Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಫೋನ್ ಕದ್ದಾಲಿಕೆ ಸಣ್ಣ ಸಾಕ್ಷಿ ನೀಡಿದ್ರೂ ಕ್ರಮ: ಬಿಎಸ್‍ವೈಗೆ ಸಿಎಂ ಸವಾಲು

Public TV
Last updated: August 29, 2018 3:21 pm
Public TV
Share
2 Min Read
hdk BSY
SHARE

ರಾಮನಗರ: ರಾಜ್ಯ ಸರ್ಕಾರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎನ್ನುವುದಕ್ಕೆ ಯಡಿಯೂರಪ್ಪನವರು ಯಾವುದೇ ಸಣ್ಣ ಸಾಕ್ಷ್ಯ ನೀಡಿದರೂ ಕೂಡ ನಾನೇ ನೇರ ಕ್ರಮಕೈಗೊಳ್ಳುವುದಾಗಿ ಸಿಎಂ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಜಿಲ್ಲೆಯ ಕೈಲಾಂಚದಲ್ಲಿ ಮಾತನಾಡಿದ ಸಿಎಂ, ಕೇಂದ್ರದಲ್ಲಿ ಅವರದ್ದೇ ಸರ್ಕಾರ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಯಾರ ಯಾರ ಫೋನ್ ಕದ್ದಾಲಿಕೆ ಆಗುತ್ತಿದೆ ಎಂಬುವುದನ್ನು ತನಿಖೆ ನಡೆಸಲು ಅವಕಾಶವಿದ್ದು, ತನಿಖೆ ನಡೆಸಲಿ. ಈ ಹಿಂದೆ ಬಿಜೆಪಿ ಸರ್ಕಾರದ ನಾಯಕರು ತಮ್ಮ ಆಡಳಿತದಲ್ಲಿ ಮಾಡಿದ ಕೆಲಸವನ್ನು ತಲೆಯಲ್ಲಿ ಇಟ್ಟುಕೊಂಡು ಈ ಆರೋಪ ಮಾಡಿರಬೇಕು. ಯಾವುದೇ ಪಕ್ಷದ ಮುಖಂಡರ ಅಥವಾ ವ್ಯಕ್ತಿಯ ಫೋನ್ ಕದ್ದಾಲಿಕೆ ಮಾಡುವ ಚಟವಿಲ್ಲ. ಇಂತಹ ಹವ್ಯಾಸದಲ್ಲಿ ನಾನು ಬೆಳೆದು ಬಂದಿಲ್ಲ. ಈ ಬಗ್ಗೆ ಸಣ್ಣ ಸಾಕ್ಷಿ ತಂದು ಕೊಟ್ಟರು ನಾನೇ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಎಸೆದರು.

HDK VV

ಇದೇ ವೇಳೆ ಕೊಡಗು ಪ್ರವಾಹದಲ್ಲಿ ಉಂಟಾದ ನಷ್ಟದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಈ ಕುರಿತು ವರದಿ ನೀಡಲು ಸೂಚಿಸಲಾಗಿದೆ. ವರದಿ ಬಂದ ಬಳಿಕ ಈ ಕುರಿತು ಕ್ರಮಕೈಗೊಳ್ಳಲಾಗುತ್ತದೆ. ಕೇವಲ ಕೊಡಗು ಮಾತ್ರವಲ್ಲದೇ ಇತರೇ ಜಿಲ್ಲೆಗಳಲ್ಲಿ ಉಂಟಾದ ನಷ್ಟ ಕುರಿತು ಮಾಹಿತಿ ಪಡೆದು ಕ್ರಮಕೈಗೊಳ್ಳಲಾಗುತ್ತದೆ. ಇದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.

ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದ ಬಿಎಸ್‍ವೈ, ಸಮ್ಮಿಶ್ರ ಸರ್ಕಾರ ಎಲ್ಲಿ ಬಿದ್ದು ಹೋಗುತ್ತದೆಯೋ ಎನ್ನುವ ಭೀತಿಯಿಂದ ರಾಜ್ಯಸರ್ಕಾರ ನನ್ನ ಹಾಗೂ ಸಿದ್ದರಾಮಯ್ಯನವರ ಫೋನ್‍ಗಳನ್ನು ಕದ್ದಾಲಿಕೆ ಮಾಡುತ್ತಿವೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಅಲ್ಲದೇ ಕಾಂಗ್ರೆಸ್ಸಿನ ಹಿರಿಯ ನಾಯಕರು ನನ್ನ ಸಂಪರ್ಕದಲ್ಲಿದ್ದಾರೆ. ಲೋಕಸಭಾ ಚುನಾವಣಾ ವೇಳೆಗೆ ಯಾವ ಯಾವ ನಾಯಕರು ಸೇರುತ್ತಾರೆ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದ್ದರು.

