Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಐಟಿ ದಾಳಿ ನಡೆಯಲಿದೆ ಸಿಎಂ ನಿಖರವಾಗಿ ಊಹಿಸಿದ್ದು ಹೇಗೆ: ರಹಸ್ಯ ರಿವೀಲ್ ಆಯ್ತು

Public TV
Last updated: March 28, 2019 2:44 pm
Public TV
Share
2 Min Read
MYS HDK
SHARE

ಬೆಂಗಳೂರು: ಜೆಡಿಎಸ್ ನಾಯಕರು, ಆಪ್ತರ ಮನೆ ಮೇಲೆ ಗುರುವಾರ ಐಟಿ ದಾಳಿ ನಡೆಯಲಿದೆ ಮೊದಲೇ ಸಿಎಂ ಕುಮಾರಸ್ವಾಮಿ ನಿಖರವಾಗಿ ಹೇಳಿದ್ದು ಹೇಗೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಸಾಧಾರಣವಾಗಿ ಸರ್ಕಾರಿ ಅಧಿಕಾರಿಗಳ ದಾಳಿ ವಿಚಾರ ಗೌಪ್ಯವಾಗಿರುತ್ತದೆ. ಅದರಲ್ಲೂ ಕೇಂದ್ರ ಸರ್ಕಾರ ನಿಯಂತ್ರಣದಲ್ಲಿರುವ ಸಂಸ್ಥೆಗಳು ನಡೆಸುವ ದಾಳಿ ಗೌಪ್ಯವಾಗಿದ್ದು ರಾಜ್ಯ ಸರ್ಕಾರಕ್ಕೆ ತಿಳಿಸಿ ದಾಳಿ ನಡೆಸುವುದಿಲ್ಲ. ಆದರೆ ಸಿಎಂ ಮೊದಲೇ ದಾಳಿ ನಡೆಯಲಿದೆ ಎಂದು ಭವಿಷ್ಯ ನುಡಿದಾಗ ತೆರಿಗೆ ಇಲಾಖೆಯಲ್ಲೇ ಯಾರೋ ಸಿಎಂಗೆ ಮಾಹಿತಿ ನೀಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ ವಿಮಾನ ನಿಲ್ದಾಣದಲ್ಲಿರುವ ಚಾಲಕರು ಸಿಎಂಗೆ ಮಾಹಿತಿ ನೀಡಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

income

ವಿಮಾನ ನಿಲ್ದಾಣದಲ್ಲಿರುವ ಕಾರು ಚಾಲಕರ ಪೈಕಿ ಯಾರೊ ಒಬ್ಬರು ಸಿಎಂ ಆಪ್ತರಿಗೆ ಕರೆ ಮಾಡಿ, ಸಿಆರ್‌ಪಿಎಫ್‌ನ 2 ತುಕಡಿಗಳು ಬೆಂಗಳೂರಿಗೆ ಬಂದಿವೆ. ಅವರು ಇಲ್ಲಿ 100 ಟ್ಯಾಕ್ಸಿಗಳನ್ನು ಒಟ್ಟಿಗೆ ಬಾಡಿಗೆಗೆ ತೆಗೆದುಕೊಳ್ಳುತ್ತಿದ್ದಾರೆ. ನಮಗೆ ಸೂಕ್ತ ಮಾಹಿತಿ ಲಭ್ಯವಾಗುತ್ತಿಲ್ಲ. ನೀವೇ ಚೆಕ್ ಮಾಡಿಕೊಳ್ಳಿ ಎಂದು ತಿಳಿಸಿದ್ದರಂತೆ.

ಈ ಮಾಹಿತಿ ಮಾಹಿತಿಯಿಂದ ತಕ್ಷಣವೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ ಅವರು, ಗುಪ್ತಚರ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದರು. ವಿಮಾನ ನಿಲ್ದಾಣದ ಬಳಿ ಈ ರೀತಿಯ ಬೆಳವಣಿಗೆ ನಡೆಯುತ್ತಿದೆ. ನೀವು ಏನ್ ಮಾಡುತ್ತಿದ್ದೀರಿ ಪರಿಶೀಲನೆ ಮಾಡಿ ಕೂಡಲೇ ಮಾಹಿತಿ ನೀಡಿ ಎಂದು ತಾಕೀತು ಮಾಡಿದ್ದರು.

IT BANG copy

ಸಿಎಂ ಸೂಚನೆಯಿಂದ ಎಚ್ಚೆತ್ತುಕೊಂಡು ಗುಪ್ತಚರ ಇಲಾಖೆಯು ಪರಿಶೀಲನೆ ಆರಂಭಿಸಿತ್ತು. ಈ ವೇಳೆ ಗುಪ್ತಚರ ಇಲಾಖೆಗೆ ಐಟಿ ದಾಳಿಯ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ವಿವಿಧ ನಾಯಕರ ಮನೆಯ ಮೇಲೆ ದಾಳಿ ಮಾಡಲು ಐಟಿ ಅಧಿಕಾರಿಗಳು 200 ಕ್ಯಾಬ್ ಬುಕ್ ಮಾಡಿರುವುದು ತಿಳಿದಿದೆ. ತಕ್ಷಣವೇ ಸಿಎಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದು ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿದ ಮಾತನಾಡಿದ್ದ ಸಿಎಂ, ಐಟಿ ಅಧಿಕಾರಿಗಳಿಗೆ ಜೆಡಿಎಸ್, ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಆಗಿದ್ದು, ಒಬ್ಬರಿಗೆ ಅನುಕೂಲ ಮಾಡಿಕೊಳ್ಳಲು ದಾಳಿಗೆ ಸಿದ್ಧತೆ ನಡೆಸಲಾಗಿದೆ. ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

HDK 1

ಐಟಿ ದಾಳಿ ನಡೆಸುವ ಅಧಿಕಾರಿಯ ಹೆಸರನ್ನು ಪ್ರಸ್ತಾಪ ಮಾಡಿದ ಅವರು, ಐಟಿ ಇಲಾಖೆಯ ಬಾಲಕೃಷ್ಣ (ಐಆರ್‍ಎಸ್ ಅಧಿಕಾರಿ) ಎಂಬವರ ನೇತೃತ್ವದಲ್ಲಿ 250ಕ್ಕೂ ಹೆಚ್ಚು ಅಧಿಕಾರಿಗಳನ್ನು ಕರೆಸಿಕೊಂಡು ದಾಳಿ ಮಾಡಲು ಸಿದ್ಧತೆ ನಡೆಸಿದ್ದಾರೆ. ಐಟಿ ದಾಳಿಯಲ್ಲಿ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ನೆರವು ತೆಗೆದುಕೊಳ್ಳುತ್ತಾರೆ. ಆದರೆ ಅದನ್ನು ಬಿಟ್ಟು ಕೇಂದ್ರದ ಸಿಆರ್ ಪಿಎಫ್ ಕರೆಸಿಕೊಂಡು ದಾಳಿ ಮಾಡಲು ಹೊರಟಿರುವುದು ಬಹಳ ದಿನ ನಡೆಯಲ್ಲ. ಕೇಂದ್ರ ಸರ್ಕಾರದ ಬಿಜೆಪಿ ಪರ ಬಾಲಕೃಷ್ಣ ಅವರು ಬೆಳಗ್ಗೆ 5 ಗಂಟೆಗೆ ದಾಳಿ ಮಾಡಲು ಸಿದ್ಧರಾಗಿದ್ದು, ಇಂತಹ ದಾಳಿಗಳು ನಡೆದರೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

TAGGED:Air port EmployersbengalurubjpCM Kumaraswamycongressit attackjdsPublic TVಏರ್ ಪೋರ್ಟ್ ನೌಕಕರುಐಟಿ ದಾಳಿಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
9 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
15 minutes ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
23 minutes ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
44 minutes ago
Team India Tribute to Plane crash in london
Cricket

ಏರ್ ಇಂಡಿಯಾ ವಿಮಾನ ದುರಂತ – ಕಪ್ಪು ಪಟ್ಟಿ ಧರಿಸಿ ಟೀಂ ಇಂಡಿಯಾ ಆಟಗಾರರಿಂದ ಮೌನಾಚರಣೆ

Public TV
By Public TV
1 hour ago
wild elephant crops destroys
Chamarajanagar

ಚಾ.ನಗರ| ಜಮೀನಿಗೆ ನುಗ್ಗಿ ತೆಂಗು ಬೆಳೆ ನಾಶಪಡಿಸಿದ ಕಾಡಾನೆಗಳ ಹಿಂಡು

Public TV
By Public TV
1 hour ago
https publictv.in i lost my love in a plane crash young man tears in front of the ahmedabad hospital
Latest

ವಿಮಾನ ದುರಂತ | ನಾನು ನನ್ನ ಪ್ರೀತಿ ಕಳೆದುಕೊಂಡೆ – ಆಸ್ಪತ್ರೆ ಮುಂದೆ ಯುವಕನ ಕಣ್ಣೀರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?