Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಮೆಟ್ರೋಗೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮ ಮೆಟ್ರೋಗೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ

Bengaluru City

ನಮ್ಮ ಮೆಟ್ರೋಗೆ ʻಬಸವಣ್ಣʼ ಹೆಸರು – ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಭರವಸೆ

Public TV
Last updated: October 6, 2025 9:40 am
Public TV
Share
4 Min Read
Siddaramaiah 4 1
SHARE

– ಮುಂದಿನ ವರ್ಷದೊಳಗೆ ಅನುಭವ ಮಂಟಪ ನಿರ್ಮಾಣ ಪೂರ್ಣ
– ನಾವೆಲ್ರೂ ಶೂದ್ರರು, ಜಾತಿಯಿಂದ ಯಾರೂ ಶ್ರೇಷ್ಠರಾಗಲ್ಲ; ಸಿಎಂ

ಬೆಂಗಳೂರು: ನಮ್ಮ ಮೆಟ್ರೋಗೆ (Namma Metro Station) ಬಸವಣ್ಣ ಅವರ ಹೆಸರು ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಭರವಸೆ ನೀಡಿದರು.

ವಿಶ್ವಗುರು ಬಸವಣ್ಣ ಅವರನ್ನು ʻಕರ್ನಾಟಕದ ಸಾಂಸ್ಕೃತಿಕ ನಾಯಕʼ ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ರ ಸಮಾರೋಪ ಸಮಾರಂಭದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿಧ್ಯದಲ್ಲಿ ಲಿಂಗಾಯತ ಧರ್ಮ (Lingayat religion) ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಹಾಗೂ 2 ಲಕ್ಷಕ್ಕೂ ಅಧಿಕ ಶರಣಾನುಯಾಯಿಗಳು ಉಪಸ್ಥಿತರಿದ್ದರು.

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇನೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು ನಾವು. ಶೂದ್ರರು ಜಾತಿ… pic.twitter.com/k5yUD34UaA

— Siddaramaiah (@siddaramaiah) October 5, 2025

ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ, ಮುಂದುವರಿದು. ಮುಂದಿನ ವರ್ಷದ ಒಳಗೆ ಅನುಭವ ಮಂಟಪದ ನಿರ್ಮಾಣ ಪೂರ್ತಿ ಮಾಡ್ತೇವೆ. ವಚನ ವಿವಿ ಮಾಡುವ ಬೇಡಿಕೆ ಕೊಟ್ಟಿದ್ದೀರಿ, ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಮಾಡ್ತೇವೆ. ನಾನು ರಾಜಕೀಯದಲ್ಲಿ ಏನು ಮಾತು ಕೊಡ್ತೀನೋ, ಆ‌ ಮಾತು ನಡೆಸಿಕೊಡ್ತೇನೆ ಎಂದು ಆಶ್ವಾಸನೆ ನೀಡಿದರು.

ಸಿಎಂ ಭಾಷಣ ಮಾಡುವ ವೇಳೆಯೇ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡಲು ಆಗ್ರಹ ಕೇಳಿಬಂದಿತು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಮೆಟ್ರೋ ನಿಲ್ದಾಣಕ್ಕೆ ನಮ್ಮ ಪಾಲು ಜಾಸ್ತಿ ಇರಬಹುದು. ಆದ್ರೆ ನಮ್ಮ ಮೆಟ್ರೋಗೆ ಬಸವಣ್ಣ ಹೆಸರು ಇಡುವುದು ನಮ್ಮ ಕೈಯಲ್ಲಿಲ್ಲ, ಕೇಂದ್ರ ಸರ್ಕಾರಕ್ಕೆ ಇದರ ಶಿಫಾರಸು ಮಾಡ್ತೇವೆ. ನಮ್ಮದೇ ಸರ್ಕಾರದ ವ್ಯಾಪ್ತಿಯಲ್ಲಿ ಇದ್ದಿದ್ರೆ ಈ ಸ್ಥಳದಲ್ಲೇ ಒಪ್ಪಿಗೆ ಕೊಡ್ತಿದ್ದೆ ಎಂದು ಹೇಳಿದರು.

Siddaramaiah 5

ನಾನು ಬಸವಣ್ಣನ ಅಭಿಮಾನಿ, ಅವರ ತತ್ವ ಸಿದ್ಧಾಂತಗಳಲ್ಲಿ‌ ನಂಬಿಕೆ, ಬದ್ಧತೆ ಇಟ್ಟುಕೊಂಡವನು. ಆ ಕಾರಣಕ್ಕೆ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಅಂತ ನಮ್ಮ ಸರ್ಕಾರ ಘೋಷಣೆ ಮಾಡಿದೆ. ಆ ಮೂಲಕ ಇಡೀ ಸರ್ಕಾರ ಬಸವಣ್ಣರಿಗೆ ಗೌರವ ಸೂಚಿಸಿದೆ ಎಂದು ತಿಳಿಸಿದರು.

ಈ ಸಮಾಜದಲ್ಲಿ ಜಾತಿ ವ್ಯವಸ್ಥೆ, ಮೇಲುಕೀಳು ಇರೋವರೆಗೂ ಬಸವಣ್ಣನ ತತ್ವಗಳು ಅತ್ಯಂತ ಪ್ರಸ್ತುತ. ನಾವು ಮೂಲತಃ ಮಾನವರು, ಆಮೇಲೆ ಭಾರತೀಯರು. ನಾನು ಕಾನೂನು ವಿದ್ಯಾರ್ಥಿ ಆಗಿದ್ದಾಗಿನಿಂದ ಈವರೆಗೂ ಬಸವಣ್ಣನ ಅನುಯಾಯಿ. ಸಂವಿಧಾನದಲ್ಲಿ ಬಸವಣ್ಣ ವಿಚಾರಗಳನ್ನು ಅಳವಡಿಸಿದ್ದಾರೆ. ಬಸವ ವಿಚಾರಗಳು, ಸಂವಿಧಾನದ ವಿಚಾರಗಳು ಹೆಚ್ಚೂ ಕಡಿಮೆ ಒಂದೇ ಆಗಿವೆ ಎಂದು ಬಣ್ಣಿಸಿದರು.

Siddaramaiah 3

ನಾವೆಲ್ರೂ ಒಂದೇ, ನಾವೆಲ್ರೂ ಶೂದ್ರರು
ನಾನು ಜಾಸ್ತಿ ಭಾಷಣ ಮಾಡಲು ಹೋಗಲ್ಲ. ನಾನು ಏನೇನೋ ಮಾತಾಡಿದ್ರೆ ಅದು ವಿವಾದ ಆಗಬಹುದು. ನಾವೆಲ್ರೂ ಶೂದ್ರರು, ಚತುರ್ವರ್ಣದಲ್ಲಿ ನಾಲ್ಕನೇ ಸ್ಥಾನ. ಬ್ರಾಹ್ಮಣರು, ವೈಶ್ಯರು, ಕ್ಷತ್ರಿಯರು, ಶೂದ್ರರು‌ ಈಗ ಪಂಚಮರು ಅಂತ ಒಂದಿದೆ. ನಾವೆಲ್ರೂ ಒಂದೇ, ನಾವೆಲ್ರೂ ಶೂದ್ರರು. ನಮ್ಮ ಸಮಾಜದಲ್ಲಿ ವೈರುಧ್ಯತೆ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಅಸಮಾನತೆ ಇದೆ. ಇವನ್ನು ಹೋಗಲಾಡಿಸುವ ತನಕ ನಿಜವಾದ ಸ್ವಾತಂತ್ರ್ಯ ಬಂದಂತಾಗಲ್ಲ. ಅಸಮಾನತೆಗೆ ಬೆಂಬಲ ಕೊಡೋರು ಸ್ವಾತಂತ್ರ್ಯದ ಸೌಧ ಕೆಡವೋರು. ಈ ಎಚ್ಚರಿಕೆಯನ್ನ ಅಂಬೇಡ್ಕರ್ ಆವತ್ತೇ ಕೊಟ್ಟಿದ್ರು ಎಂದು ತಿಳಿಸಿದರು.

Siddaramaiah 4

ಜಾತಿಯಿಂದ ಯಾರೂ ಶ್ರೇಷ್ಠರಾಗಲ್ಲ
2013 ಮೇ 13 ರಂದು ನಾನು ಮೊದಲ ಸಲ ಸಿಎಂ ಆದೆ, ಆವತ್ತು ಬಸವ ಜಯಂತಿ ಇತ್ತು. ನಾನು ಬಸವ ಜಯಂತಿ ದಿನ ಪ್ರಮಾಣವಚನ ತಗೋತೇನೆ ಅಂತ ರಾಜ್ಯಪಾಲರಿಗೆ ಹೇಳಿದೆ. ಅದೇ ದಿನ ಪ್ರಮಾಣ ಸ್ವೀಕರಿಸಿದೆ. ಆವತ್ತೇ ಬಸವಾದಿ ಶರಣರ ಹಾದಿಯಲ್ಲಿ ಸರ್ಕಾರ ನಡೆಸುವ ತೀರ್ಮಾನ ಮಾಡಿದೆ. ಅದಕ್ಕೋಸ್ಕರವೇ ಅನೇಕ ಭಾಗ್ಯಗಳನ್ನು ನಮ್ಮ ಸರ್ಕಾರ ಕೊಡ್ತು, ಎಲ್ರಿಗೂ ಸಮಾನ ಅವಕಾಶ ಇರಬೇಕು. ನಾವು ಈ ಜಾತಿ ಆ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ವಾ? ಕುರುಬರ ಜಾತಿಯಲ್ಲಿ ಹುಟ್ಟಲು ನಾನೇನು ಅರ್ಜಿ ಹಾಕಿದ್ನಾ? ಕುರುಬ ಜಾತಿಯಿತ್ತು ಹುಟ್ಟಿದೆ. ಜಾತಿಯಿಂದ ಯಾರೂ ಜ್ಞಾನಿ ಆಗಲ್ಲ, ಜಾತಿಯಿಂದ ಯಾರೂ ಶ್ರೇಷ್ಠರಾಗಲ್ಲ. ಏಕೆಂದ್ರೆ ಜ್ಞಾನ ಯಾರ ಸ್ವತ್ತೂ ಅಲ್ಲ, ಅವಕಾಶಗಳು ಸಿಗಬೇಕು, ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು, ಅಸಮಾನತೆ ತೊಲಗಿಸಬೇಕು ಎಂದು ಕರೆ ನೀಡಿದರು.

ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ
ಮುಂದುವರಿದು… ಸಮಾಜದಲ್ಲಿ ಸಹಿಷ್ಣುತೆ, ಸಹಬಾಳ್ವೆ ಬೆಳೆಸುವ ಪ್ರಯತ್ನ ಎಲ್ಲರೂ ಮಾಡಬೇಕು. ಧರ್ಮದ ವಿಚಾರದಲ್ಲಿ ಅನೇಕರು ದಿಕ್ಕು ತಪ್ಪಿಸುವ ಕೆಲಸ ಮಾಡ್ತಾರೆ, ನಾವು ಎಚ್ಚರದಿಂದಿರಬೇಕು. ಮುಂದುವರೆದ ಜಾತಿಗಳು ಸಮಾವೇಶ ಮಾಡಿದ್ರೆ ಅದು ಜಾತಿ ಸಂಘಟನೆ, ಹಿಂದುಳಿದ ಜಾತಿಗಳು ಸಮಾವೇಶ ಮಾಡಿದರೆ ಅದು ಸಮಾನತೆಯ ಸಂಘಟನೆ. ನಮ್ಮದು ಜಡತ್ವದಿಂದ ಕೂಡಿದ ಜಾತಿ ವ್ಯವಸ್ಥೆ, ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಅದಕ್ಕಾಗಿಯೇ ಬಸವಣ್ಣ ಹೊಸ ಧರ್ಮವನ್ನೇ ಹುಟ್ಟು ಹಾಕಿದರು. ಆದ್ರೆ ಜಾತಿ ವ್ಯವಸ್ಥೆ ಹಾಗೇ ಇದೆ, ಇದನ್ನ ತೊಡೆದುಹಾಕಿ ಸಮ ಸಮಾಜ ನಿರ್ಮಾಣ ಮಾಡಬೇಕು. ಸಮಾಜ ಬದಲಾವಣೆಯಾಗಲು ಬಸವಣ್ಣನ ವಿಚಾರ ಪಾಲಿಸಬೇಕು ಎಂದು ಸಲಹೆ ನೀಡಿದರು.

TAGGED:Anubhava Mantapabasavannanamma metrosiddaramaiahಅನುಭವ ಮಂಟಪನಮ್ಮ ಮೆಟ್ರೋಬಸವಣ್ಣ
Share This Article
Facebook Whatsapp Whatsapp Telegram

Cinema news

Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post
Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories

You Might Also Like

STILL.jpg
Latest

Karnataka Budget Live Updates

Public TV
By Public TV
3 minutes ago
Children below the age of 18 will now need parental consent to open social media accounts
Bengaluru City

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

Public TV
By Public TV
6 minutes ago
Man Hammers Boy To Death Drinks Blood Tries To Eat Flesh Say Villagers
Crime

ಮಧ್ಯಪ್ರದೇಶ | ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಕೊಂದು ರಕ್ತ ಕುಡಿದ ರಾಕ್ಷಸ!

Public TV
By Public TV
25 minutes ago
Squadron Leader Anuj L and Flight Lieutenant Purvesh Duragkar died in the SU 30 crash
Latest

ಅಸ್ಸಾಂನಲ್ಲಿ ಸುಖೋಯ್ Su-30 ವಿಮಾನ ಪತನ – ಇಬ್ಬರು ವಾಯುಪಡೆಯ ಪೈಲಟ್‌ಗಳು ಹುತಾತ್ಮ

Public TV
By Public TV
30 minutes ago
siddaramaiah budget
Bengaluru City

ಇಂದು ರಾಜ್ಯ ಬಜೆಟ್‌ ಮಂಡನೆ; ಬಸ್‌ ನಿಲ್ದಾಣಗಳಲ್ಲಿ ಬಜೆಟ್‌ ನೇರಪ್ರಸಾರ- ವೀಕ್ಷಣೆಗೆ ಅವಕಾಶ

Public TV
By Public TV
1 hour ago
modi trump crude oil
Latest

ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?