Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಿ: ಸಿದ್ದರಾಮಯ್ಯ

Bengaluru City

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಿ: ಸಿದ್ದರಾಮಯ್ಯ

Public TV
Last updated: August 29, 2024 3:53 pm
Public TV
Share
4 Min Read
Bengaluru 16thFinanceCommission CMSiddaramaiah
SHARE

ಬೆಂಗಳೂರು: 15ನೇ ಹಣಕಾಸು ಆಯೋಗದಲ್ಲಿ (15th Finance Commission) ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (16th Finance Commission) 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ನಡೆದ 16ನೇ ಹಣಕಾಸು ಆಯೋಗದ (16th Finance Commission) ಸಭೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಆಯೋಗಕ್ಕೆ ತಿಳಿಸಿದರು. ಜೊತೆಗೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ನಷ್ಟವನ್ನು ಅಂಕಿಅಂಶಗಳ ಸಮೇತ ಆಯೋಗದ ಮುಂದಿಟ್ಟು ರಾಜ್ಯಕ್ಕೆ ನ್ಯಾಯ ಕೊಡುವಂತೆ  ಮನವಿ ಮಾಡಿದರು.

ಭಾರತದ ಅಭಿವೃದ್ಧಿಗೆ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5ರಷ್ಟಿದ್ದರೂ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ. ಇಡೀ ದೇಶದಲ್ಲೇ ಜಿಡಿಪಿ ದೇಣಿಗೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ರೂ.4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ 45ಸಾವಿರ ಕೋಟಿ ರೂ. ಹಾಗೂ ಅನುದಾನದ ರೂಪದಲ್ಲಿ 15 ಸಾವಿರ ಕೋಟಿ ರೂ. ದೊರಕುತ್ತಿದೆ. ಅಂದರೆ ಕರ್ನಾಟಕ ನೀಡುವ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ ಎಂದು ಅವರು ಆರೋಪಿಸಿದರು.

15ನೇ ಹಣಕಾಸು ಆಯೋಗದಿಂದ ಅತಿಹೆಚ್ಚು ಅನ್ಯಾಯಕ್ಕೊಳಗಾದ ರಾಜ್ಯ ಕರ್ನಾಟಕ. ಇದನ್ನು ಸರಿಪಡಿಸುವ ಜೊತೆಗೆ 16ನೇ ಹಣಕಾಸು ಆಯೋಗದ ಮೇಲೆ ನಾಡಿನ 7 ಕೋಟಿ ಕನ್ನಡಿಗರು ಇಟ್ಟಿರುವ ನಿರೀಕ್ಷೆಗಳೇನು ಎಂಬುದನ್ನು ಅತ್ಯಂತ ಸಮರ್ಥವಾಗಿ ಹಣಕಾಸು ಆಯೋಗದ ಮುಂದಿರಿಸಿದ್ದೇನೆ.

ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗಿನ ಇಂದಿನ ಸಭೆಯಲ್ಲಿ ನನ್ನ… pic.twitter.com/aVANWDTx5l

— CM of Karnataka (@CMofKarnataka) August 29, 2024

15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26ರ 5 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ರೂ.68,275 ಕೋಟಿ ರೂ. ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ 11,495 ಕೋಟಿ ರೂ. ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದ್ದರಿಂದ ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲಾ ಕಾರಣಗಳಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು 79770ಕೋಟಿ ರೂ. ನಷ್ಟ ಉಂಟಾಗಿದೆ ಅಂತ ಅಂಕಿಅಂಶಗಳನ್ನ ಆಯೋಗದ ಮುಂದಿಟ್ಟರು.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇತರ ರಾಜ್ಯಗಳಿಗೆ ಪ್ರತಿ ವರ್ಷ 35 ಸಾವಿರ ರೂ. ನಿಂದ 40 ಸಾವಿರ ಕೋಟಿ ರೂ. ಇತರ ರಾಜ್ಯಗಳಿಗೆ ಆದಾಯ ವರ್ಗಾವಣೆ ಮಾಡಿರುವುದನ್ನು ಕರ್ನಾಟಕ ಗಮನಿಸಿದೆ. ಇದು ಜಿಎಸ್‌ಡಿಪಿಯ ಶೇ.1.8ರಷ್ಟಿದೆ. ರಾಜ್ಯದಿಂದ ಹೊರಗೆ ವರ್ಗಾವಣೆಯಾಗುತ್ತಿರುವ ಈ ಮೊತ್ತ ರಾಜ್ಯದ ಒಟ್ಟು ಆದಾಯದ ಶೇ.50ರಿಂದ 55ರಷ್ಟಾಗಿದೆ. ಈ ರೀತಿ ಪಾಲಿನ ಪರಿಗಣನೆಯಲ್ಲಿನ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ. ಸೆಸ್‌ ಮತ್ತು ಸರ್ಚಾರ್ಜ್‌ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೊಳ್ಳುವ ಬಾಬ್ತಿನಲ್ಲಿ ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕೇಂದ್ರ ಸರ್ಕಾರ ಸೆಸ್‌ ಮತ್ತು ಸರ್ಚಾರ್ಜ್‌ ಮೇಲಿನ ಅವಲಂಬನೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ಒಟ್ಟು ತೆರಿಗೆ ಆದಾಯಕ್ಕೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೊಳ್ಳಬಹುದಾದ ಬಾಬ್ತಿನ ಪ್ರಮಾಣ ಹೆಚ್ಚಾಗುತ್ತಿಲ್ಲ. ಇದರಿಂದಾಗಿ ರಾಜ್ಯಗಳಿಗೆ ಬಹಳಷ್ಟು ನಷ್ಟ ಉಂಟಾಗುತ್ತಿದೆ ಅಂತ ಆಯೋಗದ ಗಮನಕ್ಕೆ ತಂದರು.

