ಪೊಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ

Public TV
1 Min Read
TMK HD KUMARASWAMY

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಲಿಂಗೈಕ್ಯದಿಂದ ಹಿಡಿದು ಕ್ರಿಯಾ ವಿಧಾನವರೆಗೂ ಅಚ್ಚುಕಟ್ಟಾಗಿ ಬಂದೋಬಸ್ತ್ ಒದಗಿಸಿದ ಪೊಲೀಸ್ ಇಲಾಖೆಗೆ ಸಿಎಂ ಕುಮಾರಸ್ವಾಮಿ ಧನ್ಯವಾದ ತಿಳಿಸಿದ್ದಾರೆ.

ಶ್ರೀಗಳಿಗೆ ಸರ್ಕಾರದ ಗೌರವ ವಂದನೆ ಸಲ್ಲಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಭಕ್ತರು ಶ್ರೀಗಳ ದರ್ಶನ ಹಾಗೂ ಅಂತಿಮ ಕ್ರಿಯಾ ವಿಧಾನವರೆಗೂ ಪೊಲೀಸ್ ಇಲಾಖೆಗೆ ಸಹಕಾರ ನೀಡಿ ಶಾಂತಿಯಿಂದ ನಡೆದುಕೊಂಡ ಕಾರಣ ಧನ್ಯವಾದ ತಿಳಿಸಿದರು. ಅಲ್ಲದೇ ಸೂಕ್ತ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿ ಔರಾದ್ಕಾರ್ ವರದಿ ಜಾರಿ ಮಾಡುವುದಕ್ಕೆ ಶ್ರಮಿಸುತ್ತೇನೆ ಎಂದು ಹೇಳಿದರು.

TMK HD KUMARASWAMY 1

ರಾತ್ರಿಯೆಲ್ಲಾ ಮಠದ ಎನ್‍ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರು ರಾತ್ರಿ ಇಡೀ ನಿಂತು ಶ್ರಮವಹಿಸಿದ್ದೀರಾ. ರಾಜ್ಯ ಸರ್ಕಾರ ಪೊಲೀಸರ ಅಭಿವೃದ್ಧಿಗಾಗಿ ಶ್ರಮಿಸುತ್ತದೆ. ಮಠದ ಆವರಣದಲ್ಲಿ ಈ ಕುರಿತು ಭರವಸೆ ನೀಡುತ್ತಿದ್ದು, ಔರಾದ್ಕಾರ್ ವರದಿ ಜಾರಿ ಮಾಡುವ ಕಾರ್ಯ ಮಾಡಲಾಗುತ್ತದೆ. ಅಲ್ಲದೇ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಕುರಿತು ರಾಷ್ಟ್ರಪತಿ ಹಾಗೂ ಪ್ರಧಾನಿಯನ್ನು ಖುದ್ದು ಭೇಟಿ ಮಾಡಿ ಶಿಪಾರಸ್ಸು ಮಾಡುತ್ತೇನೆ. ಈ ಬಗ್ಗೆ ಭಕ್ತರಿಗೆ ಭರವಸೆ ನೀಡುತ್ತೇನೆ ಎಂದು ಸಿಎಂ ತಿಳಿಸಿದರು.

ಮುಂದಿನ ಸಮಯದಲ್ಲೂ ಮಠಕ್ಕೆ ಆಗಮಿಸುವ ಭಕ್ತರಿಗೆ ಸೌಲಭ್ಯ ಕಲ್ಪಿಸಿಕೊಡಲಾವುದು. ನಾಡಿಗೆ ಪೊಲೀಸ್ ಇಲಾಖೆ ಸಲ್ಲಿಸಿರುವ ಸೇವೆಗೆ ರಾಜ್ಯದ ಜನರು ಕೂಡ ಅಭಿನಂದನೆ ಸಲ್ಲಿಸುತ್ತಾರೆ. ನಿಮ್ಮ ಉತ್ತಮ ಸೇವೆ ಹೀಗೇ ಮುಂದುವರಿಯಲಿ ಎಂದು ಮನವಿ ಮಾಡುತ್ತೇನೆ ಎಂದರು.

https://www.youtube.com/watch?v=nE4fxo3zMMQ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *