ಬೆಂಗಳೂರು: ಚಿತ್ರನಟ ಅಂಬರೀಷ್ ಪುತ್ರ ಅಭಿಷೇಕ್ ವಿವಾಹದ ಆರತಕ್ಷತೆಯಲ್ಲಿ ಸಿಎಂ ಸಿದ್ದರಾಮ್ಯ (Siddaramaiah) ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮುಖಾಮುಖಿ ಆಗಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಅಭಿಷೇಕ್ ಅಂಬರೀಷ್ (Abhishek Ambarish) ಹಾಗೂ ಅವಿವಾ (Aviva) ಅವರ ಆರತಕ್ಷತೆ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಆಗಮಿಸಿದ್ದ ಹಾಲಿ ಹಾಗೂ ಮಾಜಿ ಸಿಎಂಗಳು ಫುಡ್ಕೋರ್ಟ್ ಬಳಿ ಆಹಾರ ಸವಿಯುವ ವೇಳೆ ಮುಖಾಮುಖಿಯಾಗಿದ್ದಾರೆ. ಇದನ್ನೂ ಓದಿ: ಭತ್ತ, ಬೇಳೆ ಕಾಳು, ರಾಗಿಗಳ ಎಂಎಸ್ಪಿ ಹೆಚ್ಚಳ – ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?
ಈ ವೇಳೆ ಇಬ್ಬರೂ ಪರಸ್ಪರ ಕ್ಷೇಮ ಸಮಾಚಾರ ಹಂಚಿಕೊಂಡಿದ್ದಾರೆ. ಈ ವೇಳೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹಾಗೂ ಬಿಜೆಪಿ ಮಾಜಿ ಶಾಸಕ ನಾರಾಯಣ ಗೌಡ ಉಪಸ್ಥಿತರಿದ್ದರು. ಇದನ್ನೂ ಓದಿ: ಅಭಿ-ಅವಿವಾ ಆರತಕ್ಷತೆ : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಗಮನ