ತಾಳ್ಮೆಯಿಂದ ಇರುವಂತೆ ಹೇಳಿದ್ದೆ, ಆದ್ರೆ ದುಡುಕಿನ ನಿರ್ಧಾರ – ಮಂಡ್ಯ ರೈತನ ಆತ್ಮಹತ್ಯೆ ಬಗ್ಗೆ ಸಿಎಂ ವಿಷಾದ

Public TV
1 Min Read
MND CM

ಚಿಕ್ಕಮಗಳೂರು: ಸಾಲ ಬಾಧೆಯಿಂದ ಬಳಲುತ್ತಿದ್ದ ಮಂಡ್ಯ ರೈತ ಕುಟುಂಬ ಆತ್ಮಹತ್ಯಗೆ ಶರಣಾಗಿರುವ ಕುರಿತು ಸಿಎಂ ಕುಮಾರಸ್ವಾಮಿ ಅವರು ವಿಷಾದ ವ್ಯಕ್ತಪಡಿಸಿದ್ದು, ತಾಳ್ಮೆಯಿಂದ ಇರುವಂತೆ ಅವರಿಗೆ ಹೇಳಿದ್ದೆ. ಆದರೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಅವರಿಗೆ ರೈತ ಕುಟುಂಬ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಮಾಹಿತಿ ಪಡೆದು ಮಾಧ್ಯಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ, ನಂದೀಶ್ ವೈಯಕ್ತಿಕ ವಿಷ್ಯಕ್ಕೆ ಆತ್ಮಹತ್ಯೆ ಮಾಡ್ಕೊಂಡಿದ್ದಾರೆ. 15 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಹೀಗಾಗಿ ತಾಳ್ಮೆಯಿಂದ ಇರುವಂತೆ ಸೂಚಿಸಿದ್ದೆ. ಸಮಸ್ಯೆ ಬಗೆಹರಿಸಲು ಸ್ವಲ್ಪ ಸಮಯವಕಾಶ ಕೇಳಿದ್ದೆ. ಆದರೆ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎಂದು ಶೃಂಗೇರಿಯಲ್ಲಿ ವಿಷಾದ ವ್ಯಕ್ತಪಡಿಸಿದರು.

MND copy

ಜನತಾ ದರ್ಶನಕ್ಕೆ ಹಾಜರಾಗಿದ್ದ ದಂಪತಿ:
ಕುಟುಂಬ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರುವ ದಂಪತಿ 2 ಬಾರಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಆತ್ಮಹತ್ಯೆಗೂ ಮುನ್ನ ದಂಪತಿ ಡೆತ್ ನೋಟ್ ಬರೆದಿಟ್ಟು ಮನವಿ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲೇನಿದೆ?:
ಈ ಹಿಂದೆ ನಾವು ಕುಮಾರಸ್ವಾಮಿಯವರನ್ನು ಭೇಟಿಯಾಗಿ ನನ್ನ ಸಮಸ್ಯೆಯನ್ನು ಹೇಳಿಕೊಂಡಿದ್ದೇನೆ. ಆದ್ರೆ ನಮ್ಮ ಸಮಸ್ಯೆ ಪರಿಹಾರವಾಗಿಲ್ಲ. ಇದೀಗ ನಾವು ಹೇಡಿತನದಿಂದ ಸಾಯ್ತಿಲ್ಲ. ಆದ್ರೆ ಬದುಕೋದಕ್ಕೆ ಸಾಧ್ಯವಾಗುತ್ತಿಲ್ಲ. ಇದಕ್ಕಾಗಿ ನಾವು ಸಾಯ್ತಾ ಇದ್ದೀವಿ. ಕಡೆಯದೊಂದು ನಮ್ಮ ಮನವಿ ಇದೆ. ನಮ್ಮ ಮೃತದೇಹಗಳನ್ನು ಯಾರೂ ಕೂಡ ಮುಟ್ಟಬಾರದು. ನಮ್ಮ ಶವಗಳನ್ನು ಕಾರ್ಪೊರೇಷನ್ ಗೆ ಬಿಸಾಕಿ ಅಂತ ದಂಪತಿ ಡೆತ್ ನೋಟ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

MND 1 1

Share This Article
Leave a Comment

Leave a Reply

Your email address will not be published. Required fields are marked *