿ, ಸುತ್ತೂರು ಶ್ರೀಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ವೇಳೆ ಸಚಿವರಾದ ಜಿಟಿ ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್, ಮೈಸೂರು ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿ, ಅಗ್ನಿಶಾಮಕ ದಳ ಮುಖ್ಯಸ್ಥರು, ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಫೆಬ್ರವರಿ 17 ರಿಂದ 19 ವರೆಗೆ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *