Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೆ ಹಂಗಿನ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೆ ಹಂಗಿನ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ

Bengaluru City

ಮತ್ತೆ ಹಂಗಿನ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ

Public TV
Last updated: December 6, 2018 5:53 pm
Public TV
Share
3 Min Read
HDK 1
SHARE

-ನೀಡಿದ ಭರವಸೆ ಈಡೇರಿಸಲು ಆಗಲಿಲ್ಲಾ ಅಂತಾ ಕಣ್ಣೀರು ಹಾಕಿದ್ದೇನೆ

ಬೆಂಗಳೂರು: ಯಾವುದೋ ಹಂಗಿನಲ್ಲಿ ನಾನು ಕೆಲಸ ಮಾಡ್ತಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೆ ಹಂಗಿನ ಬಗ್ಗೆ ಮಾತನಾಡಿದ್ದಾರೆ.

ರೈತರ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ರೈತರ ಸಾಲವನ್ನು 24 ಗಂಟೆಯಲ್ಲಿ ಮನ್ನಾ ಮಾಡಲು ಪ್ರಯತ್ನಿಸುತ್ತಿರುವೆ. ನೀಡಿದ ಭರವಸೆಯನ್ನು ಈಡೇರಿಸಲು ಆಗಲಿಲ್ಲಾ ಅಂತಾ ಕೆಲವೊಮ್ಮೆ ಕಣ್ಣೀರು ಹಾಕಿದ್ದೇನೆ. ಸಾಲಮನ್ನಾ ಮಾಡುವುದು ನಿಶ್ಚಿತ. ಹಾಗಂತ ಸರ್ಕಾರದ ಆಸ್ತಿಯನ್ನು ಮಾರಿ ಸಾಲಮನ್ನಾ ಮಾಡುವುದಿಲ್ಲ ಎಂದು ಹೇಳಿದರು.

ಸಾಲಮನ್ನಾ ನಿಮಿತ್ತ ಐಎಎಸ್ ಅಧಿಕಾರಿ ನೇಮಕ ಮಾಡಿದ್ದು, ಅವರೊಂದಿಗೆ ನಾನು ಕೆಲಸ ಮಾಡುತ್ತಿರುವೆ. ರಾಷ್ಟ್ರೀಯ ಬ್ಯಾಂಕ್‍ಗಳ ಜೊತೆ 10 ಬಾರಿ ಸಭೆ ಮಾಡಲಾಗಿದೆ. ಪರಿಣಾಮ ಬ್ಯಾಂಕ್‍ನವರು ಬಾಂಡ್ ವಿಚಾರವಾಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಅಂತ ತಿಳಿಸಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ನಿರ್ಧಾರ ಹೇಳಿಲ್ಲ ಎಂದು ರಾಷ್ಟ್ರೀಕೃತ ಬ್ಯಾಂಕ್‍ಗಳ ವಿರುದ್ಧ ಸಿಎಂ ಗರಂ ಆದರು.

farmer

ನಾನು ಯಾವುದೇ ಪತ್ರ, ಪುಸ್ತಕ ನೋಡಿ ಸಾಲಮನ್ನಾ ವಿಚಾರ ಹೇಳುವ ಅಗತ್ಯವಿಲ್ಲ. ಏಕೆಂದರೆ ಎಲ್ಲ ವಿಚಾರವೂ ನನ್ನ ತಲೆಯಲ್ಲಿ ಉಳಿದುಬಿಟ್ಟಿದೆ. ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ 21 ಲಕ್ಷ ರೈತರು ಸಾಲ ಪಡೆದಿದ್ದಾರೆ. ಅವರಲ್ಲಿ 2.80 ಲಕ್ಷ ರೈತರು ವಸೂಲಾಗದ ಸಾಲದ ಪ್ರಮಾಣ (ಎನ್‍ಪಿಎ) ಅಕೌಂಟ್ ಗಳಿವೆ. ಇಂತಹ ಖಾತೆಗಳಿಗೆ ಒಂದು ಬಾರಿ ಹಣ ಪಾವತಿಸಿದರೆ ನಮಗೆ ರಿಲ್ಯಾಕ್ಸ್ ಕೊಡುತ್ತೀರಾ ಅಂತ ಕೇಳಿದ್ದೇನೆ. 17 ಲಕ್ಷ ರೈತರ ಸಾಲದಲ್ಲಿ 50 ಸಾವಿರ ಮೊತ್ತದ ಸಾಲಕ್ಕೆ 6,500 ಕೋಟಿ ರೂ. ಹಣ ಮೀಸಲಿಟ್ಟಿದ್ದೇವೆ. ಉಳಿದಂತೆ ರಾಷ್ಟ್ರೀಯ ಬ್ಯಾಂಕ್‍ಗಳಲ್ಲಿರುವ 2 ಲಕ್ಷ ರೂ.ವರೆಗಿನ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದರು.

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ:
ಸಾಲಮನ್ನಾ ಯೋಜನೆ ದೊಡ್ಡ ಕೆಲಸವಾಗಿದೆ. ಯಾವುದೇ ಮಧ್ಯವರ್ತಿಗಳು ಭ್ರಷ್ಟಾಚಾರ ಎಸಗದಂತೆ ಎಚ್ಚರಿಕೆಯಿಂದ ಹಂತ ಹಂತವಾಗಿ ಯೋಜನೆ ಜಾರಿಗೆ ತರಲಾಗುತ್ತಿದೆ. ಒಂದು ವೇಳೆ ಇದರಲ್ಲಿ ಭ್ರಷ್ಟಾಚಾರ ನಡೆದರೆ ನಾನು ಕೋರ್ಟ್ ಮುಂದೆ ಹಾಜರಾಗಿ ಶಿಕ್ಷೆ ಅನುಭವಿಸಬೇಕಾಗುತ್ತದೆ. ರೈತರಿಗೆ ಅನ್ಯಾಯ ಆಗಬಾರದು. ಸಾಲಮನ್ನಾ ಹಣ ರೈತರಿಗೆ ಹೋಗಬೇಕು ಅಂತ ಕೆಲಸ ಮಾಡುತ್ತಿದ್ದೇವೆ. ವೈಜ್ಞಾನಿಕವಾಗಿ ಕೆಲಸ ನಡೆದಿದ್ದು, ಅಧಿಕಾರಿಗಳಿಗೆ ಯಾವುದೇ ಹಂತದಲ್ಲಿಯೂ ಹಣ ಹೊಡೆಯಲು ಅವಕಾಶ ನೀಡಲ್ಲ ಎಂದರು.

CM Farmer Preemeet 1 1

ಹಿಂದಿನ ಸರ್ಕಾರವು 15 ವರ್ಷಕ್ಕೆ ಆಗುವಷ್ಟು ಕೆಲಸಕ್ಕೆ ಆದೇಶ ಮಾಡಿದೆ. ಅದರ ಹಣ ಹೊಂದಿಸುವುದೇ ನಮಗೆ ಕಷ್ಟವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದ ಸಹಕಾರ ಸಂಘಗಳ ಸಾಲಮನ್ನಾ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ನಾನು ನಿಮ್ಮ ಪರ, ಹೋರಾಟ ಬೇಡ:
ಕಬ್ಬು ಬೆಳೆಗಾರರ ಸಮಸ್ಯೆ ವಿಚಾರವಾಗಿ ಮಾತನಾಡಿದ ಸಿಎಂ, ರೈತರ ಜೊತೆ ಸುದೀರ್ಘವಾಗಿ ಸಭೆ ಮಾಡಿದ್ದೇನೆ. ನಾನು ಸಿಎಂ ಆಗುವ ಮುನ್ನ ಸಕ್ಕರೆ ಕಾರ್ಖಾನೆ ಮಾಲೀಕರು 2,000 ಕೋಟಿ ರೂ. ಎಫ್‍ಆರ್ ಪಿ ದರ ನೀಡರಲಿಲ್ಲ. ನಾನು ಅಧಿಕಾರಕ್ಕೆ ಬಂದ ಮೇಲೆ ಮಾಲೀಕರ ಸಭೆ ನಡೆಸಿ ಹಣ ಕೊಡಿಸಲು ಕ್ರಮ ತೆಗೆದುಕೊಂಡಿದ್ದೇನೆ. ಇದರಿಂದಾಗಿ ಈಗ 35 ಕೋಟಿ ರೂ. ಮಾತ್ರ ಬಾಕಿ ಇದೆ ಎಂದು ತಿಳಿಸಿದರು.

