Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬರೀಶ್ ಕುಟುಂಬಕ್ಕೆ ಪರೋಕ್ಷವಾಗಿ ಮಂಡ್ಯ ಟಿಕೆಟ್ ನಿರಾಕರಿಸಿದ ಸಿಎಂ ಎಚ್‍ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಂಬರೀಶ್ ಕುಟುಂಬಕ್ಕೆ ಪರೋಕ್ಷವಾಗಿ ಮಂಡ್ಯ ಟಿಕೆಟ್ ನಿರಾಕರಿಸಿದ ಸಿಎಂ ಎಚ್‍ಡಿಕೆ

Districts

ಅಂಬರೀಶ್ ಕುಟುಂಬಕ್ಕೆ ಪರೋಕ್ಷವಾಗಿ ಮಂಡ್ಯ ಟಿಕೆಟ್ ನಿರಾಕರಿಸಿದ ಸಿಎಂ ಎಚ್‍ಡಿಕೆ

Public TV
Last updated: January 14, 2019 3:53 pm
Public TV
Share
3 Min Read
Ambareesh HDK
SHARE

– ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಸುಳಿವು ಬಿಚ್ಚಿಟ್ಟ ಸಿಎಂ
– ಪೂರ್ವನಿರ್ಧರಿತ ಕಾರ್ಯಕ್ರಮದಿಂದಾಗಿ `ಅಂಬಿ ನಮನ’ಕ್ಕೆ ಗೈರು

ಮಂಡ್ಯ: ರೆಬಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಥವಾ ಪುತ್ರ ಅಭಿಷೇಕ್‍ಗೆ ಮಂಡ್ಯ ಲೋಕಸಭಾ ಟಿಕೆಟ್ ಕೊಡಲು ಸಾಧ್ಯವಿಲ್ಲ ಎಂದು ಸಿಎಂ ಕುಮಾರಸ್ವಾಮಿ ಪರೋಕ್ಷವಾಗಿ ಹೇಳಿದ್ದಾರೆ.

ಅಂಬರೀಶ್ ನಿಧನರಾದ ಹಿನ್ನೆಲೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಅಥವಾ ಅಭಿಷೇಕ್ ಅಂಬರೀಶ್ ಅವರನ್ನು ನಿಲ್ಲಿಸುವ ಬಗ್ಗೆ ಕಾಂಗ್ರೆಸ್ ಚಿಂತನೆ ನಡೆಸಿದೆ ಎನ್ನುವ ಸುದ್ದಿ ಈಗ ಮುನ್ನೆಲೆಗೆ ಬಂದಿದೆ. ಈ ವಿಚಾರವಾಗಿ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಸಿಎಂ, ಅಂಬರೀಶ್ ಕುಟುಂಬ ಕಾಂಗ್ರೆಸ್‍ನಲ್ಲಿದೆ. ರೆಬಲ್ ಸ್ಟಾರ್ ಜೆಡಿಎಸ್ ಪಕ್ಷಕ್ಕೆ ಬಂದಿರಲಿಲ್ಲ. ಆದರೆ ಅವರು ವಿಧವಶರಾಗಿದ್ದಾಗ ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಭಾವನೆಗೆ ಸ್ಪಂದಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿ ಗೌರವ ಸಲ್ಲಿಸಿದ್ದೇನೆ. ಆದರೆ ಜೆಡಿಎಸ್ ಪಕ್ಷಕ್ಕೆ ಅಂಬಿ ಆಪ್ತರಾಗಿದ್ದರೂ ಎನ್ನುವುದು ಸುಳ್ಳು ಎಂದು ಹೇಳುವ ಮೂಲಕ ಮಂಡ್ಯ ಕ್ಷೇತ್ರದ ಟಿಕೆಟ್ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದರು.

Sumalata Abhishek HDK

ಟಿಕೆಟ್‍ಗಾಗಿ ಹೋರಾಡುವುದಕ್ಕೆ ಇದು ಮಹಾಭಾರತದ ಕುರುಕ್ಷೇತ್ರವಲ್ಲ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಯನ್ನು ಪ್ರಕಟ ಮಾಡುತ್ತೇವೆ ಎಂದ ಅವರು, ಮಂಡ್ಯ ಕ್ಷೇತ್ರದ ಅಭ್ಯರ್ಥಿ ಬಗ್ಗೆ ತೀರ್ಮಾನ ಆಗಿಲ್ಲ. ನಮ್ಮ ಕಾರ್ಯಕರ್ತರು ನನ್ನ ಪುತ್ರ ನಿಖಿಲ್ ಕುಮಾರ್ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿ ಯಾರೆಂಬುದನ್ನು ಶೀಘ್ರವೇ ನಿರ್ಧರಿಸುತ್ತೇವೆ ಎಂದರು.

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಲಾನ್ ರೂಪಿಸುತ್ತಿದ್ದೇವೆ. ಜಿಲ್ಲೆಯ ಜನರ ಮೇಲೆ ನಮ್ಮ ಕುಟುಂಬ ವಿಶೇಷ ಪ್ರೀತಿ ಹೊಂದಿದೆ. ಈ ಬಾರಿಯ ಬಜೆಟ್‍ನಲ್ಲಿ ಜಿಲ್ಲೆಗೆ ಕೆಲ ಯೋಜನೆಗಳನ್ನು ಮಾತ್ರ ಕೊಟ್ಟಿದ್ದೇವೆ. ಇದರಿಂದಾಗಿ ಮಂಡ್ಯದ ಅಭಿವೃದ್ಧಿ ವಿಚಾರದಲ್ಲಿ ನಮ್ಮಿಂದ ಅನ್ಯಾಯವಾಗಿದೆ. ಆದರೂ ಕೆಲವರು ಮಂಡ್ಯ, ಹಾಸನ ಬಜೆಟ್ ಎಂದು ಟೀಕೆ ಮಾಡುತ್ತಾರೆ ದೂರಿದರು.

