Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Bengaluru City

ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ: ಸಿಎಂ ಘೋಷಣೆ

Public TV
Last updated: June 4, 2025 9:10 pm
Public TV
Share
4 Min Read
siddaramaiah
SHARE

ಬೆಂಗಳೂರು: ಆರ್‌ಸಿಬಿ (RCB) ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾಲ್ತುಳಿತ ದುರಂತಕ್ಕೆ ವಿಷಾದ ವ್ಯಕ್ತಪಡಿಸಿದರು. ನಿನ್ನೆ ಆರ್‌ಸಿಬಿ ತಂಡ ಫೈನಲ್ ಪಂದ್ಯ ಜಯಗೊಳಿಸಿತ್ತು. ಇಂದು ವಿಜಯೋತ್ಸವ ಆಯೋಜಿಸಲಾಗಿತ್ತು. ಕ್ರಿಕೆಟ್ ಅಸೋಸಿಯೇಷನ್, ಸರ್ಕಾರದ ವತಿಯಿಂದಲೂ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಂತಹ ಘಟನೆ ನಡೆಯಬಾರದಾಗಿತ್ತು. ಬಹಳ ದೊಡ್ಡ ದುರಂತ ನಡೆದಿದೆ. ಕಾಲ್ತುಳಿತಕ್ಕೆ ಒಳಗಾಗಿ 11 ಜನ ಮೃತರಾಗಿದ್ದಾರೆ. 47 ಜನರು ಗಾಯಗೊಂಡಿದ್ದಾರೆ ಎಂದು ಸಿಎಂ ವಿಷಾದಿಸಿದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

bengaluru stambede rcb

ನಾನು ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದೆ. ಸಂಭ್ರಮ ಆಚರಣೆ ಮಾಡುವಾಗ ಇಂತಹ ದುರಂತ ನಡೆಯಬಾರದಿತ್ತು. ನಮ್ಮ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ಘಟನೆಗೆ ಸರ್ಕಾರ ಬಹಳ ದುಃಖ ವ್ಯಕ್ತಪಡಿಸುತ್ತದೆ ಎಂದು ತಿಳಿಸಿದರು.

ವಿಧಾನಸೌಧ ಎದರು 1 ಲಕ್ಷಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲಿ ಯಾವುದೇ ಅನಿರೀಕ್ಷಿತ ಘಟನೆ ದುರಂತ ನಡೆದಿಲ್ಲ. ಒಂದು ಲಕ್ಷಕ್ಕೂ ಹೆಚ್ಚು ಜನ ವಿಧಾನಸೌಧದ ಮುಂದೆ ಸೇರಿದ್ರು. ವಿಧಾನಸೌಧದ ಮುಂದೆ ನಡೆದ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಆದರೆ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ದುರಂತ ಆಗಿದೆ. ಯಾರು ಸಹ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಕೆಎಸ್‌ಸಿಎ, ಸರ್ಕಾರ ಇದನ್ನ ನಿರೀಕ್ಷಿಸಿರಲಿಲ್ಲ. ಕ್ರೀಡಾಂಗಣದಲ್ಲಿ 35 ಸಾವಿರ ಜನರಿಗೆ ಮಾತ್ರ ಆಸನದ ವ್ಯವಸ್ಥೆ ಇತ್ತು. ಆದರೆ 2-3 ಲಕ್ಷ ಜನ ಬಂದಿದ್ದರಂತೆ. ಇಂದು ಸಂಭ್ರಮದ ಬಗ್ಗೆ ಕೆಎಸ್‌ಸಿಎ ಮಾಹಿತಿ ಕೊಟ್ಟಿತ್ತು. ಹೀಗಾಗಿ ಇಷ್ಟು ಜನ ಬರುತ್ತಾರೆಂಬ ನಿರೀಕ್ಷೆ ಇರಲಿಲ್ಲ. ಆಸನದ ವ್ಯವಸ್ಥೆ ಇರುವಷ್ಟು ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು ಬರುವ ನಿರೀಕ್ಷೆ ಇತ್ತು ಎಂದರು. ಇದನ್ನೂ ಓದಿ: ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ

stampede in bengaluru rcb fans

ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ಕೊಡುತ್ತೇವೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೂ ಸರ್ಕಾರ ಹಣ ಕೊಡುತ್ತದೆ. ಎಲ್ಲಾ ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲಾಗುವುದು. ಒಟ್ಟು 47 ಜನ ಗಾಯಗೊಂಡಿದ್ದಾರೆ. ಕೆಲವರು ಚಿಕಿತ್ಸೆ ಪಡೆದು ಹೋಗಿದ್ದಾರೆ. ಒಟ್ಟಾರೆ 47 ಜನಕ್ಕೆ ಗಾಯ ಆಗಿದೆ. ಎಲ್ಲಾ ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಡಾಕ್ಟರ್ ಹೇಳಿದ್ದಾರೆ. ಗಾಯಾಳುಗಳ ಸಾರಿಗೆ, ಊಟ ಎಲ್ಲಾ ವ್ಯವಸ್ಥೆ ಸರ್ಕಾರ ಮಾಡಲಿದೆ. ಅನಿರೀಕ್ಷಿತ ದುರಂತ ಇದು ಎಂದು ಸಿಎಂ ನೊಂದು ನುಡಿದರು.

ಯಾರು ಕಾಲ್ತುಳಿತದಲ್ಲಿ ಸತ್ತಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸರ್ಕಾರ ಪ್ರಾರ್ಥನೆ ಮಾಡುತ್ತದೆ. ವಿದ್ಯಾರ್ಥಿಗಳು, ಯುವಕ-ಯುವತಿಯರು ಮೃತರಾಗಿದ್ದಾರೆ. ಅವರ ಪೋಷಕರಿಗೆ ಸಾವಿನ ದುಃಖ ಭರಿಸೋ ಶಕ್ತಿ ದೇವರು ಕೊಡಲಿ ಎಂದರಲ್ಲದೇ, ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಲಾಗಿದೆ ಎಂದರು. ಇದನ್ನೂ ಓದಿ: ಅನ್ ಕಂಟ್ರೋಲ್ಡ್ ಕ್ರೌಡ್ ಆಯ್ತು: ಕಾಲ್ತುಳಿತದ ಬಗ್ಗೆ ಡಿಕೆಶಿ ರಿಯಾಕ್ಷನ್

ಯಾರು ತಪ್ಪಿತಸ್ಥರು ಇದ್ದಾರೆ ಅವರ ಮೇಲೆ ತನಿಖೆ ಮಾಡಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದೊಂದು ಅನಿರೀಕ್ಷಿತ ಘಟನೆ. ಯಾರು ನಿರೀಕ್ಷೆ ಮಾಡಿರಲಿಲ್ಲ. ಭದ್ರತಾ ವೈಫಲ್ಯ ಇಲ್ಲ. ವಿರೋಧ ಪಕ್ಷದ ತರಹ ಯಾಕೆ ಮಾತಾಡ್ತೀರಾ? ಅನಿರೀಕ್ಷಿತವಾಗಿ ಜನ ಬಂದಿದ್ದರು. ಅದಕ್ಕೆ ಆಗಿದೆ. ಇದರಲ್ಲಿ ರಾಜಕೀಯ ಮಾತಾಡೊಲ್ಲ. ಬಿಜೆಪಿ ಅವರು ರಾಜಕೀಯ ಮಾಡ್ತಾರೆ. ನಾನು ಅದಕ್ಕೆ ಮಾತಾಡೊಲ್ಲ. ಅನಿರೀಕ್ಷಿತ ಘಟನೆ ಆಗಿರೋದ್ರಿಂದ ಡಿಸಿ ತನಿಖೆ ಮಾಡಿಸ್ತೀವಿ ಎಂದು ತಿಳಿಸಿದರು.

RCB Team

ಘಟನೆಯನ್ನ ಸಮರ್ಥನೆ ಮಾಡಿಕೊಳ್ಳೊಲ್ಲ. ಇದರಲ್ಲಿ ರಾಜಕೀಯ ಮಾಡೊಲ್ಲ. ಡಿಸಿ ತನಿಖೆಗೆ 15 ದಿನ ಸಮಯ ಕೊಡ್ತೀವಿ. ತನಿಖೆಯಿಂದ ಏನ್ ಬರುತ್ತೋ ನೋಡೋಣ. ಗೇಟ್ ಚಿಕ್ಕದು ಇತ್ತು. ಅದನ್ನ ಮುರಿದು ಒಳಗೆ ಹೋಗೋ ಪ್ರಯತ್ನ ಮಾಡಿದ್ದಾರೆ. ಯಾರು ಇದನ್ನ ನಿರೀಕ್ಷೆ ಮಾಡಿರಲಿಲ್ಲ. ನಿರೀಕ್ಷೆಗೂ ಮೀರಿ ಜನರು ಬಂದಿದ್ದರು. ಹೀಗಾಗಿ, ಈ ಘಟನೆ ಸಂಭವಿಸಿದೆ. ಖಚಿತವಾಗಿ ಏನು ನಡೆದೇ ಇಲ್ಲ ಅಂತ ನಾನು ಹೇಳಿಲ್ಲ. ಹೀಗಾಗಿ, ಡಿಸಿ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಲಾಗಿದೆ ಎಂದರು.