CM Farmer Preemeet

ರೈತರು ಕಬ್ಬು ನೀಡುವಾಗ ಸಕ್ಕರೆ ಮಾಲೀಕರ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಸಕ್ಕರೆ ಬೆಲೆ ಕಡಿಮೆ ಆಗಿದ್ದಕ್ಕೆ ಕಡಿಮೆ ಹಣ ಕೊಡುತ್ತೇವೆ ಅಂತ ಮಾಲೀಕರು ಪಟ್ಟು ಹಿಡಿದರು. ಬಳಿಕ ಖರೀದಿ ಮಾಡಿರುವ ಹಣವನ್ನೇ ನೀಡಬೇಕು ಎಂದು ಕೋರ್ಟ್ ಆದೇಶ ನೀಡಿತು. ಅದನ್ನು ಮಾಲೀಕರು ಉಲ್ಲಂಘನೆ ಮಾಡಿದ್ದರೆ ನನಗೆ ಮಾಹಿತಿ ನೀಡಿ, ನಾನು ಕ್ರಮ ಕೈಗೊಳ್ಳುತ್ತೇನೆ ಎಂದು ರೈತರಿಗೆ ಅಭಯ ನೀಡಿರುವೆ ಎಂದರು.

ನಾನು ಇನ್ನೊಂದು ಸಭೆ ಮಾಡುತ್ತೇನೆ. ನಾನು ನೀವು ರಾಜ್ಯ ಬಿಟ್ಟು ಹೋಗಲ್ಲ. ರೈತರು ಸುಮ್ಮನೆ ಹೋರಾಟ ಮಾಡುವುದು ಬೇಡ. ಯಾವುದೇ ಸಮಸ್ಯೆ ಇದ್ದರೂ ನಾನು ಇರುವವರೆಗೂ ನಿಮ್ಮ ಪರವಾಗಿ ಕೆಲಸ ಮಾಡುತ್ತೇನೆ. ಪ್ರತಿಭಟನೆ ಮಾಡಬೇಡಿ ಎಂದು ಸಿಎಂ ರೈತರಿಗೆ ಮನವಿ ಮಾಡಿಕೊಂಡರು.

ಉತ್ತರ ಕರ್ನಾಟಕ ಬಹುತೇಕ ರಾಜಕಾರಣಿಗಳೇ ಸಕ್ಕರೆ ಕಾರ್ಖಾನೆಯ ಮಾಲೀಕರಾಗಿದ್ದಾರೆ. ಇದೇ ದೊಡ್ಡ ಸಮಸ್ಯೆ ಆಗಿರುವುದು. ರೈತರ ಅಮಾಯಕತೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಪ್ರಶ್ನೆ ಮಾಡಿದರೆ, ಏಕೆ ತಲೆ ಕೆಡಿಸಿಕೊಳ್ಳುತ್ತಿರಾ ನಮಗೆ ಪ್ರಶ್ನೆ ಮಾಡುತ್ತಾರೆ. ಎಫ್‍ಆರ್‍ಪಿ ದರ ಕೊಡಬೇಕು ಅಂತ ಮಾಲೀಕರಿಗೆ ಸೂಚನೆ ನೀಡಿದ್ದೇವೆ. ತೂಕದಲ್ಲಿ ಮೋಸ ವಿಚಾರದಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಹೇಳಿದರು.

HDK PRESSMEET WITH FARMERS 3

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:CM Kumaraswamydebtformer cmNationalized BankPublic TVsiddaramaiahಪಬ್ಲಿಕ್ ಟಿವಿಮಾಜಿ ಸಿಎಂರಾಷ್ಟ್ರೀಕೃತ ಬ್ಯಾಂಕ್ಸಾಲಮನ್ನಾಸಿಎಂ ಕುಮಾರಸ್ವಾಮಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories

You Might Also Like

big shock to congress mla rajegowda karnataka high court orders re verification 279 postal votes of sringeri assembly constituency
Bengaluru City

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತ ಮರುಪರಿಶೀಲಿಸಿ, ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ

Public TV
By Public TV
33 minutes ago
Neha Hiremat
Dharwad

ನನ್ನ ಮಗಳ ಹತ್ಯೆಯಲ್ಲಿ ಸಮೀರ್, ಆತನ ಕುಟುಂಬದ ಪಾತ್ರ ಇರಬಹುದು – ನೇಹಾ ಹಿರೇಮಠ್ ತಂದೆ ಶಂಕೆ

Public TV
By Public TV
1 hour ago
Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
2 hours ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
2 hours ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
2 hours ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?