ಹಂಚಿಕೊಳ್ಳಬಹುದಾದ ಬಾಬ್ತಿನಲ್ಲಿ ಸೆಸ್‌ ಮತ್ತು ಸರ್ಚಾರ್ಜ್ ನಿಂದಾಗಿ ರಾಜ್ಯಕ್ಕೆ 2017-18 ರಿಂದ 2024-25 ನೇ ಅವಧಿಯಲ್ಲಿ 53,359 ಕೋಟಿ ರೂ. ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರದ ಪಾಲಿನಲ್ಲಿ ಇಷ್ಟೆಲ್ಲಾ ಕಡಿತ ಉಂಟಾಗಿದ್ದರೂ, ರಾಜ್ಯ ಸರ್ಕಾರ ತಾನು ನುಡಿದಂತೆ ಐದು ಗ್ಯಾರಂಟಿಯಂತಹ ಪ್ರಮುಖ ಯೋಜನೆಗಳ ಜಾರಿಯಲ್ಲಿ ಬದ್ಧತೆಯನ್ನು ತೋರಿಸಿದೆ. ಬಂಡವಾಳ ವೆಚ್ಚದಲ್ಲಿ ಸಹ ನಾವು ಯಾವುದೇ ಹೊಂದಾಣಿಕೆಯನ್ನು ಮಾಡಿಲ್ಲ. ಬಂಡವಾಳ ವೆಚ್ಚದಲ್ಲಿ ಹೆಚ್ಚಳ ಉಂಟಾಗಿದ್ದರೂ, ಕರ್ನಾಟಕ 2013-14 ರ ಅವಧಿಯಿಂದಲೂ ಬಂಡವಾಳ ವೆಚ್ಚದ ಮೊತ್ತವನ್ನು ತನ್ನ ಜಿಎಸ್‌ಡಿಪಿಯ ಶೇ.2ರ ಮಿತಿಯಲ್ಲಿಯೇ ನಿರ್ವಹಿಸಿದೆ. ಬಂಡವಾಳ ವೆಚ್ಚದಲ್ಲಿ ರಾಜ್ಯ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಆದರೆ ಕೇಂದ್ರ ಹಣಕಾಸು ಪಾಲಿನಲ್ಲಿನ ಕಡಿತದಿಂದಾಗಿ ರಾಜ್ಯಗಳಿಗೆ ಭೌತಿಕ ಮತ್ತು ಮಾನವ ಮೂಲಸೌಲಭ್ಯಗಳ ಮೇಲೆ ಹೂಡಿಕೆಗೆ ಅನೇಕ ಮಿತಿಗಳು ಎದುರಾಗಿವೆ. ಈ ವಿಷಯವನ್ನು ಪರಿಹರಿಸಬೇಕಾಗಿದೆ ಎಂದು ಮನವಿ ಮಾಡಿದರು.

ಆರ್ಥಿಕವಾಗಿ ಬಲಿಷ್ಠವಾಗಿರುವ ರಾಜ್ಯಗಳು ಇತರ ಬಡ ರಾಜ್ಯಗಳಿಗೆ ನೆರವಾಗಲು ಬದ್ಧವಾಗಿವೆ. ಆದರೆ ಇದು ತಮ್ಮದೇ ನಾಡಿನ ಜನರನ್ನು ಅಥವಾ ಆರ್ಥಿಕ ದಕ್ಷತೆಯನ್ನು ಸಂಕಷ್ಟಕ್ಕೆ ಸಿಲುಕಿಸಬಾರದು. ರಾಜ್ಯಗಳು ಗಳಿಸುವ ಸಂಪನ್ಮೂಲದ ಒಂದು ದೊಡ್ಡ ಪಾಲು ಅವುಗಳ ನಡುವೆಯೇ ಹಂಚಿಕೆಯಾಗಬೇಕು. ರಾಜ್ಯವು ಸಹ ಪ್ರಾದೇಶಿಕ ಅಸಮಾನತೆಯನ್ನು ಎದುರಿಸುತ್ತಿವೆ. ಉದಾಹರಣೆಗೆ ಕಲ್ಯಾಣ ಕರ್ನಾಟಕದ ಪ್ರದೇಶ. ಇದರೊಂದಿಗೆ ನಗರೀಕರಣದ ಸವಾಲುಗಳನ್ನು ಎದುರಿಸುತ್ತಿವೆ. ಈ ಕುರಿತು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಮನವಿ ಮಾಡಿದರು.

TAGGED:15th Finance Commission16th Finance Commissioncm siddaramaiah
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 India Team India champion
Cricket

ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾಗೆ ಬಂಪರ್‌; 131 ಕೋಟಿ ಬಹುಮಾನ ಘೋಷಿಸಿದ BCCI

Public TV
By Public TV
6 minutes ago
Donald Trump 1
Latest

ಇರಾನ್ ಹಡಗುಗಳನ್ನು ವಶಪಡಿಸಿಕೊಳ್ಳೋದಕ್ಕಿಂತ ಮುಳುಗಿಸೋದೆ ನಮ್ಮ ಸೇನೆಗೆ ಮಜಾ: ಟ್ರಂಪ್‌

Public TV
By Public TV
24 minutes ago
United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
42 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
52 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
57 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?