BSY PHONE TRAPPING

ಏನಿದು ಫೋನ್ ಟ್ಯಾಪಿಂಗ್?
ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಫೋನ್ ಟ್ಯಾಪಿಂಗ್‍ಗೆ ವಿರೋಧದ ನಡುವೆಯೂ ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಅಂದಿನ ಕಾಂಗ್ರಸ್ಸಿನ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಅತ್ಯಾಧುನಿಕ ತಂತ್ರಜ್ಞಾನದ ದೂರವಾಣಿ ಕರೆ ಹಾಗೂ ಸಂಭಾಷಣೆಗಳ ಸಂಪೂರ್ಣ ಮಾಹಿತಿ ನೀಡುವ ಎರಡು ಸಾಧನಗಳನ್ನು ಖರೀದಿ ಮಾಡಲಾಗಿತ್ತು. ಅವುಗಳಲ್ಲಿ ಒಂದನ್ನು ರಾಜ್ಯ ಗುಪ್ತಚರ ಇಲಾಖೆಯಲ್ಲಿ ಇರಿಸಿದ್ದಾರೆ. ಇಂತಿಷ್ಟು ಮೀಟರ್ ಪರಿಧಿಯಲ್ಲಿ ಈ ಸಾಧನವನ್ನು ಅಳವಡಿಸಿ ಅದರಲ್ಲಿ ನಿಗಧಿತ ಫೋನ್ ನಂಬರ್‍ಗಳನ್ನು ಅನ್ನು ನಮೂದಿಸಿದರೆ, ಆ ನಂಬರಿನ ಒಳ ಮತ್ತು ಹೊರ ಕರೆಗಳ ಸಂಭಾಷಣೆಗಳನ್ನು ಯಥಾವತ್ತಾಗಿ ಕೇಳಬಹುದಾಗಿದೆ. ಅಲ್ಲದೇ ಅವುಗಳನ್ನು ಧ್ವನಿಮುದ್ರಿಕೆ ಕೂಡ ಮಾಡಬಹುದಾಗಿದೆ.

ಮಾಹಿತಿಗಳ ಪ್ರಕಾರ ಕಾಂಗ್ರೆಸ್‍ನ 15 ಶಾಸಕರು ಹಾಗೂ ಒಬ್ಬ ಸಚಿವರು ಸೇರಿದಂತೆ ಇಬ್ಬರು ಜೆಡಿಎಸ್ ಒಬ್ಬರು ಹಾಗೂ ಮೂವರು ಮಾಜಿ ಶಾಸಕರ ಫೋನ್ ಕದ್ದಾಲಿಕೆ ನಡೆದಿದ್ದು, ಸಂಭಾಷಣೆಯಲ್ಲಿ ಸಂಪುಟ ವಿಸ್ತರಣೆ ಗಣೇಶ ಹಬ್ಬಕ್ಕೆ ಮೊದಲು ಆಗದಿದ್ದರೆ, ಲೋಕಸಭಾ ಚುನಾವಣೆಗೂ ಮುನ್ನವೇ ಸರ್ಕಾರಕ್ಕೆ ಆಪತ್ತು ಬರುವ ಸೂಚನೆ ಇದೆ. ಸಾಧ್ಯವಾದರೆ ಬದಲಿ ಸರ್ಕಾರವನ್ನು ರಚನೆ ಮಾಡೋಣ, ಇಲ್ಲವೇ ಹೊಸದಾಗಿ ಚುನಾವಣೆ ಎದುರಿಸುವ ಕುರಿತು ದಾಖಲಾಗಿದೆ ಎನ್ನಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:bs yeddyurappaCM HD Kumaraswamycongressphone tampingramanagaraಕಾಂಗ್ರೆಸ್ಪಬ್ಲಿಕ್ ಟಿವಿಪಬ್ಲಿಕ್ ಟಿವಿ Public tvಫೋನ್ ಕದ್ದಾಲಿಕೆಬಿಎಸ್‍ವೈಬಿಜೆಪಿರಾಮನಗರಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
24 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

Shivam Death ElectricShock
Bengaluru City

ಕಲ್ಯಾಣಮಂಟಪದ ಏರ್ ಕೂಲರ್‌ನಿಂದ ಎಲೆಕ್ಟ್ರಿಕ್ ಶಾಕ್ – 4 ವರ್ಷದ ಮಗು ದುರ್ಮರಣ

Public TV
By Public TV
11 minutes ago
bengaluru stambede 1
Court

ಬೆಳಗ್ಗಿನ ಜಾವ 4 ಗಂಟೆ ವರೆಗೆ ಕೆಲಸ ಮಾಡಿದ್ದ ಪೊಲೀಸರಿಗೆ ಮತ್ತೆ ಬಂದೋಬಸ್ತ್‌ ನೀಡಲು ಆಗ್ತಿತ್ತಾ? – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

Public TV
By Public TV
22 minutes ago
Chinnaswamy Stampede
Bengaluru City

Chinnaswamy Stampede Case – ಆರ್‌ಸಿಬಿ ಫ್ರಾಂಚೈಸಿ, ಕೆಎಸ್‌ಸಿಎ ವಿರುದ್ಧ FIR

Public TV
By Public TV
39 minutes ago
RCB
Bengaluru City

Stampede Case | ಮೃತಪಟ್ಟ 11 ಸಂತ್ರಸ್ತರ ಕುಟುಂಬಗಳಿಗೆ RCB ಆಡಳಿತ ಮಂಡಳಿಯಿಂದ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ

Public TV
By Public TV
1 hour ago
BY Vijayendra
Bengaluru City

ಸಿಎಂ, ಡಿಸಿಎಂ, ಸಚಿವರಿಗೆ ಪ್ರಚಾರದ ಹುಚ್ಚೇ ಜಾಸ್ತಿ: ಹಾಲಿ‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಆಗಬೇಕು: ವಿಜಯೇಂದ್ರ ಆಗ್ರಹ

Public TV
By Public TV
2 hours ago
Mandya Death 3
Districts

ಮಂಡ್ಯ | ಮದ್ವೆಗೆ ಹುಡುಗಿ ನೋಡಿಕೊಂಡು ಬೆಂಗಳೂರಿಗೆ ಹೋದವನು ಮನೆಗೆ ಹಿಂತಿರುಗಿದ್ದು ಶವವಾಗಿ…

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?