Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಪೊಲೀಸ್ ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ 3 ತಾಸು ಫುಲ್ ಕ್ಲಾಸ್

Public TV
Last updated: June 22, 2018 5:05 pm
Public TV
Share
2 Min Read
karnataka police cm kumaraswamy 1
SHARE

ಬೆಂಗಳೂರು: ಕೊಲೆ ಮಾಡಲು ಪೊಲೀಸರೇ ಸುಪಾರಿ ತೆಗೆದುಕೊಳ್ಳುತ್ತಾರಾ? ಕರ್ನಾಟಕ ಪೊಲೀಸ್ ಎಂದರೆ ಎಷ್ಟು ಮರ್ಯಾದೆ ಇತ್ತು. ಆದರೆ ಪೊಲೀಸ್ ಇಲಾಖೆಯ ಮರ್ಯಾದೆಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದೀರಾ ಎಂದು ಪ್ರಶ್ನಿಸಿ ಸಿಎಂ ಕುಮಾರಸ್ವಾಮಿ ಅವರು ಪೊಲೀಸ್ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ರಾಜ್ಯ ಪೊಲೀಸ್ ಇಲಾಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದರು. ಈ ವೇಳೆ ರಾಜ್ಯದಲ್ಲಿ ನಡೆದಿರುವ ಕೆಲ ಘಟನೆಗಳನ್ನು ಉದಾಹರಿಸಿದ ಸಿಎಂ ಈ ಕುರಿತು ಮಾಹಿತಿ ನೀಡುವಂತೆ ಐಜಿಪಿ ರಾಮಚಂದ್ರರಾವ್ ಸೇರಿದಂತೆ ಇತರೇ ಅಧಿಕಾರಿಗಳನ್ನು ಪ್ರಶ್ನಿಸಿದರು.

karnataka police cm kumaraswamy 2

ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಗಳ ಜೊತೆ ನಡೆಸಿದ ಸಭೆಯಲ್ಲಿ ಡಿಸಿಎಂ ಹಾಗೂ ಗೃಹಸಚಿವ ಪರಮೇಶ್ವರ್, ಡಿಜಿ ಐಜಿಪಿ ನೀಲಮಣಿರಾಜು ಸೇರಿದಂತೆ ಎಲ್ಲಾ ಐಪಿಎಸ್ ಅಧಿಕಾರಿಗಳು, ಎಡಿಜಿಪಿಗಳು, ಐಜಿಪಿಗಳು, ಡಿಐಜಿಗಳು ಭಾಗವಹಿಸಿದ್ದರು.

ಸಭೆಯಲ್ಲಿ ಮುಖ್ಯವಾಗಿ ಕಾನೂನು ಸುವ್ಯವಸ್ಥೆ, ಗೌರಿಲಂಕೇಶ್ ಹತ್ಯೆ ಪ್ರಕರಣ, ಭೀಮಾತೀರದ ನಕಲಿ ಎನ್ ಕೌಂಟರ್ ನಲ್ಲಿ ಪೊಲೀಸರ ಭಾಗಿ ಕುರಿತಂತೆ ಚರ್ಚೆ ನಡೆಸಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ಬೆಂಗಳೂರು ನಗರದ ಅಪರಾಧ ಪ್ರಕರಣಗಳು, ಅಕ್ರಮ ಲೈವ್ ಬ್ಯಾಂಡ್ ಗಳ ಬಗ್ಗೆ ಚರ್ಚೆ ನಡೆಸಿದ ಅವರು ರಾಜಧಾನಿಯಲ್ಲಿ ನಡೆಯುತ್ತಿರುವ ಅಪರಾಧ ಪ್ರಕರಣಗಳಿಗೆ ಬ್ರೇಕ್ ಹಾಕುವಂತೆ ಸೂಚನೆ ನೀಡಿದರು.

ಮುಲಾಜಿಲ್ಲದೆ ಕಾರ್ಯನಿರ್ವಹಿಸಿ:
ಇದೇ ವೇಳೆ ಪೊಲೀಸರ ಮೇಲೆ ಉಂಟಾಗುವ ಒತ್ತಡದ ಕುರಿತು ಮಾತನಾಡಿದ ಸಿಎಂ, ಸಮ್ಮಿಶ್ರ ಸರ್ಕಾರ ನಿಮಗೆ ಸಾಕಷ್ಟು ಒತ್ತಡ ಆಗಬಹುದು. ಒತ್ತಡ ಸಹಿಸಿಕೊಂಡು ಕೆಲಸ ಮಾಡಬೇಕು. ಆದರೆ ಯಾರ ಒತ್ತಡ ಹಾಗೂ ಮುಲಾಜಿಗೂ ಒಳಗಾಗುವ ಅಗತ್ಯ ಇಲ್ಲ. ಅನಗತ್ಯ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಕಾನೂನು ಸುವ್ಯವಸ್ಥೆಯ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದ ಸಲಹೆ ನೀಡಿದರು.

