ಎಚ್‍ಡಿಡಿ ಮನೆಗೆ ಬಂದ ಸಾರಾ ಮಹೇಶ್ ಮೇಲೆ ಸಿಎಂ ಗರಂ

Public TV
1 Min Read
hdk cm

ಬೆಂಗಳೂರು: ಮಂಡ್ಯ ಹಾಗೂ ತುಮಕೂರಿನಲ್ಲಿ ಸೋಲು ಕಂಡಿದ್ದ ಹಿನ್ನೆಲೆಯಲ್ಲಿ ಸಿಎಂ ಕುಮಾರಸ್ವಾಮಿ ಭಾರೀ ತಲೆ ಕಡೆಸಿಕೊಂಡಿದ್ದಾರೆ. ಈ ಬಗ್ಗೆ ಚರ್ಚೆ ಮಾಡಲು ದೇವೇಗೌಡರ ಮನೆಗೆ ಭೇಟಿ ನೀಡಿದ್ದರು. ಇದೇ ವೇಳೆ ಅಲ್ಲಿಗೆ ಬಂದ ಸಚಿವ ಸಾ.ರಾ ಮಹೇಶ್ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.

ಮಂಡ್ಯ ಮತ್ತು ತುಮಕೂರಿನಲ್ಲಿ ಹಿನ್ನಡೆಯಾದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಸುಮಾರು ಎರಡು ಗಂಟೆಯಿಂದ ತಾಜ್ ಹೋಟೆಲ್‍ನಲ್ಲಿಯೇ ಇದ್ದರು. ಬಳಿಕ ಮುಂದೇನು ಎಂದು ಚರ್ಚೆ ಮಾಡಲು ಸಿಎಂ ಪದ್ಮನಾಭನಗದಲ್ಲಿರುವ ದೇವೆಗೌಡರ ಮನೆಗೆ ಭೇಟಿ ನೀಡಿದ್ದರು.

mys sara mahesh

ಕುಮಾರಸ್ವಾಮಿ ಮನೆಗೆ ಭೇಟಿ ನೀಡಿದ್ದ ವೇಳೆ ವೈಎಸ್‍ವಿ ದತ್ತ ಹಾಗೂ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಫಾರೂಕ್, ಸಾ.ರಾ ಮಹೇಶ್ ಅವರು ಕೂಡ ಆಗಮಿಸಿದ್ದರು. ಈ ವೇಳೆ ಚುನಾವಣೆಯಲ್ಲಿ ಮಗ ನಿಖಿಲ್ ಸೋತಿದ್ದಕ್ಕೆ ಸಿಎಂ ಕುಮಾರಸ್ವಾಮಿ ಸಚಿವ ಸಾರಾ ಮಹೇಶ್ ವಿರುದ್ಧ ತಮ್ಮ ಸಿಟ್ಟನ್ನು ಹೊರ ಹಾಕಿದ್ದಾರೆ.

Share This Article