Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಂಭೀರವಾಗಿ ಪರಿಶೀಲಿಸುವೆ – ಪಬ್ಲಿಕ್ ಟಿವಿ ಗ್ರಾಮ ‘ವಾಸ್ತವ’ ವರದಿಗೆ ಸಿಎಂ ಸ್ಪಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಂಭೀರವಾಗಿ ಪರಿಶೀಲಿಸುವೆ – ಪಬ್ಲಿಕ್ ಟಿವಿ ಗ್ರಾಮ ‘ವಾಸ್ತವ’ ವರದಿಗೆ ಸಿಎಂ ಸ್ಪಂದನೆ

Bengaluru City

ಗಂಭೀರವಾಗಿ ಪರಿಶೀಲಿಸುವೆ – ಪಬ್ಲಿಕ್ ಟಿವಿ ಗ್ರಾಮ ‘ವಾಸ್ತವ’ ವರದಿಗೆ ಸಿಎಂ ಸ್ಪಂದನೆ

Public TV
Last updated: June 5, 2019 4:26 pm
Public TV
Share
3 Min Read
CM HDK 1
SHARE

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ನಡೆಸಿದ್ದ ವೇಳೆ ಕೈಗೊಂಡಿದ್ದ ಗ್ರಾಮ ವಾಸ್ತವ್ಯದ ಕುರಿತು ಪಬ್ಲಿಕ್ ಟಿವಿ ವರದಿ ಮಾಡಿತ್ತು. ಗ್ರಾಮ ವಾಸ್ತವ್ಯದ ಲೋಪ ದೋಷಗಳು ಏನು? ಯಾವೆಲ್ಲಾ ಗ್ರಾಮಗಳಲ್ಲಿ ಅಭಿವೃದ್ಧಿ ಆಗಿದೆ. ಇಂದಿಗೂ ಗ್ರಾಮದಲ್ಲಿ ಯಾವೆಲ್ಲಾ ಸಮಸ್ಯೆಗಳು ಇದೆ ಎಂಬುವುದರ ವಾಸ್ತವತೆಯನ್ನು ತೆರೆದಿಟ್ಟಿತ್ತು.

ಪಬ್ಲಿಕ್ ಟಿವಿಯ ವರದಿಯ ನೋಡಿರುವ ಸಿಎಂ ಕುಮಾರಸ್ವಾಮಿ ಅವರು ವರದಿಯ ಸಕರಾತ್ಮಕ ಅಂಶಗಳನ್ನು ಸ್ವೀಕರಿಸಿ, ಗ್ರಾಮಗಳ ಕುಂದು ಕೊರತೆಗಳ ನಿವಾರಣೆಗೆ ಕಾರ್ಯ ನಿರ್ವಹಿಸುತ್ತೇನೆ. ಅಲ್ಲದೇ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅಧಿಕಾರ ವ್ಯಾಪ್ತಿಯಲ್ಲಿ ಕಾರ್ಯಗಳನ್ನು ಕೈಗೊಳ್ಳುತ್ತೇನೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.

reality check 7

ಪಬ್ಲಿಕ್ ಟಿವಿ ವರದಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಿದ್ದ ಗ್ರಾಮದಗಳಲ್ಲಿ ಇಂದಿಗೂ ಯಾವ ಸಮಸ್ಯೆಗಳಿವೆ ಎಂಬುವುದನ್ನು ವಿಸ್ತಾವರವಾಗಿ ವಿವರಿಸಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆಯುತ್ತೇನೆ. ಅಧಿಕಾರಿಗಳು, ಸ್ಥಳೀಯ ನಾಯಕರ ಗಮನಕ್ಕೆ ತಂದು ಕಾರ್ಯಗಳನ್ನು ಮಾಡುತ್ತೇನೆ. ಮುಂದಿನ ಕಾರ್ಯಕ್ರಮಗಳಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗುವುದನ್ನು ಅನುಸರಿಸಲು ಖಂಡಿತ ಪ್ರಯತ್ನಿಸುವೆ ಎಂದಿದ್ದಾರೆ. ಇದನ್ನು ಓದಿ: ಸಿಎಂ ವಾಸ್ತವ್ಯ ಮಾಡಿದ್ದ ಗ್ರಾಮಗಳ ಸ್ಥಿತಿ ಈಗ ಹೇಗಿದೆ? ಎಷ್ಟು ಭರವಸೆ ಪೂರ್ಣವಾಗಿದೆ? – ಕಂಪ್ಲೀಟ್ ವರದಿ ಓದಿ