ಸಭೆಯಲ್ಲಿ ಹಿರಿಯ ಅಧಿಕಾರಿಗಳು 2017-18 ರ ಅವಧಿಯ ಕಾನೂನು ಸುವ್ಯವಸ್ಥೆ ವರದಿ ಮತ್ತು 2018ರ ಉಂಟಾಗಬಹುದಾದ ಕಾನೂನು ಸುವ್ಯವಸ್ಥೆಯ ನಿರೀಕ್ಷಿತ ವಿವರಗಳು ಸೇರಿದಂತೆ ಕಳೆದ ಮೂರು ವರ್ಷಗಳಿಂದ ಗೂಂಡಾ ಆಕ್ಟ್ ನಲ್ಲಿ ದಾಖಲಿಸಿರುವ ಪ್ರಕರಣಗಳ ವಿವರ, ರೌಡಿ ಮತ್ತು ಕೊಮುಗಲಭೆಗೆ ಸಂಬಂಧಪಟ್ಟ ಪ್ರಕರಣಗಳಿಗೆ ಕೈಗೊಂಡ ಕ್ರಮಗಳು, ಮೂರು ವರ್ಷಗಳ ಅವಧಿಯಲ್ಲಿ ಪತ್ತೆ ಹಚ್ಚಿರುವ ಪ್ರಮುಖ ಕೇಸ್ ಗಳ ವಿವರ ಮತ್ತು ಶಿಕ್ಷೆಯಾಗಿರುವ ಕೇಸ್ ಗಳು, ಪ್ರಕರಣ ಪ್ರಮಾಣವನ್ನು ವಿವರವಾಗಿ ಮಾಹಿತಿ ನೀಡಿದರು.

ಸದ್ದು ಮಾಡಿದ ಫೇಕ್ ಎನ್ ಕೌಂಟರ್: ಸಭೆಯಲ್ಲಿ ಪ್ರಮುಖವಾಗಿ ಸಿಎಂ ಕುಮಾರಸ್ವಾಮಿ ಅವರು ಚಡಚಣದಲ್ಲಿ ಪೊಲೀಸ್ ಅಧಿಕಾರಿಗಳೇ ಮಾಡಿದ್ದ ಫೇಕ್ ಎನ್ ಕೌಂಟರ್ ಕುರಿತು ಪ್ರಸ್ತಾಪ ಮಾಡಿ ಪ್ರಶ್ನಿಸಿದರು. ಈ ಕುರಿತು ಐಜಿಪಿ ರಾಮಚಂದ್ರರಾವ್ ಅವರಿಗೆ ಪ್ರಶ್ನೆ ಕೇಳಿದ ಕುಮಾರಸ್ವಾಮಿ ಅವರು, ಪೊಲೀಸರೇ ಕೊಲೆ ಮಾಡಲು ಸುಪಾರಿ ಪಡೆಯುತ್ತರಾ ಎಂದು ಪ್ರಶ್ನಿಸಿದರು. ಈ ವೇಳೆ ಸಿಎಂ ಅವರ ಪ್ರಶ್ನೆಗೆ ಸರಿಯಾದ ಉತ್ತರ ನೀಡಲು ಒದ್ದಾಡಿದರು. ಇದರಿಂದ ಮತ್ತಷ್ಟು ಗರಂ ಆದ ಸಿಎಂ ಕರ್ನಾಟಕ ಪೊಲೀಸ್ ಎಂದರೆ ಎಷ್ಟು ಮರ್ಯಾದೆ ಇತ್ತು. ಪೊಲೀಸ್ ಇಲಾಖೆಯ ಮರ್ಯಾದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜು ಆಗುತ್ತಿದೆ. ಒಬ್ಬ ಕೊಲೆಗಾರ ಪೊಲೀಸರಿಗೆ ಮತ್ತೊಂದು ಕೊಲೆ ಮಾಡಲು ಸುಪಾರಿ ನೀಡುತ್ತಾನೆ ಅಂದರೆ ನೀವೆಷ್ಟು ಬಲಿಷ್ಟರು ಎನ್ನುವುದು ತಿಳಿಯುತ್ತದೆ ಎಂದು ಪ್ರಶ್ನಿಸಿದರು.

https://www.youtube.com/watch?v=DCrqEmuo20U

https://www.youtube.com/watch?v=Gm3fMTv5no4

TAGGED:CM KumaraswamyGauri AssassinationmeetingpolicePublic TVSupariಅಪ್. ಪಬ್ಲಿಕ್ ಟಿವಿಗೌರಿ ಹತ್ಯೆಚಡಚಣಸಭೆಸಿಎಂ ಕುಮಾರಸ್ವಾಮಿ. ಪೊಲೀಸ್ಸುಪಾರಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
13 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
14 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
15 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
16 hours ago

You Might Also Like

2
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-1

Public TV
By Public TV
3 hours ago
1
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-2

Public TV
By Public TV
3 hours ago
3
Big Bulletin

ಬಿಗ್‌ ಬುಲೆಟಿನ್‌ 12 June 2025 ಭಾಗ-3

Public TV
By Public TV
3 hours ago
pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
3 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
3 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?