Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ಕ್ಷೇತ್ರ ಗೆದ್ದರಷ್ಟೇ ಬಿಎಸ್‍ವೈ ಸಿಎಂ ಕುರ್ಚಿ ಭದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 6 ಕ್ಷೇತ್ರ ಗೆದ್ದರಷ್ಟೇ ಬಿಎಸ್‍ವೈ ಸಿಎಂ ಕುರ್ಚಿ ಭದ್ರ

Bengaluru City

6 ಕ್ಷೇತ್ರ ಗೆದ್ದರಷ್ಟೇ ಬಿಎಸ್‍ವೈ ಸಿಎಂ ಕುರ್ಚಿ ಭದ್ರ

Public TV
Last updated: November 13, 2019 2:44 pm
Public TV
Share
2 Min Read
bsy 1 1
SHARE

ಬೆಂಗಳೂರು: ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಿಂದ ಬಿಗ್ ರಿಲೀಫ್ ಸಿಕ್ಕಿದರೂ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮುಂದುವರಿಯಬೇಕಾದರೆ 15 ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕನಿಷ್ಟ 6 ಕ್ಷೇತ್ರಗಳನ್ನು ಗೆಲ್ಲಬೇಕಿದೆ.

ಹೌದು. ಕರ್ನಾಟಕ ವಿಧಾನಸಭೆ ಬಲಾಬಲ 224 ಆಗಿದ್ದು ಒಬ್ಬರು ಅಂಗ್ಲೋ ಇಂಡಿಯನ್ ಸದಸ್ಯರಿದ್ದಾರೆ. 17 ಮಂದಿ ಶಾಸಕರು ಅನರ್ಹಗೊಂಡ ಪರಿಣಾಮ ಬಲ 207ಕ್ಕೆ ಕುಸಿದಿದೆ. ಬಹುಮತ ಸಾಧಿಸಲು 104 ಶಾಸಕರು ಬೆಂಬಲ ಬೇಕಿದ್ದ ಪರಿಣಾಮ ಬಿಜೆಪಿ 105 ಜನ ಶಾಸಕರ ಜೊತೆ ಓರ್ವ ಪಕ್ಷೇತರ ಶಾಸಕರ ಬೆಂಬಲ ಇದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ 66, ಜಿಡಿಎಸ್ 34 ಶಾಸಕರಿದ್ದರೆ ಬಿಎಸ್‍ಪಿಯಿಂದ ಉಚ್ಚಾಟಿದ ಶಾಸಕ ಮಹೇಶ್ ಇದ್ದಾರೆ.

rebel congress jds resigns B 1 1000x329 1 768x422 1

15 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿರುವ ಪರಿಣಾಮ ವಿಧಾನಸಭೆಯ ಬಲಾಬಲ 222+1 ಏರಿಕೆ ಆಗಲಿದೆ. ಹೀಗಾಗಿ ಬಿಜೆಪಿ ಸರ್ಕಾರಕ್ಕೆ 112 ಶಾಸಕರ ಬೆಂಬಲ ಬೇಕಿದ್ದು, ಬಿಎಸ್‍ವೈ ಸಿಎಂ ಪಟ್ಟ ಉಳಿಸಿಕೊಳ್ಳಬೇಕಾದರೆ ಕನಿಷ್ಟ 6 ಕ್ಷೇತ್ರಗಳಲ್ಲಿ ಜಯಗಳಿಸಲೇಬೇಕಿದೆ.

ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಡಿ.5 ರಂದು ಮತದಾನ ನಡೆಯಲಿದ್ದು ಡಿ.9 ಸೋಮವಾರದಂದು ಫಲಿತಾಂಶ ಪ್ರಕಟವಾಗಲಿದೆ.

Rebel MLAs C 1

ಈ 15 ಕ್ಷೇತ್ರಗಳ ಪೈಕಿ ಉತ್ತರ ಕರ್ನಾಟಕ ಮತ್ತು ಬೆಂಗಳೂರು ನಗರ ಕ್ಷೇತ್ರಗಳಲ್ಲಿ ಬಿಜೆಪಿಗೆ ಹಿಡಿತವಿದೆ. ಆದರೆ ಹಳೆ ಮೈಸೂರು ಭಾಗವಾದ ಕೆ.ಆರ್.ಪೇಟೆ, ಹುಣಸೂರು, ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮಧ್ಯೆ ನೇರವಾದ ಸ್ಪರ್ಧೆ ಇದೆ. ಆದರೆ ಲೋಕಸಭೆಯಲ್ಲಿ ಚಿಕ್ಕಬಳ್ಳಾಪುರ, ಮೈಸೂರಿನಲ್ಲಿ ಬಿಜೆಪಿ ಗೆದ್ದಿದ್ದು, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದಿದ್ದಾರೆ.

2 ಕ್ಷೇತ್ರಗಳಿಗೆ ಇಲ್ಲ:
ಆನರ್ಹ ಶಾಸಕರ 17 ಕ್ಷೇತ್ರದ ಪೈಕಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಹಾಗೂ ರಾಯಚೂರಿನ ಮಸ್ಕಿ ಕ್ಷೇತ್ರಕ್ಕೆ ಉಪ ಚುನಾವಣೆ ಚುನಾವಣೆ ನಡೆಯುತ್ತಿಲ್ಲ. 2018 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಾಲಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲಿ ಸಾವಿರಾರು ಗುರುತಿನ ಚೀಟಿ ಪತ್ತೆಯಾಗಿದ್ದವು. ಈ ಪ್ರಕರಣದಲ್ಲಿ ಅನರ್ಹ ಶಾಸಕ ಮುನಿರತ್ನ ಹೆಸರನ್ನು ಜಾಲಹಳ್ಳಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಕೈಬಿಟ್ಟಿದ್ದರು. ಇದನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಪಿ.ಎಂ ಮುನಿರಾಜುಗೌಡ 7ನೇ ಎಸಿಎಂಎಂ ನ್ಯಾಯಾಲಯದ ಮೆಟ್ಟಿಲೇರಿದ್ದರು. ಮುನಿರತ್ನ ಅವರನ್ನು ಆರೋಪಿಯನ್ನಾಗಿ ಮಾಡಬೇಕು ಎಂಬುವುದು ಅವರ ವಾದವಾಗಿದೆ. ಈ ಪ್ರಕರಣ ಕೋರ್ಟಿನಲ್ಲಿ ಇರುವುದರಿಂದ ಈ ಕ್ಷೇತ್ರದ ಉಪ ಚುನಾವಣೆ ತಡೆ ಹಿಡಿಯಲಾಗಿದೆ.