ಸಿಎಂ ಹೇಳಿಕೆಯಲ್ಲಿ ಏನಿದೆ?
ನಾನು ಗ್ರಾಮ ವಾಸ್ತವ್ಯ ಮಾಡುವೆನೆಂದು ಘೋಷಿಸಿದ ದಿನದಿಂದ ಮಾಧ್ಯಮಗಳಲ್ಲಿ ನಾನು 2006-07 ರ ಅವಧಿಯಲ್ಲಿ ವಾಸ್ತವ್ಯ ಮಾಡಿದ ಗ್ರಾಮಗಳ ಸ್ಥಿತಿ-ಗತಿ, ಕುಟುಂಬಗಳ ಕುರಿತು ವರದಿಗಳನ್ನು ಪ್ರಕಟಿಸುತ್ತಿರುವುದನ್ನು ಗಮನಿಸುತ್ತಿರುವೆ. ಈ ಹಿನ್ನೆಲೆಯಲ್ಲಿ ಎರಡು ಮಾತು:

ಗ್ರಾಮ ವಾಸ್ತವ್ಯ ಎನ್ನುವುದು ಯಾವುದೇ ಜನಪ್ರಿಯತೆ ಗಿಟ್ಟಿಸುವ ಗಿಮಿಕ್ ಅಲ್ಲ. ಈ ಪರಿಕಲ್ಪನೆಯ ಮೂಲ ಪುರುಷನೂ ನಾನಲ್ಲ. ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಿದ್ದು ಆಕಸ್ಮಿಕವಾಗಿ, ಪ್ರವಾಹ ಪೀಡಿತ ಕೃಷ್ಣಾ ನದಿ ದಂಡೆಯ ಪಿ.ಕೆ. ನಾಗನೂರಿನಿಂದ ಎನ್ನುವುದು ನಿಮಗೆಲ್ಲಾ ತಿಳಿದ ವಿಚಾರ. ಗ್ರಾಮ ವಾಸ್ತವ್ಯ ಎಂಬ ಪದವನ್ನು ಚಾಲ್ತಿಗೆ ತಂದವರೂ ನಮ್ಮ ಮಾಧ್ಯಮ ಮಿತ್ರರೇ. ಆದರೆ ಈ ಸಂದರ್ಭದಲ್ಲಿ ಜನರು ತೋರಿದ ಪ್ರೀತಿ, ವಿಶ್ವಾಸ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ. ಜನರ ಸಮಸ್ಯೆಗಳು, ಬದುಕಿನ ಕಟು ವಾಸ್ತವಗಳನ್ನು ಅರಿಯಲು ನೆರವಾಗಿದೆ. ಸರ್ಕಾರದಿಂದ ಆಗಬೇಕಾದ್ದು ಏನು ಎಂಬ ಬಗ್ಗೆ ನೇರ, ಸರಳವಾದ ಅತ್ಯುತ್ತಮ ಸಲಹೆಗಳೂ ಬಂದಿವೆ.

reality check 6

ಸಾರಾಯಿ ನಿಷೇಧ, ಲಾಟರಿ ನಿಷೇಧ, ಸಾಲ ಮನ್ನಾ, ಸಾವಿರಕ್ಕೂ ಹೆಚ್ಚು ಪ್ರೌಢಶಾಲೆಗಳು, 500ಕ್ಕೂ ಹೆಚ್ಚು ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆ, ಗ್ರಾಮಗಳ ಸಮಗ್ರ ಅಭಿವೃದ್ಧಿಯ ಪರಿಕಲ್ಪನೆಯ ಸುವರ್ಣ ಗ್ರಾಮ ಯೋಜನೆ – ಇವೆಲ್ಲಾ ಗ್ರಾಮವಾಸ್ತವ್ಯದ ಫಲಶ್ರುತಿಗಳು. ನನ್ನ ಅಧಿಕಾರಾವಧಿಯ ನಂತರ ಸುವರ್ಣ ಗ್ರಾಮ ಯೋಜನೆ ಪರಿಣಾಮಕಾರಿಯಾಗಿ ಜಾರಿಗೆ ಬಾರದೇ ಇರುವುದು ವಿಷಾದನೀಯ.

