Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Bengaluru City

ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Public TV
Last updated: July 23, 2019 6:41 pm
Public TV
Share
3 Min Read
CM HDK
SHARE

– ವಿಧಿಯ ಆಟದಿಂದ ರಾಜಕೀಯಕ್ಕೆ ಬಂದೆ
– ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ

ಬೆಂಗಳೂರು: ಸದನದಲ್ಲಿ ನಾಲ್ಕು ದಿನಗಳಿಂದ ನಡೆದ ಘಟನೆಗಳು, ಮಾತುಗಳು ರಾಜ್ಯದ ಜನರ ಮುಂದಿವೆ. ಅವರು ತಮ್ಮನ್ನು ಕ್ಷಮಿಸುವುದಿಲ್ಲ. ವಿಶ್ವಾಸ ಮತಯಾಚನೆಯಲ್ಲಿ ವಿಪಕ್ಷದ ಯಾವುದೇ ಸದಸ್ಯರು ಭಾಗವಹಿಸಲಿಲ್ಲ. ಇದು ವಿಶೇಷವಾಗಿತ್ತು ಹಾಗೂ ಇತಿಹಾಸ ಕೂಡ ಆಯಿತು ಎಂದು ಸಿಎಂ ಹೇಳಿದ್ದಾರೆ.

ವಿಶ್ವಾಸ ಮತಯಾಚನೆ ಚರ್ಚೆಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲರಿಂದ ಬಂದ ಆದೇಶವನ್ನು ಮತ್ತೆ ಪ್ರಸ್ತಾಪಿಸುವುದಿಲ್ಲ. ನಾವು ಕಾಲ ಹರಣ ಮಾಡುತ್ತಿದ್ದೇನೆ ಅಂತ ಚರ್ಚೆಯಾಗುತ್ತಿದೆ. ಹೌದು, ನಾವು ವಿಶ್ವಾಸ ಮತಯಾಚನೆಯನ್ನು ಮುಂದೂಡಿದ್ದು ನಿಜ. ಆದರೆ ಸಮಯವನ್ನು ವ್ಯರ್ಥ ಮಾಡಿಲ್ಲ. ಸರ್ಕಾರ ಬೀಳಿಸಲು ಮುಂದಾದವವರಿಗೆ ಸ್ವಲ್ಪ ಸಮಯದ ಬಳಿಕ ಬುದ್ಧಿ ಬರುತ್ತೆ ಅಂತ ಕಾದು ನೋಡಿದ್ದೇವೆ. ನಾಲ್ಕು ದಿನಗಳಲ್ಲಿ ನಿಮ್ಮ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದು ನಿಮಗೂ ನೋವು ತಂದೆ ಎಂದು ಸಿಎಂ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ತಿಳಿಸಿದರು.

Ramesh

ನಾನು ಮದುವೆ ಆಗುವುದಾದರೆ ರಾಜಕಾರಣಕ್ಕೆ ಬರಬಾರದು ಅಂತ ಪತ್ನಿ, ಶಾಸಕಿ ಅನಿತಾ ಅವರು ಷರತ್ತು ಹಾಕಿದ್ದರು. ನನಗೂ ರಾಜಕೀಯದಲ್ಲಿ ಆಸಕ್ತಿ ಕೂಡ ಇರಲಿಲ್ಲ. ಆದರೆ ವಿಧಿಯ ಆಟದಿಂದ ರಾಜಕೀಯಕ್ಕೆ ಬಂದುಬಿಟ್ಟೆ. ಜೊತೆಗೆ ಪತ್ನಿಯನ್ನು ಕರೆದುತಂದೆ ಎಂದು ಸದನದಲ್ಲಿ ನಗೆ ಹರಿಸಿದರು.

ವಿಧಾನಸಭೆ ಗ್ಯಾಲರಿಯಲ್ಲಿ ಕುಳಿತು ಕಲಾಪಗಳನ್ನು ನೋಡುತ್ತಿದ್ದೆ. ನನ್ನ ವ್ಯವಹಾರ ಚಿತ್ರರಂಗದಲ್ಲಿ. ಸಿನಿಮಾ ಕ್ಷೇತ್ರದಲ್ಲಿ ಇದ್ದರೂ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹೋರಾಟವನ್ನು ನೋಡುತ್ತಾ ಬೆಳೆದೆ. ಅವರು ಯಾರ ಹಂಗಿನಲ್ಲಿಯೂ ಬದುಕಿಲ್ಲ, ಜನರ ಮಧ್ಯದಲ್ಲಿ ಬೆಳೆದಿದ್ದಾರೆ. ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ವಿಪಕ್ಷ ನಾಯಕರ ವಿರುದ್ಧ ಕಿಡಿಕಾರಿದರು.

ಸಚಿವ, ಸಹೋದರ ಎಚ್.ಡಿ.ರೇವಣ್ಣ ಅವರ ಮೇಲೆ ತಂದೆಯ ಆಶೀರ್ವಾದ ಇದೆ. ನಾನು ರಾಜಕೀಯಕ್ಕೆ ಬರುವುದು ಎಚ್.ಡಿ.ದೇವೇಗೌಡ ಅವರಿಗೆ ಇಷ್ಟವಿರಲಿಲ್ಲ. ಅವರ ವಿರೋಧದ ನಡುವೆಯೂ 1996ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತೆ. ಶಾಸಕರ ಒತ್ತಾಯದ ಮೇರೆಗೆ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾಡಿದೆ. ಅಲ್ಲಿಯೂ ಸೋಲು ಕಂಡೆ. ಆಗಲೇ ರಾಜಕೀಯ ನಿವೃತ್ತಿ ಘೋಷಿಸಲು ಮುಂದಾಗಿದ್ದೆ. ಆದರೆ ಕಾರ್ಯಕರ್ತರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮತ್ತೆ ಬೆಂಬಲಕ್ಕೆ ನಿಂತರು ಎಂದರು.

