ಬೆಂಗಳೂರು: ಟೈಮ್ ಪಾಸ್ ಮಾಡೋ ಹಲವು ನೌಕರರು ವಿಧಾನಸೌಧದಲ್ಲಿ ಇದ್ದಾರೆ. ಅವರನ್ನು ತೆಗೆದು ಹಾಕಿ ಕಷ್ಟ ಪಡುವವರಿಗೆ ಕೆಲಸ ನೀಡಿ ಅಂತ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಅವರು ಇಂದು ಜೆಪಿ ನಗರದ ಮನೆ ಮುಂದೆ ಇರುವ ಪಾರ್ಕ್ ನಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಅಚರಿಸಿದರು. ಈ ಕಾರ್ಯಕ್ರಮದಲ್ಲಿ ಜಯನಗರ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಕೂಡ ಭಾಗಿಯಾಗಿದ್ದರು.
ಬಳಿಕ ಮಾತನಾಡಿದ ಸಿಎಂ, ನಮ್ಮ ಸರ್ಕಾರ ಪರಿಸರಕ್ಕೆ ಹೆಚ್ಚು ಮಹತ್ವ ನೀಡುತ್ತೆ. ಇಂದು ನನ್ನ ಮನೆ ಮುಂದೆ ಇರೋ ಪಾರ್ಕ್ನಲ್ಲಿ ಗಿಡ ನೆಟ್ಟಿದ್ದೇನೆ. ಹಾಗೆಯೇ ರಾಜ್ಯದ ಪ್ರತಿಯೊಬ್ಬರು ಅವರ ಮನೆ ಮುಂದೆ ಗಿಡ ನೆಡುವುದರ ಮೂಲಕ ನಮ್ಮ ಸುತ್ತಮುತ್ತಲಿನ ಪರಿಸರ ಕಾಪಾಡಬೇಕು. ಅದು ನಮ್ಮೆಲ್ಲರ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹೇಳಿದ್ರು.
ಇದೇ ವೇಳೆ ಮನೆ ಮುಂದೆಯೇ ಜನತಾದರ್ಶನ ಮಾಡಿದ ಸಿಎಂ ಆಕ್ಸಿಡೆಂಟ್ ಚಿಕಿತ್ಸೆಗೆ ಹಣವಿಲ್ಲದೆ ಪರದಾಡುತ್ತಿದ್ದ ಕುಟುಂಬಕ್ಕೆ ಆಸ್ಪತ್ರೆ ವೆಚ್ಚ ಭರಿಸುವುದಾಗಿ ಭರವಸೆಯನ್ನ ನೀಡಿದ್ರು. ಡಿಪ್ಲೋಮಾ ಮಾಡಿದ್ರು ಕೆಲಸವಿಲ್ಲದೆ ಅಲೆದಾಡುತ್ತಿದ್ದ ಮಹಿಳೆಗೆ ವಿಧಾನಸೌಧದಲ್ಲಿ ಕೆಲಸ ನೀಡಿ. ಟೈಮ್ ಪಾಸ್ ಮಾಡೋ ಹಲವು ನೌಕರರು ಇದ್ದಾರೆ. ಅವರನ್ನು ತೆಗೆದು ಹಾಕಿ ಕಷ್ಟ ಪಡುವವರಿಗೆ ವಿಧಾನಸೌದದಲ್ಲಿ ಕೆಲಸ ನೀಡಿ ಅಂತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.