ಗ್ರಾಮ ವಾಸ್ತವ್ಯದ ಮುಖ್ಯ ಗುರಿ, ಆಡಳಿತ ಯಂತ್ರದ ಕಾರ್ಯವೈಖರಿ ಅರಿಯುವುದು. ಸರ್ಕಾರ ರೂಪಿಸಿದ ಯೋಜನೆ ಫಲಕಾರಿಯೇ? ಜನರ ಅಭಿಪ್ರಾಯವೇನು ಎಂಬುದನ್ನು ಅರಿಯುವುದು, ಸುತ್ತಲಿನ ಗ್ರಾಮಗಳ ಜನರೂ ಸೇರುತ್ತಾರೆ. ಅವರಿಂದ ಅಹವಾಲು ಸ್ವೀಕರಿಸಿ ಪರಿಹರಿಸುವುದು. ಕಾನೂನು ವ್ಯಾಪ್ತಿಯಲ್ಲಿ ಇವುಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಕೆಲವು ಮನವಿಗಳನ್ನು ಪರಿಗಣಿಸಲು ಸಾಧ್ಯವಾಗದೆ ಇರಬಹುದು. ಇಂಥವುಗಳನ್ನು ನೀವು ಮತ್ತೆ ಗಮನಕ್ಕೆ ತರುತ್ತಿದ್ದೀರಿ. ಖಂಡಿತವಾಗಿಯೂ ಅವುಗಳನ್ನು ಗಂಭೀರವಾಗಿ ಪರಿಶೀಲಿಸುವೆ. ಆ ಗ್ರಾಮದ ಅಭಿವೃದ್ಧಿ ಗ್ರಾಮ ವಾಸ್ತವ್ಯದ ಫಲಶ್ರುತಿಯ ಒಂದು ಭಾಗವಷ್ಟೆ. ಅದೇ ಕೇಂದ್ರ ಗುರಿಯಲ್ಲ.

reality check 5

ಜನರಿಗೆ ಅಗತ್ಯವಿರುವ ಯೋಜನೆಗಳನ್ನು ಜಾರಿಗೊಳಿಸಿದಾಗ ಅವು ಸಹಜವಾಗಿಯೇ ಯಶಸ್ವಿಯಾಗುತ್ತವೆ. ಅದೇ ರೀತಿ ಯೋಜನೆಗಳನ್ನು ರೂಪಿಸಿ, ಸರ್ಕಾರ ಜನರ ಮೇಲೆ ಹೇರಿದರೆ ಯಶಸ್ವಿಯಾಗದು. ಈ ನಿಟ್ಟಿನಲ್ಲಿ ಗ್ರಾಮ ವಾಸ್ತವ್ಯ ಪ್ರಮುಖ ಪಾತ್ರ ವಹಿಸುತ್ತದೆ ಎನ್ನುವುದು ನನ್ನ ಅನುಭವ.

