ಮಂಡ್ಯ ಜಿಲ್ಲೆಗೆ ಸಿಎಂ ಹೆಚ್‍ಡಿಕೆ, ಮಾಜಿ ಸಿಎಂ ಬಿಎಸ್‍ವೈ ಪ್ರವಾಸ!

Public TV
1 Min Read
KUMARASWAMY 12

ಮಂಡ್ಯ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕಾಗಿ ಇಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ.

ಮಂಡ್ಯದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಲ್ಲಿ ಆಯೋಜನೆ ಮಾಡಿರುವ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಕ್ಷದ ಅಭ್ಯರ್ಥಿ ಸಿದ್ದರಾಮಯ್ಯ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸುತ್ತಿದ್ದಾರೆ. ಯಡಿಯೂರಪ್ಪ ಅವರೊಂದಿಗೆ ಆರ್ ಅಶೋಕ್, ತೇಜಸ್ವಿನಿ ರಮೇಶ್ ಹಾಗೂ ಜಿಲ್ಲೆಯ ಸ್ಥಳೀಯ ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ. ಸಭೆಯ ನಂತರ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮುಖಂಡರು ಮತ್ತೊಮ್ಮೆ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಶ್ರೀರಂಗಪಟ್ಟಣ ದಸರಾ ಉದ್ಘಾಟನೆಗೆ ಆಗಮಿಸುತ್ತಿದ್ದು, ಮಧ್ಯಾಹ್ನ 2.30 ಕ್ಕೆ ಶ್ರೀರಂಗಪ್ಟಣದ ಕಿರಂಗೂರು ಬನ್ನಿ ಮಂಟಪದ ಬಳಿ ಚಾಲನೆ ನೀಡಲಿದ್ದಾರೆ. ಈಗಾಗಲೇ ಮೈಸೂರಿನ ದಸರಾ ಆನೆಗಳಾದ ಅಭಿಮನ್ಯು, ವರಲಕ್ಷ್ಮಿ ಹಾಗೂ ಕಾವೇರಿ ಆನೆಗಳು ಶ್ರೀರಂಗಪಟ್ಟಣದಲ್ಲಿ ಬೀಡು ಬಿಟ್ಟಿವೆ. ಉಪ ಚುನಾವಣೆ ನೀತಿ ಸಂಹಿತೆ ಇರುವುದರಿಂದ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರೂ ಸರ್ಕಾರದ ಸಾಧನೆ ಕುರಿತು ಹಾಗೂ ಮತದಾರರಿಗೆ ಯಾವುದೇ ರೀತಿಯ ಭರವಸೆ ನೀಡಬಾರದು ಎಂದ ಚುನಾವಣಾ ಆಯೋಗ ಷರತ್ತು ವಿಧಿಸಿದೆ. ಹೀಗಾಗಿ ಕಾರ್ಯಕ್ರಮ ಉದ್ಘಾಟನೆಯಲ್ಲಿ ಪಾಲ್ಗೊಂಡರೂ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯವಾಗಿ ಏನನ್ನು ಮಾತನಾಡುವಂತಿಲ್ಲ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *