– ಕೈಗಾರಿಕಾ ಸಚಿವರಿಂದ 2 ಕೋಟಿ ಲಾಭಾಂಶ ಹಸ್ತಾಂತರ
ಬೆಂಗಳೂರು: ನಗರದ ಗಾಂಧಿನಗರದಲ್ಲಿ ನಿರ್ಮಿಸಲಾಗಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಹೊಸ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಅವರಿಂದು ಉದ್ಘಾಟಿಸಿದರು.
ಬೆಂಗಳೂರಿನ ಗಾಂಧಿನಗರದಲ್ಲಿ ಇಂದು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿಯ ನೂತನ ಕಟ್ಟಡವನ್ನು ಉದ್ಘಾಟಿಸಿ, ಶುಭ ಹಾರೈಸಿದೆ.
ಸಚಿವರಾದ @MBPatil, ಚಲುವರಾಯಸ್ವಾಮಿ, ಶಾಸಕರಾದ ಆರ್.ವಿ.ದೇಶಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/lQZ1jfXdac
— Siddaramaiah (@siddaramaiah) December 5, 2025
ಗಾಂಧಿನಗರದ (Gandhi Nagar) ಆಚಾರ್ಯ ತುಳಸಿ ಮಾರ್ಗದಲ್ಲಿ 32 ಕೋಟಿ ರೂ. ವೆಚ್ಚದಲ್ಲಿ ಈ ಬಹುಮಹಡಿ ಕಟ್ಟಡವನ್ನು ನಿರ್ಮಿಸಲಾಗಿದೆ. ಒಟ್ಟು 2,618 ಚದರ ಮೀಟರ್ ಅಳತೆಯ ನಿವೇಶನದಲ್ಲಿ ತಲೆಯೆತ್ತಿರುವ ಈ ಕಟ್ಟಡವು ಎರಡು ನೆಲ ಅಂತಸ್ತುಗಳು, ಐದು ಮಹಡಿಗಳು ಹಾಗೂ ತಾರಸಿ ಮಹಡಿಯನ್ನು ಒಳಗೊಂಡಿದೆ. ಲೋವರ್ ಬೇಸ್ಮೆಂಟ್ನಲ್ಲಿ 58 ಕಾರುಗಳು ಹಾಗೂ ಅಪ್ಪರ್ ಬೇಸ್ಮೆಂಟ್ನಲ್ಲಿ 38 ಕಾರುಗಳ ನಿಲುಗಡೆಗೆ ಜಾಗ ಕಲ್ಪಿಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಈ ಸಂದರ್ಭದಲ್ಲಿ ಇದ್ದರು.ಇದನ್ನೂ ಓದಿ: ಇಂಡಿಗೋ ಸಮಸ್ಯೆ – ಪೈಲಟ್ ರಜೆ ನಿಯಮಗಳನ್ನು ಸಡಿಲಿಸಿದ DGCA
ಇಂದು ಗಾಂಧಿನಗರದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಕೇಂದ್ರ ಕಚೇರಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಶ್ರೀ ಎಂ.ಬಿ. ಪಾಟೀಲ್ ಹಾಗೂ ಹಿರಿಯ ಕಾಂಗ್ರೆಸ್ ಶಾಸಕರಾದ ಶ್ರೀ ಆರ್.ವಿ.ದೇಶಪಾಂಡೆ ಅವರೊಂದಿಗೆ ಪಾಲ್ಗೊಂಡು, ಕರ್ನಾಟಕದಲ್ಲಿ ಕೈಗಾರಿಕಾ ಕ್ರಾಂತಿಗೆ ನೂತನ ಕಚೇರಿಯು… pic.twitter.com/uZ3U4CrJ3u
— DK Shivakumar (@DKShivakumar) December 5, 2025
ಇದೇ ವೇಳೆ, ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಅವರು ಕೆ.ಐ.ಎ.ಡಿ.ಬಿ.ಯ 2 ಕೋಟಿ ರೂ. ಲಾಭಾಂಶವನ್ನು ಮುಖ್ಯಮಂತ್ರಿ ಅವರ ಪರಿಹಾರ ನಿಧಿಗೆ ಹಸ್ತಾಂತರಿಸಿದರು. ಹಿಂದೆ ಕೈಗಾರಿಕಾ ಸಚಿವರಾಗಿದ್ದಾಗ ಈ ಕಟ್ಟಡ ಕಟ್ಟಲು ಶಾಸಕ ಆರ್.ವಿ.ದೇಶಪಾಂಡೆ ಅವರು ತೀರ್ಮಾನ ತೆಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಅವರನ್ನೂ ಸನ್ಮಾನಿಸಲಾಯಿತು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್, ಕೆಐಎಡಿಬಿ ಸಿಇಒ ಡಾ.ಮಹೇಶ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.