ಅಂತೆಯೇ ಎಚ್‍ಐವಿ ಪೀಡಿತ ಕುಟುಂಬವೊಂದರ ಮನೆಯಲ್ಲಿ ನಾನು ವಾಸ್ತವ್ಯ ಹೂಡಿದ್ದರಿಂದ ಆ ಕುಟುಂಬ ಊರನ್ನೇ ತೊರೆದಿದೆ ಎಂದು ವರದಿಯಾಗಿದೆ. ಇದು ನಿಜಕ್ಕೂ ದುರದೃಷ್ಣಕರ. ಎಚ್‍ಐವಿ/ ಏಯ್ಡ್ಸ್ ಬಗ್ಗೆ ಜನರಿಗಿರುವ ಅಂಧ ವಿಶ್ವಾಸವನ್ನು ದೂರ ಮಾಡುವ ಉದ್ದೇಶದಿಂದ ಏಯ್ಡ್ಸ್ ನಿಯಂತ್ರಣ ಮಂಡಳಿ ಅಧಿಕಾರಿಗಳ ಮನವಿಯ ಮೇರೆಗೆ ಅಲ್ಲಿ ವಾಸ್ತವ್ಯ ಮಾಡಿದ್ದೆ. ಆದರೆ ಸಮಾಜ ಇದನ್ನು ಸಕಾರಾತ್ಮಕವಾಗಿ ಸ್ವೀಕರಿಸಿಲ್ಲ ಎನ್ನುವುದು ನಿಜಕ್ಕೂ ಬೇಸರದ ಸಂಗತಿ. ಆದರೆ ವೈಯಕ್ತಿಕವಾಗಿಯೂ ನಾನು ಆ ಕುಟುಂಬಕ್ಕೆ ನೆರವಾಗಿದ್ದು, ಅದನ್ನು ಇಲ್ಲಿ ಚರ್ಚಿಸಲು ಹೋಗುವುದಿಲ್ಲ. ಮತ್ತೊಮ್ಮೆ ಆ ಕುಟುಂಬ ವನ್ನು ಸಂಪರ್ಕಿಸಿ ಹೇಗೆ ನೆರವಾಗಬಹುದು ಎಂದು ಪರಿಶೀಲಿಸುವೆ.

https://www.youtube.com/watch?v=YgZ7K9ZSD2E

ಮಾಧ್ಯಮಗಳು ಪ್ರಕಟಿಸುತ್ತಿರುವ ವರದಿಗಳಲ್ಲಿರುವ ಸಕಾರಾತ್ಮಕ ಸಲಹೆಗಳನ್ನು ಮುಕ್ತ, ಪ್ರಾಂಜಲ ಮನಸ್ಸಿನಿಂದ ಸ್ವೀಕರಿಸುವೆ. ಮುಂದಿನ ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಾಗುವುದನ್ನು ಅನುಸರಿಸಲು ಖಂಡಿತ ಪ್ರಯತ್ನಿಸುವೆ ಎಂದಿದ್ದಾರೆ.

TAGGED:CM KumaraswamyDevelopmentgrama vastavaiyaPress StatementPublic TVPublic TV Reportಅಭಿವೃದ್ಧಿಗ್ರಾಮ ವಾಸ್ತವ್ಯಪತ್ರಿಕಾ ಹೇಳಿಕೆಪಬ್ಲಿಕ್ ಟಿವಿಪಬ್ಲಿಕ್ ಟಿವಿ ವರದಿಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Public TV celebrates 14th anniversary
Bengaluru City

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಸೈನಿಕರಿಗೆ ವಾರ್ಷಿಕೋತ್ಸವ ಅರ್ಪಣೆ

Public TV
By Public TV
41 minutes ago
Hassan Heart Attack
Districts

ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Public TV
By Public TV
41 minutes ago
Sindhura Sammana
Bagalkot

ಪಬ್ಲಿಕ್‌ ಟಿವಿಗೆ 14ರ ಸಂಭ್ರಮ – ವೀರ ಯೋಧರಿಗೆ ಸಿಂಧೂರ ಸಮ್ಮಾನ

Public TV
By Public TV
1 hour ago
Bengaluru Kempegowda International Airport 4
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

Public TV
By Public TV
1 hour ago
Metro Redline
Bengaluru City

ರಾಜ್ಯಕ್ಕೆ ಕೇಂದ್ರದ ಶಾಕ್‌ – ರೆಡ್ ಲೈನ್‌ ಮೆಟ್ರೋ, ಡಬಲ್ ಡೆಕ್ಕರ್ ಪ್ಲ್ಯಾನ್‌ಗೆ ಬ್ರೇಕ್‌

Public TV
By Public TV
2 hours ago
Public TV 1
Bengaluru City

ನಿಮ್ಮ ʻಪಬ್ಲಿಕ್‌ ಟಿವಿʼ 14ನೇ ವಾರ್ಷಿಕೋತ್ಸವ ಸಂಪನ್ನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?