ಸಿಎಂ ಕುಮಾರಸ್ವಾಮಿ ಹೇಳಿದ್ದು ಸರಿ: ಸಿದ್ದರಾಮಯ್ಯ

Public TV
1 Min Read
SIDDU HDK

-ಹೆಚ್‍ಡಿಕೆ ವಿರುದ್ಧ ಸಿದ್ದು ಟ್ವೀಟಾಸ್ತ್ರ!
-ಹೆಚ್‍ಡಿಕೆ ವಿರುದ್ಧ ರೇವಣ್ಣರನ್ನ ಎತ್ತಿಕಟ್ಟಿದ್ರಾ ಮಾಜಿ ಸಿಎಂ!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ.

ಟ್ವೀಟ್: ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ ಸ್ಥಾನದ ಅರ್ಹತೆಯ ಬಹಳ ಜನ ಇದ್ದಾರೆ. ಅವರಲ್ಲಿ ಹೆಚ್.ಡಿ.ರೇವಣ್ಣ ಕೂಡಾ ಒಬ್ಬರು. ಎಲ್ಲಕ್ಕೂ ಕಾಲ ಕೂಡಿ ಬರಬೇಕು ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ಸಿಎಂ ಕುಮಾರಸ್ವಾಮಿ ಉಪ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂದು ಸಿದ್ದರಾಮಯ್ಯ ಬೆಂಬಲಿಗರ ವಿರುದ್ಧ ಮಾತಿನ ಚಾಟಿ ಬೀಸಿದ್ದರು. ಈ ಹೇಳಿಕೆಯ ಮೂಲಕ ಸಿದ್ದರಾಮಯ್ಯ ಮತ್ತೆ ಸಿಎಂ ಕೂಗಿಗೆ ಟಾಂಗ್ ನೀಡಿದ್ದರು. ಇದೀಗ ಸಿಎಂ ಮಾತಿನೇಟಿಗೆ ಸಿದ್ದರಾಮಯ್ಯನವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.

SIDDU KHARGE

ಕಾಂಗ್ರೆಸ್‍ನಲ್ಲಿ ಹೇಗೆ ಸಿಎಂ ಸ್ಥಾನಕ್ಕಾಗಿ ಹಲವು ಆಕಾಂಕ್ಷಿಗಳಿದ್ದಾರೋ ಹಾಗೆಯೇ ಜೆಡಿಎಸ್ ನಲ್ಲಿಯೂ ಸಿಎಂ ಸ್ಥಾನಕ್ಕೆ ಹೆಚ್.ಡಿ.ರೇವಣ್ಣ ಅರ್ಹರಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಒಬ್ಬರೇ ಸಿಎಂ ಸ್ಥಾನಕ್ಕೆ ಸೂಕ್ತ ನಾಯಕ ಅಲ್ಲ ಎಂಬ ಸಂದೇಶವನ್ನು ಟ್ವೀಟ್ ಮೂಲಕ ಹೇಳಿದಂತೆ ಆಗಿದೆ ಎಂಬ ಚರ್ಚೆಗಳು ದೋಸ್ತಿ ಅಂಗಳದಲ್ಲಿ ಆರಂಭಗೊಂಡಿವೆ.

Share This Article
Leave a Comment

Leave a Reply

Your email address will not be published. Required fields are marked *