Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕೋವಿಡ್ ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧ – ಮಕ್ಕಳಿಗೆ ಜ್ವರ, ಶೀತ ಇದ್ರೆ ರಜೆ ಕೊಡಲು ಸಿಎಂ ಸೂಚನೆ

Public TV
Last updated: May 26, 2025 9:16 pm
Public TV
Share
3 Min Read
Siddaramaiah Covid Meeting
SHARE

– ಗರ್ಭಿಣಿಯರು, ವೃದ್ಧರಿಗೆ ಮಾಸ್ಕ್ ಕಡ್ಡಾಯ
– ಸಾರ್ವಜನಿಕರ ಅನುಕೂಲಕ್ಕೆ ಕೊರೊನಾ ಸಹಾಯವಾಣಿ

ಬೆಂಗಳೂರು: ಮಹಾಮಾರಿ ಕೋವಿಡ್ (Covid-19) ಎದುರಿಸಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ವಯಸ್ಕರು, ಬಾಣಂತಿ ಹಾಗೂ ಮಕ್ಕಳ ಆರೋಗ್ಯ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಿಎಂ (Siddaramaiah) ಖಡಕ್ ಸೂಚನೆ ನೀಡಿದ್ದಾರೆ.

ಕೋವಿಡ್‌ಗೆ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ (Health Department) ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು, ತಜ್ಞರು ಮತ್ತು ಸಚಿವರುಗಳಿಂದ ಮಾಹಿತಿ ಪಡೆದರು. ಎಂತಹದ್ದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರುವಂತೆ ಸಿಎಂ ಸೂಚನೆ ನೀಡಿದರು. ಇದನ್ನೂ ಓದಿ: ಮಂಡ್ಯದಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಒಳಹರಿವು ಹೆಚ್ಚಳ

ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೋವಿಡ್ ಕಾರ್ಯಪಡೆಯ ಮುಖ್ಯಸ್ಥರಿಂದ ಮಾಹಿತಿ ಪಡೆದ ಸಿಎಂ, ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೂ ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದೆ. ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ. ಸಾರಿ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರ ಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಇದನ್ನೂ ಓದಿ: ಶಾಂತಿಯುತವಾಗಿ ಬದುಕಬೇಕಾದ್ರೆ ರೊಟ್ಟಿ ತಿನ್ನಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ರೆಡಿ ಇರುತ್ತೆ: ಮೋದಿ ವಾರ್ನಿಂಗ್‌

ಮಕ್ಕಳಿಗೆ ಜ್ವರ ಕೆಮ್ಮು ಮುಂತಾದ ಲಕ್ಷಣಗಳು ಕಂಡು ಬಂದರೆ ಶಾಲೆಗೆ ಕಳುಹಿಸದಂತೆ ಪೋಷಕರು ಕ್ರಮ ವಹಿಸಲು, ಶಾಲಾ ಕಾಲೇಜು ಮಂಡಳಿಗಳು ನಿಗಾ ವಹಿಸಲು ಸೂಚಿಸುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ, ಪರಿಸ್ಥಿತಿ ಎದುರಿಸಲು ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಮೂಲಭೂತ ಸೌಕರ್ಯಗಳು ಕಡ್ಡಾಯವಾಗಿರುವಂತೆ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಮೆಟ್ರೋ ಕಾಮಗಾರಿ ಸ್ಥಳಗಳಲ್ಲಿ ಸುಗಮ ಸಂಚಾರಕ್ಕೆ ಮುಖ್ಯರಸ್ತೆ, ಸರ್ವಿಸ್ ರಸ್ತೆ ವಿಲೀನ – ಡಿಕೆಶಿ ಸ್ಥಳ ಪರಿಶೀಲನೆ

ಸಿಎಂ ಸೂಚನೆ ಏನು?
* ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.
* ಸದ್ಯಕ್ಕೆ ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಿ.
* ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು.
* ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.
* ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ, ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.
* ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಆರೋಗ್ಯಕರ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು.
* ಬಾಣಂತಿ ಹಾಗೂ ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಸಭೆಯಲ್ಲಿ ಉಪಸ್ಥಿತರಿದ್ದ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.
* ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೊರೊನಾ ಸಹಾಯವಾಣಿ ಪ್ರಾರಂಭ ಮಾಡಲು ಸೂಚನೆ ನೀಡಿದರು.
* ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸುವಂತೆ ಸೂಚಿಸಿದರು.
* ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಧೋರಣೆ ಇರಬಾರದು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆಸ್ಪತ್ರೆಗಳೂ ಸರ್ವ ಸನ್ನದ್ಧವಾಗಿ ಇರುವಂತೆ ಸೂಚಿಸಿದರು.
* ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸೂಚಿಸಿದರು.
* ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಈಗಾಗಲೇ ಪಾಲಿಸುತ್ತಿದ್ದು, ರೂಪಾಂತರಿ ಕೊರೊನಾ ವೈರಾಣುವಿಗೆ ಸಂಬಂಧಿಸಿದಂತೆ ಮುನ್ನೆಚ್ಚರಿಕೆಯಾಗಿ ರೋಗ ನಿಯಂತ್ರಣ ವ್ಯಾಕ್ಸಿನ್‌ಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಸೂಚಿಸಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ಶುರುವಾದ ಅರ್ಧ ಗಂಟೆಯ ನಂತರವೇ ಪಾಕಿಸ್ತಾನಕ್ಕೆ ಮಾಹಿತಿ ನೀಡಿದ್ದೆವು: ಜೈಶಂಕರ್

TAGGED:bengaluruCoronaCovidhealthhealth departmentsiddaramaiahಆರೋಗ್ಯಕೊರೊನಾಕೋವಿಡ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Beguru Apartment Skeleton
Bengaluru City

ಬೆಂಗ್ಳೂರಿನ ಅಪಾರ್ಟ್ಮೆಂಟ್‌ನಲ್ಲಿ ಅಸ್ಥಿಪಂಜರಗಳು ಪತ್ತೆ

Public TV
By Public TV
5 minutes ago
HD Kumaraswamy 1
Bengaluru City

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣ – ಹೆಚ್‌ಡಿಕೆಗೆ ಬಿಗ್ ರಿಲೀಫ್

Public TV
By Public TV
21 minutes ago
Mumbai Rain
Latest

ಮುಂಬೈ, ಪುಣೆಯಲ್ಲಿ ಇಂದು ಭಾರೀ ಮಳೆ ಸಾಧ್ಯತೆ – IMD

Public TV
By Public TV
32 minutes ago
spicejet
Latest

ತಿರುಪತಿಗೆ ಹೊರಟಿದ್ದ ವಿಮಾನ ವಾಪಸ್‌ – ಹೈದರಾಬಾದ್‌ನಲ್ಲಿ ಯೂಟರ್ನ್‌ ಹೊಡೆದ ಸ್ಪೈಸ್‌ಜೆಟ್‌ ಫ್ಲೈಟ್‌

Public TV
By Public TV
33 minutes ago
kamal haasan supreme court
Court

Thug Life | ಹಿಂಸಾಚಾರ, ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಯಾಕಿಲ್ಲ – ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

Public TV
By Public TV
38 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾಗಿದ್ದಕ್ಕೆ ಸಾಕ್ಷ್ಯ ಸಿಕ್ಕಿದೆ – ನ್ಯಾ.ವರ್ಮಾ ವಜಾಗೆ ಸುಪ್ರೀಂ ಸಮಿತಿ ಶಿಫಾರಸು

Public TV
By Public TV
44 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?