MYS HDK

ನಾನು ಸಿಎಂ ಆಗಲು ಮಂಡ್ಯ ಜನರ ಕೊಡುಗೆ ದೊಡ್ಡದು. ಮಂಡ್ಯ ಮೈಶುಗರ್ ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಬದ್ಧನಾಗಿರುವೆ. ಜಿಲ್ಲೆಯನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದ ಅವರು, ಕೆಆರ್‍ಎಸ್ ಅಣೆಕಟ್ಟು ಒಡೆದು ಹಾಳು ಮಾಡುತ್ತಾರೆ ಅಂತ ಕೆಲವರು ಆರೋಪಿಸುತ್ತಾರೆ. ನಾನು ಹಾಗೇ ಮಾಡಲ್ಲ. ಡಿಸ್ನಿಲ್ಯಾಂಡ್ ಮಾದರಿ ಅಭಿವೃದ್ಧಿಯಿಂದ ಈ ಭಾಗದ ಜನಕ್ಕೆ ಕೆಲಸ ಸಿಗಲಿದೆ ಎನ್ನುವ ವಿಶ್ವಾಸ ನನಗಿದೆ ಎಂದರು.

ಅಂಬಿ ನುಡಿನಮನ ಕಾರ್ಯಕ್ರಮಕ್ಕೆ ಗೈರು ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ, ಅಂಬಿ ನುಡಿನಮನ ಕಾರ್ಯಕ್ರಮ ಯಾರು ಕೇಳಿ ನಿಗದಿ ಮಾಡಿದ್ದರು. ಚರ್ಚೆ ಮಾಡಿ ನಿಗದಿ ಮಾಡದೇ ಏಕಾಏಕಿ ನಿಗದಿ ಮಾಡಿದರೆ ನಾನು ಬರುವುದಕ್ಕೆ ಆಗುತ್ತಾ? ನಾನು ಮುಖ್ಯಮಂತ್ರಿಯಾಗಿದ್ದು ಮೊದಲೇ ಕಾರ್ಯಕ್ರಮಗಳು ಪೂರ್ವ ನಿಗದಿಯಾಗಿರುತ್ತದೆ ಎಂದು ಹೇಳಿದರು.

ambareesh dead body

ಜೆಡಿಎಸ್ ಬಳಿ ಉಳಿದ ಎರಡು ಸಚಿವ ಸ್ಥಾನ ಹಂಚಿಕೆ ಹಾಗೂ ನಿಗಮ ಮಂಡಳಿ ನೇಮಕಾತಿ ಕುರಿತು ಪ್ರತಿಕ್ರಿಯೆ ನೀಡಿ ಕುಮಾರಸ್ವಾಮಿ ಅವರು, ಸೂಕ್ತ ಸಂದರ್ಭ ಬಂದಾಗ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇವೆ. ಆದರೆ ನಿಗಮ ಮಂಡಳಿ ನೇಮಕ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದರು.

ಕಾಂಗ್ರೆಸ್ ಜೊತೆಗೆ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಮೈತ್ರಿ ಮಾಡುತ್ತೇವೆ. ಅದರಲ್ಲಿ ಅನುಮಾನವಿಲ್ಲ. ನಮ್ಮ ಸರ್ಕಾರ ಐದು ವರ್ಷ ಭದ್ರವಾಗಿರುತ್ತದೆ. ಸರ್ಕಾರ ಬೀಳುವ ಪ್ರಶ್ನೆಯೇ ಇಲ್ಲ. ಸರ್ಕಾರ ಬೀಳುತ್ತದೆ ಎನ್ನುವ ವಿಪಕ್ಷ ಶಾಸಕರು ಹಾಗೂ ನಾಯಕರ ಮಾತಿಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ನನ್ನ ಗಮನ ರಾಜ್ಯದ ಅಭಿವೃದ್ಧಿ ಕಡೆಗೆ. ಜನರ ನಿರೀಕ್ಷೆಯನ್ನು ಈಡೇರಿಸದೇ ನಾನು ನಿರ್ಗಮಿಸಲ್ಲ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:abhishekCM KumaraswamycongressjdsLok Sabha ElectionsmandyaPublic TVrebel star ambareeshSumalathaticketಅಂಬರೀಶ್ಅಭಿಷೇಕ್ಕಾಂಗ್ರೆಸ್ಜೆಡಿಎಸ್ಟಿಕೆಟ್ಪಬ್ಲಿಕ್ ಟಿವಿಮಂಡ್ಯಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿಸುಮಲತಾ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

CP Radhakrishnan 2
Bengaluru City

ಬೆಂಗ್ಳೂರಿಗೆ ಉಪರಾಷ್ಟ್ರಪತಿ ಆಗಮನ – ಇಂದು ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

Public TV
By Public TV
7 minutes ago
Belagavi 2
Belgaum

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ – ಸುಪ್ರೀಂ ಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ

Public TV
By Public TV
49 minutes ago
Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
1 hour ago
Lady Influencer Arrest
Bengaluru City

ಲೇಡಿ ಫಿಟ್ನೆಸ್ ಇನ್‌ಫ್ಲೂಯೆನ್ಸರ್‌ಗೆ ಅಶ್ಲೀಲ ಮೆಸೇಜ್ – ಯುವತಿಗಾಗಿ ಹರಿಯಾಣದಿಂದ ಕರ್ನಾಟಕಕ್ಕೆ ಬಂದಿದ್ದ ಆರೋಪಿ ಅರೆಸ್ಟ್

Public TV
By Public TV
1 hour ago
Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
2 hours ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?