Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ

Districts

ಅಹಿಂದ ಹೆಸರಿನಲ್ಲಿ ಸಮಾಜವಾದಿಯೆಂದು ಆಡಳಿತಕ್ಕೆ ಬಂದವರು ಸಿಎಂ: ಪ್ರಹ್ಲಾದ್ ಜೋಶಿ ಕಿಡಿ

Public TV
Last updated: September 28, 2024 2:44 pm
Public TV
Share
3 Min Read
prahlad joshi 1
SHARE

ಹುಬ್ಬಳ್ಳಿ: ಅಹಿಂದ ಹೆಸರಿನಲ್ಲಿ, ಸಮಾಜವಾದಿ ಎಂದು ಆಡಳಿತಕ್ಕೆ ಬಂದವರು ಸಿಎಂ. ಇಂದು ರೆಡ್‌ಹ್ಯಾಂಡ್ ಆಗಿ ಸಿಕ್ಕಿದ್ದಾರೆ. ರಾಜ್ಯಪಾಲರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಾರೆ. ಇದು ರಾಜ್ಯದ ದುರಂತ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ, ಸಂಸ್ಥೆಗಳು ಕೂಡ ರಾಜ್ಯಪಾಲರ ವಿರುದ್ಧ ಹೋರಾಟ ಮಾಡುತ್ತವೆ. ಕಾಂಗ್ರೆಸ್ (Congress) ನಾಯಕರು ಮತ್ತು ಸಿಎಂ ಏನೇನೋ ಮಾತನಾಡುತ್ತಿದ್ದಾರೆ. ಇದು ಷಡ್ಯಂತ್ರ ಅಂತಾರೆ. ಇದು ಸಿಎಂ ಅಧಿಕಾರದಲ್ಲಿದ್ದವರಿಗೆ ಸಾಧ್ಯ. ಇದು ಬೇರೆ ಯಾರಿಗೂ ಸಾಧ್ಯವಿಲ್ಲ ಎಂದು ಸ್ವತಃ ಹೈಕೋರ್ಟ್ ಹೇಳಿದೆ. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿ ತೀರ್ಪು ನೀಡಿದೆ. ನಾನು ಸಹ ಕೋರ್ಟ್ ಆದೇಶ ಎಲ್ಲಾ ಅಧ್ಯಾಯ ಮಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: Tamil Nadu | ಹೊಸೂರಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಟಾಟಾ ಕಂಪನಿ

ಸಿಎಂ ತಪ್ಪು ಮಾಡಿಲ್ಲ ಅಂದರೆ ಸಿಬಿಐಗೆ ಪ್ರಕರಣ ನೀಡಿ. ಕಾಂಗ್ರೆಸ್‌ನವರಿಗೆ ಸಿಬಿಐ ಭಯ ಕಾಡುತ್ತಿದೆ. ಕಾಂಗ್ರೆಸ್ ಪಾರ್ಟಿಯಲ್ಲಿ ಕುಟುಂಬ ಪ್ರಜಾಪ್ರಭುತ್ವ ಇದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಸಿದ್ದರಾಮಯ್ಯ (Siddramaiah) ಮಾತ್ರ ಕಾಂಗ್ರೆಸ್‌ಗೆ ಪ್ರಜಾಪ್ರಭುತ್ವ. ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಸ್ವತಃ ಸಿಎಂ ಅವರೇ ವರ್ಗಾವಣೆ ಮಾಡಿದ್ದಾರೆ. ನೈತಿಕವಾಗಿ ಕಾಂಗ್ರೆಸ್ ದಿವಾಳಿಯಾಗಿದೆ. ಈ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಜಮೀರ್‌ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಿ: ಎಜಿಗೆ ಟಿ ಜೆ ಅಬ್ರಹಾಂ ದೂರು

ಗೋದ್ರಾ ಹತ್ಯಾಕಾಂಡದಲ್ಲಿ ಮೋದಿ (Narendra Modi) ಮತ್ತು ಅಮಿತ್ ಶಾರನ್ನ ಸಿಲುಕಿಸುವ ಪ್ರಯತ್ನ ಮಾಡಲಾಯಿತು. ಅದರಲ್ಲಿ ಮೋದಿ ಅವರ ಪಾತ್ರ ಇಲ್ಲ. ಆದರೆ ಮೋದಿ ಮೇಲೆ ಆರೋಪ ಕೇಳಿ ಬಂದಿವೆ ಅಷ್ಟೇ. 2012 ರಲ್ಲಿ ಯಾಕೆ ಮಾತನಾಡಿಲ್ಲ ಸಿಎಂ ಸಿದ್ದರಾಮಯ್ಯ ಅವರೇ ಎಂದು ಪ್ರಶ್ನಿಸಿದರು. ಇಂಡಿಯಾ ಒಕ್ಕೂಟದಲ್ಲಿ ಇರುವ ಎಲ್ಲಾ ಪಾರ್ಟಿಗಳನ್ನು ಕಾಂಗ್ರೆಸ್ ವಜಾ ಮಾಡಿತ್ತು. ನೈತಿಕತೆ ಸಂಪೂರ್ಣವಾಗಿ ಬಿಟ್ಟಿದ್ದಾರೆ. ಸಿಎಂ ಮೇಲೆ ಕೇಸು ದಾಖಲಾಗುತ್ತಿದ್ದಂತೆ ಲೋಕಾಯುಕ್ತ ಎಸ್‌ಪಿ ಓಡಿ ಹೋಗುತ್ತಾರೆ ಎಂದರು. ಇದನ್ನೂ ಓದಿ: ಕಾಶ್ಮೀರವನ್ನ ಪ್ಯಾಲೆಸ್ತೀನ್‌ಗೆ ಹೋಲಿಸಿದ ಪಾಕ್ ಪ್ರಧಾನಿಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

ಚುನಾವಣಾ ಬಾಂಡ್ ಪ್ರಕರಣದಲ್ಲಿ ಎಲ್ಲಾ ಪಕ್ಷಗಳು ಭಾಗಿಯಾಗಿವೆ. ಎಲ್ಲಾ ಪಕ್ಷಗಳ ಸಮ್ಮತಿಯಿಂದಲೇ ಎಲೆಕ್ಟ್ರಿಕಲ್ ಬಾಂಡ್ ಜಾರಿ ಮಾಡಲಾಗಿತ್ತು. ಹೀಗೆ ಎಫ್‌ಐಆರ್ ದಾಖಲು ಮಾಡಿದರೆ ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಮೇಲು ಸಹ ಮಾಡಬೇಕು. ಅವರು ಸಹ ಎಲೆಕ್ಟ್ರಿಕಲ್ ಬಾಂಡ್ ಮೂಲಕ ಹಣ ಪಡೆದಿದ್ದಾರೆ. ಕೇಂದ್ರ, ಕಾಂಗ್ರೆಸ್ ಮಾತ್ರವಲ್ಲದೆ ರಾಜ್ಯದಲ್ಲಿ ಕಳೆದ ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ಚುನಾವಣಾ ಬಾಂಡ್ ಮೂಲಕ ಹಣ ಪಡೆಯಲಾಗಿದೆ. ಈ ಬಗ್ಗೆ ಸಮಗ್ರ ದಾಖಲೆ ಬಿಡುಗಡೆ ಮಾಡಲಾಗುತ್ತದೆ. ಜೆಪಿ ನಡ್ಡಾ, ನಿರ್ಮಲಾ ಸೀತಾರಾಮನ್, ವಿಜಯೇಂದ್ರ ಮೇಲೆ ಎಫ್‌ಐಆರ್ ದಾಖಲೆ ಆದೇಶದ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್‌ ಆದೇಶ

ನಮ್ಮಲ್ಲಿ ಹೈಕಮಾಂಡ್ ಇಲ್ಲ. ರಾಷ್ಟ್ರೀಯ ನೇತೃತ್ವವಿದೆ. ಸದ್ಯದಲ್ಲಿಯೇ ಬಿಜೆಪಿ (BJP) ಪಕ್ಷದಲ್ಲಿನ ಎಲ್ಲಾ ಸಮಸ್ಯೆ ಬಗೆಹರಿಯುತ್ತವೆ ಎಂದರು. ರಾಹುಲ್, ಸೋನಿಯಾ ಗಾಂಧಿ ಬೇಲ್ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಇಡೀ ಹೈಕಮಾಂಡ್ ಭ್ರಷ್ಟಾಚಾರದಿಂದ ಕೂಡಿದೆ. ಹೈಕಮಾಂಡ್‌ಗೆ ಕಮಾಂಡರ್ ಇಲ್ಲ. ಇದು ನಿರ್ಲಜ್ಜ ಕಾಂಗ್ರೆಸ್ ಸಂಸ್ಕೃತಿ. ಕುರ್ಚಿಗೆ ಅಂಟಿ ಕೂರುವುದು ಕಾಂಗ್ರೆಸ್ ಹೈಕಮಾಂಡ್ ದೌರ್ಬಲ್ಯ. ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಬೆದರಿಸುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ನನ್ನ ಬಳಿ ಇರುವ ದಾಖಲೆ ಬಿಟ್ಟರೆ 5-6 ಸಚಿವರು ರಾಜೀನಾಮೆ ನೀಡಬೇಕಾಗುತ್ತೆ: ಹೆಚ್‌ಡಿಕೆ ಬಾಂಬ್‌

ಇಡೀ ವಿಶ್ವದಲ್ಲೇ ಭಾರತದ ನ್ಯಾಯಾಂಗ ವ್ಯವಸ್ಥೆ ಅತ್ಯಂತ ಶ್ರೇಷ್ಠ ಮತ್ತು ಸುಭದ್ರವಾಗಿದೆ. ನ್ಯಾಯಾಂಗ ವ್ಯವಸ್ಥೆ ನಮ್ಮ ಕೈಯಲ್ಲಿ ಇದ್ದರೆ ಹಲವಾರು ತೀರ್ಪುಗಳು ನಮ್ಮ ಪರವಾಗಿ ಬರುತ್ತಿದ್ದವು. ಆದರೆ ನ್ಯಾಯಾಲಯದಲ್ಲಿ ನಮ್ಮ ವಿರುದ್ಧವೂ ತೀರ್ಪು ಬರುತ್ತವೆ. ಆದರೆ ನ್ಯಾಯಾಲಯದ ಬಗ್ಗೆ ನಾವು ಯಾವತ್ತೂ ತಪ್ಪು ಮಾತನಾಡುವುದಿಲ್ಲ. ಆದರೆ ಸಚಿವ ಜಮೀರ್ ನ್ಯಾಯಾಲಯದ ಬಗ್ಗೆ ಮಾತನಾಡುತ್ತಾರೆ. ಈ ಬಗ್ಗೆ ಏನು ಮಾಡಬೇಕೆಂದು ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಬ್ಲಿಕ್‌ ಮ್ಯೂಸಿಕ್‌ ದಶೋತ್ಸವಕ್ಕೆ ವಿದ್ಯುಕ್ತ ಚಾಲನೆ

TAGGED:cm siddaramaiahcongresshubballiprahlad joshiಕಾಂಗ್ರೆಸ್ಪ್ರಹ್ಲಾದ್ ಜೋಶಿಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
2 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
32 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
43 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
59 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?