ಗೋ ಬ್ಯಾಕ್ ನಿಖಿಲ್ ಅಭಿಯಾನಕ್ಕೆ ಮಹತ್ವ ಕೊಡಬೇಕಿಲ್ಲ- ಕುಮಾರಸ್ವಾಮಿ

Public TV
1 Min Read
NIKHIL HDK

– ಜನರ ನಾಡಿಮಿಡಿತ ಅರ್ಥಮಾಡ್ಕೊಂಡಿದ್ದೇನೆ ಅಂದ್ರು ನಿಖಿಲ್

ಚಿಕ್ಕಮಗಳೂರು: ನಟ ನಿಖಿಲ್ ಕುಮಾರಸ್ವಾಮಿಯವರು ಬರಬೇಕು ಅನ್ನೋರು ಇರ್ತಾರೆ. ಹೋಗ್ಬೇಕು ಅನ್ನೋರು ಇರ್ತಾರೆ. ಇದಕ್ಕೆಲ್ಲ ದೊಡ್ಡ ಮಹತ್ವ ಕೊಡಬೇಕಿಲ್ಲ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಹೇಳಿದ್ದಾರೆ.

ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿನ ಜನತೆಗೆ ಒಳಿತಾಗಲಿ ಎಂದು ದೇವಾಲಯಕ್ಕೆ ಬಂದಿದ್ದೇನೆ. ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ನಿಖಿಲ್ ಬರಬೇಕು ಹಾಗೂ ಹೋಗ್ಬೇಕು ಅನ್ನೋರು ಇರುತ್ತಾರೆ. ಇದಕ್ಕೆಲ್ಲ ದೊಡ್ಡ ಮಹತ್ವ ಕೊಡಬೇಕಿಲ್ಲ. ಪೂರ್ವಸಿದ್ಧತೆ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಇಂತಹ ಕೆಲಸ ಮಾಡುತ್ತಾರೆ ಎಂದು ನಿಖಿಲ್ ಸ್ಪರ್ಧೆ ವಿರೋಧಿಸುವವರಿಗೆ ಟಾಂಗ್ ನೀಡಿದ್ದಾರೆ.

vlcsnap 2019 03 07 14h37m18s248

ವೋಟು ಹಾಕುವವರು ಎಲ್ಲೋ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ಮಾಡುವ ವಿಂಗ್ ಇದೆ. ನಿಜವಾದ ಪ್ರೀತಿ ವಿಶ್ವಾಸ ಇಟ್ಟವರು ವೋಟು ಮಾಡುತ್ತಾರೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಗೆಲುತ್ತೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ರು.

ಇದೇ ವೇಳೆ ತಮ್ಮ ಸ್ವ ಕ್ಷೇತ್ರ ರಾಮನಗರದಲ್ಲಿ ಗನ್ ಹಿಡಿದು ರೌಡಿಸಂ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಾರ್ವಜನಿಕ ಸ್ಥಳದಲ್ಲಿ ಬಂದೂಕು ಹಿಡಿದು ಯಾರಾದರೂ ಓಡಾಡುತ್ತಿದ್ದರೆ ಪೊಲೀಸ್ ಇಲಾಖೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ. ಜನರನ್ನ ಭಯ ಬೀಳಿಸುವಂತಹ ಪ್ರಯತ್ನ ಮಾಡಿದವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡುತ್ತಿದ್ದೇನೆ ಅಂದ್ರು.

NIKHIL HDK

ಇದೇ ಸಂದರ್ಭದಲ್ಲಿ ಮಾತನಾಡಿದ ನಿಖಿಲ್, ಇದು ನಾವು ನಂಬಿಕೊಂಡಿರುವ ದೇವಸ್ಥಾನವಾಗಿದೆ. ಶಾರದಾಂಬೆ ಹಾಗೂ ಜಗದ್ಗುರುಗಳ ಆಶೀರ್ವಾದಕ್ಕೆ ಬಂದಿದ್ದೇವೆ. ಶ್ರೀಗಳ ಜೊತೆ ದೊಡ್ಡವರ ನಂಟು ಹಿಂದಿನಿಂದಲೂ ಇದೆ. ಗುರುಗಳು ಹಾಗೂ ತಾಯಿಯ ಆಶೀರ್ವಾದ ತಂದೆಯನ್ನ ಇಂದು ಈ ಸ್ಥಾನದಲ್ಲಿ ಕೂರಿಸಿದೆ. ಪಕ್ಷದ ವರಿಷ್ಠರು, ಕಾರ್ಯಕರ್ತರು ಹಾಗೂ ಶಾಸಕರ ಜೊತೆ ಚರ್ಚಿಸಿ ತಿರ್ಮಾನಿಸಿದ್ದಾರೆ. ಮಂಡ್ಯ ಜನರ ನಾಡಿ ಮಿಡಿತವನ್ನ ಅರ್ಥಮಾಡಿಕೊಂಡಿದ್ದೇನೆ. ಹಾಗಾಗಿ ಪಕ್ಷ ಟಿಕೆಟ್ ಕೊಡಲು ಮುಂದಾಗಿದೆ. ಮಂಡ್ಯ ಜನತೆಯ ಸೇವೆ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *