ಬೆಂಗಳೂರು: ಮಾಜಿ ಸಚಿವ ತಿಪ್ಪೇಸ್ವಾಮಿ, ಸುಮತೀಂದ್ರ ನಾಡಿಗರ ಹಾಗೂ ಕರುಣಾನಿಧಿ ನಿಧನಕ್ಕೆ ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.
ತಿಪ್ಪೇಸ್ವಾಮಿ ಮತ್ತು ಸುಮೀಂದ್ರ ನಾಡಿಗರ ನಿಧನದ ಸುದ್ದಿ ಕೇಳಿ ನನಗೆ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ನಿಧನದ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಿಎಂ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ
ಕರುಣಾನಿಧಿ ಅವರ ನಿಧನಕ್ಕೆ ಸಿಎಂ ಸಂತಾಪ ಸೂಚಿಸಿ, ದೇವೇಗೌಡರು ಪ್ರಧಾನಿ ಆಗೋದಕ್ಕೆ ಕರುಣಾನಿಧಿ ಪ್ರಮುಖ ಪಾತ್ರವಹಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿ ಸಂತಾಪ ಸೂಚಿಸಿದರು. ಇದನ್ನೂ ಓದಿ: ಹಿರಿಯ ಸಾಹಿತಿ ಡಾ. ಸುಮತೀಂದ್ರ ನಾಡಿಗ ನಿಧನ
ಕರುಣಾನಿಧಿ ದಕ್ಷಿಣ ಭಾರತದ ಪ್ರಮುಖ ಮುತ್ಸದ್ದಿ ರಾಜಕಾರಣಿಯಾಗಿದ್ದು, ಐದು ಬಾರಿ ಸಿಎಂ ಆಗಿ ತಮಿಳುನಾಡಿನ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಕರುಣಾನಿಧಿ ರೈತ ಕುಟುಂಬದಿಂದ ಹುಟ್ಟಿ ಲೇಖಕರಾಗಿ ನಂತರ ರಾಜಕೀಯ ಪ್ರವೇಶ ಮಾಡಿದ್ದರು. ಅವರ ದುಡಿಮೆ ಶ್ರಮ ನಮಗೆಲ್ಲ ಮಾದರಿಯಾಗಿದೆ. ಇದನ್ನೂ ಓದಿ: ತಮಿಳುನಾಡಿನ ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಇನ್ನಿಲ್ಲ
1996ರ ಸಮ್ಮಿಶ್ರ ಸರ್ಕಾರ ರಚನೆ ಆಗಲು ಕರುಣಾನಿಧಿ ಪ್ರಮುಖ ಪಾತ್ರವಹಿಸಿದ್ದರು. ಕನ್ನಡಿಗ ಪ್ರಧಾನಿಯಾಗಲು ಕರುಣಾನಿಧಿ ಬೆಂಬಲ ನೀಡಿದ್ದರು. ಅವರ ಬೆಂಬಲವನ್ನು ಮರೆಯಲು ಸಾಧ್ಯವಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ ಎಂದು ಸಿಎಂ ಸಂತಾಪ ಕೋರಿದ್ದಾರೆ. ಇದನ್ನೂ ಓದಿ: ಬದುಕಿರುವಾಗಲೇ ದಂತಕಥೆಯಂತಿದ್ದ ಕರುಣಾನಿಧಿ ಜೊತೆಗಿನ ಒಡನಾಟವನ್ನು ಹಂಚಿಕೊಂಡ ಎಚ್ಡಿಕೆ