ಗ್ರ‍್ಯಾಂಡ್ ಸ್ಟೆಪ್ ಮೇಲೆ ಪೊಲೀಸರು ಕಾರ್ಯಕ್ರಮ ಮಾಡಬೇಡಿ ಅಂತ ಹೇಳಿಲ್ಲ. ಯಾವ ಅಧಿಕಾರಿಗಳು ಮಾಡಬೇಡಿ ಅಂತ ಹೇಳಿಲ್ಲ. KSCA ಕಾರ್ಯಕ್ರಮ ಆಯೋಜನೆ ಮಾಡಿತ್ತು. ನಾವು ವಿಧಾನಸೌಧದ ಮುಂದೆ ಮಾಡಿದ್ವಿ. ಅಲ್ಲೇನು ನಡೆದಿಲ್ಲ, ಸುಖಾಂತ್ಯವಾಗಿದೆ. ಕ್ರೀಡಾಂಗಣದಲ್ಲಿ ಇದು ಆಗಿರೋದು. ವಿಧಾನಸೌಧದ ಮುಂದೆ ಏನು ನಡೆದಿಲ್ಲ. ಕ್ರೀಡಾಂಗಣದ ಬಳಿ ಮಾತ್ರ ನಡೆದಿರೋದು. ಇಂತಹ ಘಟನೆ ಬೇಕಾದಷ್ಟು ಕಡೆ ನಡೆದಿದೆ. ಕುಂಭಮೇಳದಲ್ಲಿ ನಡೆದಿತ್ತು ಅಂತ ನಾನು ಹೇಳಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮೈಸೂರು ಪೇಟಾ ತೊಡಿಸಿ, ಶಾಲು ಹೊದಿಸಿ ಆರ್‌ಸಿಬಿ ಆಟಗಾರರನ್ನು ಸನ್ಮಾನಿಸಿದ ಸಿಎಂ, ಡಿಸಿಎಂ

ನಾವು ಸಮಾರಂಭ ಕರೆದಿರಲಿಲ್ಲ. ಕೆಎಸ್‌ಸಿಎ ಅವರು ಕೇಳಿದ್ರು ಪರ್ಮಿಷನ್ ಕೊಟ್ಟಿದ್ವಿ. ದುರಂತ ನಡೆಯಬಾರದಿತ್ತು ನಡೆದಿದೆ. ಸರ್ಕಾರ ಇದಕ್ಕೆ ದುಃಖ ಪಡ್ತೀವಿ. ಕ್ರೀಡಾಂಗಣದಲ್ಲಿ ಪೊಲೀಸ್ ಭದ್ರತೆ ಮಾತ್ರ ಕೊಡ್ತೀವಿ. ಅಲ್ಲಿ ಆಗಬಾರದಿತ್ತು ಆಗಿದೆ. ಅದಕ್ಕೆ ಡಿಸಿ ತನಿಖೆ ಆದೇಶ ಮಾಡಿದ್ದೇವೆ. ಯಾರೇ ತಪ್ಪು ಮಾಡಿದ್ರು ಕ್ರಮ ಆಗುತ್ತದೆ ಎಂದರು.

TAGGED:Bengaluru Stampedechinnaswamy stadiumrcbRCB Celebrationsiddaramaiahಆರ್‍ಸಿಬಿಚಿನ್ನಸ್ವಾಮಿ ಕ್ರೀಡಾಂಗಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
20 minutes ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
52 minutes ago
HDK 3
Bengaluru City

ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್? – ಅಭಿಮಾನಿಗಳಿಂದ ʻDaddy is homeʼ ಎಐ ವಿಡಿಯೋ ರಿಲೀಸ್‌!

Public TV
By Public TV
55 minutes ago
Hubballi BJP Worker Undressed Case CID
Dharwad

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ – ಪ್ರಕರಣ ಸಿಐಡಿಗೆ ವಹಿಸಲು ಸರ್ಕಾರ ಚಿಂತನೆ

Public TV
By Public TV
1 hour ago
Chamarajanagar 2
Chamarajanagar

ಚಾಮರಾಜನಗರ | 7 ಗ್ರಾಮಗಳ ಜನರ ನಿದ್ದೆಗೆಡಿಸಿದ್ದ ತಾಯಿ ಹುಲಿ ಸೆರೆ!

Public TV
By Public TV
1 hour ago
Chikkaballapura 2 2
Chikkaballapur

ಕಾಡುಹಂದಿಗೆ ಹಾಕಿದ್ದ ಬಲೆಗೆ ಸಿಲುಕಿ ಅಸ್ವಸ್ಥ – ಒದ್ದಾಡಿ ಪ್ರಾಣ ಬಿಟ್ಟ ಚಿರತೆ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?