Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Bengaluru City

ರಾಜ್ಯದ ಜನರು ನಮ್ಮನ್ನು ಕ್ಷಮಿಸುವುದಿಲ್ಲ: ಸಿಎಂ

Public TV
Last updated: July 23, 2019 6:41 pm
Public TV
Share
3 Min Read
CM HDK
SHARE

– ವಿಧಿಯ ಆಟದಿಂದ ರಾಜಕೀಯಕ್ಕೆ ಬಂದೆ
– ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ

ಬೆಂಗಳೂರು: ಸದನದಲ್ಲಿ ನಾಲ್ಕು ದಿನಗಳಿಂದ ನಡೆದ ಘಟನೆಗಳು, ಮಾತುಗಳು ರಾಜ್ಯದ ಜನರ ಮುಂದಿವೆ. ಅವರು ತಮ್ಮನ್ನು ಕ್ಷಮಿಸುವುದಿಲ್ಲ. ವಿಶ್ವಾಸ ಮತಯಾಚನೆಯಲ್ಲಿ ವಿಪಕ್ಷದ ಯಾವುದೇ ಸದಸ್ಯರು ಭಾಗವಹಿಸಲಿಲ್ಲ. ಇದು ವಿಶೇಷವಾಗಿತ್ತು ಹಾಗೂ ಇತಿಹಾಸ ಕೂಡ ಆಯಿತು ಎಂದು ಸಿಎಂ ಹೇಳಿದ್ದಾರೆ.

ವಿಶ್ವಾಸ ಮತಯಾಚನೆ ಚರ್ಚೆಯಲ್ಲಿ ಮಾತನಾಡಿದ ಸಿಎಂ, ರಾಜ್ಯಪಾಲರಿಂದ ಬಂದ ಆದೇಶವನ್ನು ಮತ್ತೆ ಪ್ರಸ್ತಾಪಿಸುವುದಿಲ್ಲ. ನಾವು ಕಾಲ ಹರಣ ಮಾಡುತ್ತಿದ್ದೇನೆ ಅಂತ ಚರ್ಚೆಯಾಗುತ್ತಿದೆ. ಹೌದು, ನಾವು ವಿಶ್ವಾಸ ಮತಯಾಚನೆಯನ್ನು ಮುಂದೂಡಿದ್ದು ನಿಜ. ಆದರೆ ಸಮಯವನ್ನು ವ್ಯರ್ಥ ಮಾಡಿಲ್ಲ. ಸರ್ಕಾರ ಬೀಳಿಸಲು ಮುಂದಾದವವರಿಗೆ ಸ್ವಲ್ಪ ಸಮಯದ ಬಳಿಕ ಬುದ್ಧಿ ಬರುತ್ತೆ ಅಂತ ಕಾದು ನೋಡಿದ್ದೇವೆ. ನಾಲ್ಕು ದಿನಗಳಲ್ಲಿ ನಿಮ್ಮ ಬಗ್ಗೆಯೂ ಕೆಲವರು ಮಾತನಾಡಿದ್ದಾರೆ. ಇದು ನಿಮಗೂ ನೋವು ತಂದೆ ಎಂದು ಸಿಎಂ, ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ತಿಳಿಸಿದರು.

Ramesh

ನಾನು ಮದುವೆ ಆಗುವುದಾದರೆ ರಾಜಕಾರಣಕ್ಕೆ ಬರಬಾರದು ಅಂತ ಪತ್ನಿ, ಶಾಸಕಿ ಅನಿತಾ ಅವರು ಷರತ್ತು ಹಾಕಿದ್ದರು. ನನಗೂ ರಾಜಕೀಯದಲ್ಲಿ ಆಸಕ್ತಿ ಕೂಡ ಇರಲಿಲ್ಲ. ಆದರೆ ವಿಧಿಯ ಆಟದಿಂದ ರಾಜಕೀಯಕ್ಕೆ ಬಂದುಬಿಟ್ಟೆ. ಜೊತೆಗೆ ಪತ್ನಿಯನ್ನು ಕರೆದುತಂದೆ ಎಂದು ಸದನದಲ್ಲಿ ನಗೆ ಹರಿಸಿದರು.

ವಿಧಾನಸಭೆ ಗ್ಯಾಲರಿಯಲ್ಲಿ ಕುಳಿತು ಕಲಾಪಗಳನ್ನು ನೋಡುತ್ತಿದ್ದೆ. ನನ್ನ ವ್ಯವಹಾರ ಚಿತ್ರರಂಗದಲ್ಲಿ. ಸಿನಿಮಾ ಕ್ಷೇತ್ರದಲ್ಲಿ ಇದ್ದರೂ ತಂದೆ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಹೋರಾಟವನ್ನು ನೋಡುತ್ತಾ ಬೆಳೆದೆ. ಅವರು ಯಾರ ಹಂಗಿನಲ್ಲಿಯೂ ಬದುಕಿಲ್ಲ, ಜನರ ಮಧ್ಯದಲ್ಲಿ ಬೆಳೆದಿದ್ದಾರೆ. ಎಚ್.ಡಿ.ದೇವೇಗೌಡರ ಬಗ್ಗೆ ಲಘುವಾಗಿ ಮಾತನಾಡಬೇಡಿ ಎಂದು ವಿಪಕ್ಷ ನಾಯಕರ ವಿರುದ್ಧ ಕಿಡಿಕಾರಿದರು.

ಸಚಿವ, ಸಹೋದರ ಎಚ್.ಡಿ.ರೇವಣ್ಣ ಅವರ ಮೇಲೆ ತಂದೆಯ ಆಶೀರ್ವಾದ ಇದೆ. ನಾನು ರಾಜಕೀಯಕ್ಕೆ ಬರುವುದು ಎಚ್.ಡಿ.ದೇವೇಗೌಡ ಅವರಿಗೆ ಇಷ್ಟವಿರಲಿಲ್ಲ. ಅವರ ವಿರೋಧದ ನಡುವೆಯೂ 1996ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಸೋತೆ. ಶಾಸಕರ ಒತ್ತಾಯದ ಮೇರೆಗೆ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾಡಿದೆ. ಅಲ್ಲಿಯೂ ಸೋಲು ಕಂಡೆ. ಆಗಲೇ ರಾಜಕೀಯ ನಿವೃತ್ತಿ ಘೋಷಿಸಲು ಮುಂದಾಗಿದ್ದೆ. ಆದರೆ ಕಾರ್ಯಕರ್ತರು ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮತ್ತೆ ಬೆಂಬಲಕ್ಕೆ ನಿಂತರು ಎಂದರು.

hdd 1

ಪತ್ನಿಯ ಬಗ್ಗೆ ನನಗೆ ತುಂಬಾ ಹೆಮ್ಮೆಯಿದೆ. ನಾನು ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದಾರೆ. ತಪ್ಪು ಮಾಡಿದಾಗ ಸರಿಪಡಿಸಿಕೊಳ್ಳಲು ಅವಕಾಶ ಕೊಟ್ಟಿದ್ದಾರೆ ಎಂದು ಶಾಸಕಿ ಅನಿತಾ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಸಾರಾ ಮಹೇಶ್ ಅವರ ಬಗ್ಗೆ ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಅಸಹ್ಯವಾಗಿ ಮಾತನಾಡಿದ್ದಾರೆ. ಇಂತಹ ಶಾಸಕರು ನಿಮಗೆ ಬೇಕಿತ್ತು ಅಲ್ವಾ ಸಿ.ಟಿ.ರವಿ ಅವರೇ? ಕರೆದುಕೊಂಡು ಹೋಗಿ ಎಂದು ಗುಡುಗಿದರು.

ಸಾಮಾಜಿಕ ಜಾಲತಾಣದಿಂದ ಯುವ ಪೀಳಿಗೆ ಹಾಳಾಗುತ್ತಿದೆ. ಅನೇಕರು ಟ್ವಿಟ್ಟರ್ ವಾಟ್ಸಪ್, ಫೇಸ್‍ಬುಕ್‍ನಲ್ಲಿಯೇ ಕಾಲ ಕಳೆಯುತ್ತಾರೆ. ಕೆಲವರು ಟ್ವೀಟ್ ಮಾಡಿ ಸಿಎಂ ವಿಶ್ವಾಸ ಮತಯಾಚನೆ ಮಾಡದೆ ಕಾಲಹರಣ ಮಾಡುತ್ತಿದ್ದಾರೆ ಅಂತ ಹೇಳಿದ್ದಾರೆ. ಇನ್ನೂ ಕೆಲವರು ತಮಗೆ ತೋಜಿದ್ದನ್ನು ಟ್ವೀಟ್ ಮಾಡುತ್ತಾರೆ ಎಂದು ಕಿಡಿಕಾರಿದರು.

ಸಂತೋಷದಿಂದ ಅಧಿಕಾರ ತ್ಯಜಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿ ಜೊತೆಗೆ ಸೇರಿ 20 ತಿಂಗಳು ಸರ್ಕಾರ ನಡೆಸಿದೆ. ಬಳಿಕ ಅಧಿಕಾರ ಬಿಟ್ಟುಕೊಳ್ಳಲು ಮುಂದಾಗಿದ್ದೆ. ಆದರೂ ನನ್ನನ್ನು ವಚನ ಭ್ರಷ್ಟ ಎಂದು ಆರೋಪಿಸುತ್ತಾರೆ. ಇದು ನನಗೆ ಭಾರೀ ನೋವು ತರುತ್ತಿದೆ ಎಂದು ಕಿಡಿಕಾರಿದರು.

ಮಾಧ್ಯಮಗಳ ವಿರುದ್ಧ ಕಿಡಿ:
ಮಾಧ್ಯಮಗಳಿಂದ ನಮಗೆ ಖಾಸಗಿ ಜೀವನವೇ ಇಲ್ಲದಂತಾಗಿದೆ. ಸರ್ಕಾರ ರಚನೆ ಆದಾಗಿನಿಂದ ಮಾಧ್ಯಮಗಳು ಡೆಡ್‍ಲೈನ್ ಕೊಡುತ್ತಲೇ ಬಂದವು ಎಂದು ಗುಡುಗಿದರು. ದಿನಬೆಳಗಾದರೆ ಸರ್ಕಾರ ನನ್ನ ವಿರುದ್ಧ ಸುದ್ದಿಗಳು ಬರುತಿತ್ತು. ಆದರು ನಾನು ಇದ್ದೇನೆ ಅಂದರೆ ಅದು ತಂದೆ ತಾಯಿ ಪುಣ್ಯ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇವೆ. ಆದರೆ ಮಾಧ್ಯಮಗಳು ಕೊಟ್ಟ ಡೆಡ್‍ಲೈನ್‍ನಲ್ಲಿ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ನಾನು ಇಂತಹ ಕಷ್ಟದ ಸಮಯದಲ್ಲಿ ಅಲ್ಪಸ್ವಲ್ಪ ಕೆಲಸ ಮಾಡಿದ್ದೇನೆ ಅದಕ್ಕೆ ಕಾರಣ ಅಧಿಕಾರಿಗಳ ಸಹಕಾರ ಎಂದು ಮೆಚ್ಚಗೆ ವ್ಯಕ್ತಪಡಿಸಿದರು.

ಮೋದಿ ವಿರುದ್ಧ ಕಿಡಿ:
ಲೋಕಸಭಾ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮೈತ್ರಿ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡಿದರು. ನಾವು ರೈತರ ಸಾಲಮನ್ನಾ ಮಾಡಲು ಶ್ರಮಿಸಿದ್ದೇವೆ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಈಗಲೂ 1,500 ಕೋಟಿ ರೂ. ಇದೆ. ನಾಡಿನ ರೈತರಿಗೆ ನನ್ನಿಂದ ಯಾವುದೇ ಮೋಸವಾಗಿಲ್ಲ ಎಂದು ಹೇಳಿದರು.

TAGGED:bjpcmcongressjdsPublic TVSpeaker Ramesh Kumartrust voteಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿವಿಶ್ವಾಸ ಮತಯಾಚನೆಸಿಎಂಸ್ಪೀಕರ್ ರಮೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Pakistan PM Shehbaz Sharif gets trolled over post on US Iran ceasefire Donald Trump
Latest

ಅಮೆರಿಕ – ಇರಾನ್‌ ಮಧ್ಯೆ 2ನೇ ಹಂತದ ಮಾತುಕತೆಗೆ ಪ್ರಸ್ತಾಪ – ಮುಖಭಂಗ ತಪ್ಪಿಸಲು ಪಾಕ್‌ ಶತಪ್ರಯತ್ನ

Public TV
By Public TV
29 minutes ago
Donald Trump Strait Of Hormuz
Latest

ಹಾರ್ಮುಜ್‌ಗೆ ಬಂದ್ರೆ ಕತೆ ಮುಗಿಸಿಬಿಡ್ತೀನಿ – ದಿಗ್ಬಂಧನ ಮುರಿಯುವ ಯಾವ್ದೇ ಪ್ರಯತ್ನ ಬೇಡ: ಟ್ರಂಪ್‌ ಬಿಗ್‌ ವಾರ್ನಿಂಗ್‌

Public TV
By Public TV
54 minutes ago
Modi
Districts

ನಾಳೆ ಮತ್ತೆ ಮಂಡ್ಯಕ್ಕೆ ಮೋದಿ ಭೇಟಿ – ಪ್ರಧಾನಿಗಳ ಸ್ವಾಗತಕ್ಕೆ ಮೈಸೂರು ಪೇಟ; ಏನಿದರ ವಿಶೇಷ?

Public TV
By Public TV
1 hour ago
Koppal Love Jihad
Crime

ಕೊಪ್ಪಳ ಲವ್ ಜಿಹಾದ್‌ಗೆ ಟ್ವಿಸ್ಟ್ – ಆರೋಪಿಗೆ ಅಂತರಾಜ್ಯ ಲಿಂಕ್, ಹೈಫೈ ಜೀವನಕ್ಕಾಗಿ ಬುಕ್ಕಿಗಳಿಂದ ಆರ್ಥಿಕ ಸಹಾಯ

Public TV
By Public TV
2 hours ago
ICC Womens t20 world cup 2026
Cricket

Women’s T20 WC 2026 | ಈವರೆಗಿನ ಗರಿಷ್ಠ 81.8 ಕೋಟಿ ಬಹುಮಾನ ಮೊತ್ತ ಘೋಷಿಸಿದ ICC

Public TV
By Public TV
2 hours ago
APMC 3
Bengaluru City

AMPC ಮಳಿಗೆ ಹಸ್ತಾಂತರದಲ್ಲಿ ಭಾರೀ ಗೋಲ್ಮಾಲ್‌ ಆರೋಪ – ಸಚಿವ ಶಿವಾನಂದ ಪಾಟೀಲ್ ವಿರುದ್ಧ ಲೋಕಾಯುಕ್ತಕ್ಕೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?