hdd 1

ಪತ್ನಿಯ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ. ನಾನು ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದಾರೆ. ತಪ್ಪು ಮಾಡಿದಾಗ ಸರಿಪಡಿಸಿಕೊಳ್ಳಲು ಅವಕಾಶ ಕೊಟ್ಟಿದ್ದಾರೆ ಎಂದು ಶಾಸಕಿ ಅನಿತಾ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಸಾರಾ ಮಹೇಶ್ ಅವರ ಬಗ್ಗೆ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಅಸಹ್ಯವಾಗಿ ಮಾತನಾಡಿದ್ದಾರೆ. ಇಂತಹ ಶಾಸಕರು ನಿಮಗೆ ಬೇಕಿತ್ತು ಅಲ್ವಾ ಸಿ.ಟಿ.ರವಿ ಅವರೇ? ಕರೆದುಕೊಂಡು ಹೋಗಿ ಎಂದು ಗುಡುಗಿದರು.

ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ. ಅನೇಕರು ಟ್ವಿಟ್ಟರ್ ವಾಟ್ಸಪ್, ಫೇಸ್‍ಬುಕ್‍ನಲ್ಲಿಯೇ ಕಾಲ ಕಳೆಯುತ್ತಾರೆ. ಕೆಲವರು ಟ್ವೀಟ್ ಮಾಡಿ ಸಿಎಂ ವಿಶ್ವಾಸ ಮತಯಾಚನೆ ಮಾಡದೆ ಕಾಲಹರಣ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಇನ್ನೂ ಕೆಲವರು ತಮಗೆ ತೋಜಿದ್ದನ್ನು ಟ್ವೀಟ್ ಮಾಡುತ್ತಾರೆ ಎಂದು ಕಿಡಿಕಾರಿದರು.

ಸಂತೋಷದಿಂದ ಅಧಿಕಾರ ತ್ಯಜಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿ ಜೊತೆಗೆ ಸೇರಿ 20 ತಿಂಗಳು ಸರ್ಕಾರ ನಡೆಸಿದೆ. ಬಳಿಕ ಅಧಿಕಾರ ಬಿಟ್ಟುಕೊಳ್ಳಲು ಮುಂದಾಗಿದ್ದೆ. ಆದರೂ ನನ್ನನ್ನು ವಚನ ಭ್ರಷ್ಟ ಎಂದು ಆರೋಪಿಸುತ್ತಾರೆ. ಇದು ನನಗೆ ಭಾರೀ ನೋವು ತರುತ್ತಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳ ವಿರುದ್ಧ ಕಿಡಿ:
ಮಾಧ್ಯಮಗಳಿಂದ ನಮಗೆ ಖಾಸಗಿ ಜೀವನವೇ ಇಲ್ಲದಂತಾಗಿದೆ. ಸರ್ಕಾರ ರಚನೆ ಆದಾಗಿನಿಂದ ಮಾಧ್ಯಮಗಳು ಡೆಡ್‍ಲೈನ್ ಕೊಡುತ್ತಲೇ ಬಂದವು ಎಂದು ಗುಡುಗಿದರು. ದಿನಬೆಳಗಾದರೆ ಸರ್ಕಾರ ನನ್ನ ವಿರುದ್ಧ ಸುದ್ದಿಗಳು ಬರುತಿತ್ತು. ಆದರು ನಾನು ಇದ್ದೇನೆ ಅಂದರೆ ಅದು ತಂದೆ ತಾಯಿ ಪುಣ್ಯ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ಮಾಧ್ಯಮಗಳು ಕೊಟ್ಟ ಡೆಡ್‍ಲೈನ್‍ನಲ್ಲಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಾನು ಇಂತಹ ಕಷ್ಟದ ಸಮಯದಲ್ಲಿ ಅಲ್ಪಸ್ವಲ್ಪ ಕೆಲಸ ಮಾಡಿದ್ದೇನೆ ಅದಕ್ಕೆ ಕಾರಣ ಅಧಿಕಾರಿಗಳ ಸಹಕಾರ ಎಂದು ಮೆಚ್ಚಗೆ ವ್ಯಕ್ತಪಡಿಸಿದರು.

ಮೋದಿ ವಿರುದ್ಧ ಕಿಡಿ:
ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದರು. ನಾವು ರೈತರ ಸಾಲಮನ್ನಾ ಮಾಡಲು ಶ್ರಮಿಸಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಈಗಲೂ 1,500 ಕೋಟಿ ರೂ. ಇದೆ. ನಾಡಿನ ರೈತರಿಗೆ ನನ್ನಿಂದ ಯಾವುದೇ ಮೋಸವಾಗಿಲ್ಲ ಎಂದು ಹೇಳಿದರು.

TAGGED:bjpcmcongressjdsPublic TVSpeaker Ramesh Kumartrust voteಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಶ್ವಾಸ ಮತಯಾಚನೆಸಿಎಂಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
7 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
7 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
17 minutes ago
Mudigere Police Station
Chikkamagaluru

PUC ಹುಡ್ಗ, SSLC ಹುಡ್ಗಿ ಪ್ರೇಮಕ್ಕೆ ಲವ್ ಜಿಹಾದ್ ಆರೋಪ, ಹಲ್ಲೆ – ದೂರಿಗೆ ಪ್ರತಿದೂರು

Public TV
By Public TV
39 minutes ago
Gold
Bengaluru City

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Public TV
By Public TV
48 minutes ago
Bidar Medical Student Suicide
Bidar

ನೇಣು ಬಿಗಿದು ಎಂಬಿಬಿಎಸ್‌ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?