VOTE

ಇನ್ನು ಬೋಗಸ್ ಮತದಾನ ಪ್ರಕರಣ ಮಸ್ಕಿ ಕ್ಷೇತ್ರಕ್ಕೆ ಉಪಚುನಾವಣೆಯಿಲ್ಲ. ಪ್ರತಾಪ್ ಗೌಡ ಪಾಟೀಲ್ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಿ 213 ಮತದ ಅಂತರದಿಂದ ಸೋತಿದ್ದ ಬಸನಗೌಡ ತುರ್ವಿಹಾಳ ಅವರು ಕೋರ್ಟಿನಲ್ಲಿ ದೂರು ದಾಖಲಿಸಿದ್ದಾರೆ. ಪ್ರತಾಪ್ ಗೌಡ ಪುತ್ರಿ ವಿದೇಶದಲ್ಲಿದ್ದರು ಕೂಡ ಅವರ ಮತ ಚಲಾವಣೆಯಾಗಿತ್ತು. ಹೀಗಾಗಿ ಶಾಸಕತ್ವ ಅಸಿಂಧುಗೊಳಿಸುವಂತೆ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ. ಉಚ್ಚ ನ್ಯಾಯಾಲಯದಲ್ಲಿ ಈ ಪ್ರಕರಣ ಬಾಕಿಯಿದ್ದು, ಬೋಗಸ್ ಮತದಾನ ನಡೆಯದಿದ್ದರೆ ನಾನೇ ಗೆಲ್ಲುತ್ತಿದ್ದೆ ಎನ್ನುವುದು ಬಸನಗೌಡ ತುರ್ವಿಹಾಳ ವಾದ. ಹೀಗಾಗಿ ಎರಡು ಪ್ರಕರಣ ಕೋರ್ಟಿನಲ್ಲಿ ಇರುವ ಕಾರಣದಿಂದ 2 ಕ್ಷೇತ್ರಗಳ ಉಪಚುನಾವಣೆ ಕೋರ್ಟ್ ತೀರ್ಪು ಬರುವವರೆಗೂ ಕೈ ಬಿಡಲಾಗಿದೆ.

TAGGED:bengalurubjpbyelectioncongressjdsKarnataka ElectionPublic TVSupreme CourtYedyurappaಉಪಚುನಾವಣೆಕರ್ನಾಟಕ ಚುನಾವಣೆಕಾಂಗ್ರೆಸ್ಜೆಡಿಎಸ್ಬಿಜೆಪಿಯಡಿಯೂರಪ್ಪಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

H.S Shivashankar
Davanagere

ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿ – ಪಂಚಮಸಾಲಿ ಪೀಠದ ಟ್ರಸ್ಟಿಗಳಿಗೆ ಹೆಚ್.ಎಸ್ ಶಿವಶಂಕರ್ ಸವಾಲು

Public TV
By Public TV
3 seconds ago
Charmadi Ghat Accident
Dakshina Kannada

ಚಾರ್ಮಾಡಿ ಘಾಟ್‌ನಲ್ಲಿ 2 ಪ್ರತ್ಯೇಕ ಕಡೆ ಬಸ್, ವಾಹನ ಪಲ್ಟಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
41 minutes ago
pm modi 3
Latest

ಬಂಗಾಳದ ತಾಯಿ ಕಣ್ಣೀರಿಡುತ್ತಿದ್ದಾಳೆ, ರಾಜ್ಯ ನುಸುಳುಕೋರರಿಂದ ತುಂಬಿದೆ, ಜನ ಭಯಭೀತರಾಗಿದ್ದಾರೆ: ಟಿಎಂಸಿ ವಿರುದ್ಧ ಮೋದಿ ವಾಗ್ದಾಳಿ

Public TV
By Public TV
1 hour ago
IPL 2026 GT won by 8 wickets
Cricket

ಸಾಯಿ ಸುದರ್ಶನ್‌ ಕಮಾಲ್‌ – ಚೆನ್ನೈ ವಿರುದ್ಧ ಗುಜರಾತ್‌ಗೆ 8 ವಿಕೆಟ್‌ಗಳ ಜಯ

Public TV
By Public TV
1 hour ago
public tv vidhyapeeta education expo
Bengaluru City

ವಿದ್ಯಾಪೀಠ 9ನೇ ಆವೃತ್ತಿ ಭರ್ಜರಿ ಯಶಸ್ಸು – ಎರಡು ದಿನಗಳಲ್ಲಿ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಎಕ್ಸ್‌ಪೋಗೆ ಭೇಟಿ

Public TV
By Public TV
2 hours ago
Harbhajan Singh
Latest

ಹರ್ಭಜನ್‌ ಸಿಂಗ್‌ಗೆ ನೀಡಿದ್ದ ಭದ್ರತೆ ಹಿಂತೆಗೆದುಕೊಂಡ ಪಂಜಾಬ್‌ ಸರ್ಕಾರ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?