Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಿ: ಸಿದ್ದರಾಮಯ್ಯ

Public TV
Last updated: August 29, 2024 3:53 pm
Public TV
Share
4 Min Read
Bengaluru 16thFinanceCommission CMSiddaramaiah
SHARE

ಬೆಂಗಳೂರು: 15ನೇ ಹಣಕಾಸು ಆಯೋಗದಲ್ಲಿ (15th Finance Commission) ರಾಜ್ಯಕ್ಕೆ ಆದ ಅನ್ಯಾಯವನ್ನು ಸರಿಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (16th Finance Commission) 16ನೇ ಹಣಕಾಸು ಆಯೋಗಕ್ಕೆ ಮನವಿ ಮಾಡಿದ್ದಾರೆ. ಖಾಸಗಿ ಹೊಟೇಲ್‌ನಲ್ಲಿ ನಡೆದ 16ನೇ ಹಣಕಾಸು ಆಯೋಗದ (16th Finance Commission) ಸಭೆಯಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಆಯೋಗಕ್ಕೆ ತಿಳಿಸಿದರು. ಜೊತೆಗೆ 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಆದ ನಷ್ಟವನ್ನು ಅಂಕಿಅಂಶಗಳ ಸಮೇತ ಆಯೋಗದ ಮುಂದಿಟ್ಟು ರಾಜ್ಯಕ್ಕೆ ನ್ಯಾಯ ಕೊಡುವಂತೆ  ಮನವಿ ಮಾಡಿದರು.

ಭಾರತದ ಅಭಿವೃದ್ಧಿಗೆ ಕರ್ನಾಟಕ ಪ್ರಧಾನ ಪಾತ್ರ ವಹಿಸುತ್ತಿದೆ. ಒಟ್ಟು ಜನಸಂಖ್ಯೆಯ ಶೇ.5ರಷ್ಟಿದ್ದರೂ ರಾಷ್ಟ್ರೀಯ ಜಿಡಿಪಿಗೆ ಕರ್ನಾಟಕ ಅಂದಾಜು ಶೇ.8.4 ರಷ್ಟು ಪಾಲು ನೀಡುತ್ತಿದೆ. ಇಡೀ ದೇಶದಲ್ಲೇ ಜಿಡಿಪಿ ದೇಣಿಗೆಯಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ. ಪ್ರತಿ ವರ್ಷ ದೇಶದ ಒಟ್ಟು ತೆರಿಗೆ ಆದಾಯಕ್ಕೆ ಕರ್ನಾಟಕ ಸುಮಾರು ರೂ.4 ಲಕ್ಷ ಕೋಟಿಯಷ್ಟು ಪಾಲು ನೀಡುತ್ತಿದ್ದರೂ ರಾಜ್ಯಕ್ಕೆ ತೆರಿಗೆ ಪಾಲಿನ ರೂಪದಲ್ಲಿ 45ಸಾವಿರ ಕೋಟಿ ರೂ. ಹಾಗೂ ಅನುದಾನದ ರೂಪದಲ್ಲಿ 15 ಸಾವಿರ ಕೋಟಿ ರೂ. ದೊರಕುತ್ತಿದೆ. ಅಂದರೆ ಕರ್ನಾಟಕ ನೀಡುವ ಪ್ರತಿ ಒಂದು ರೂಪಾಯಿಗೆ ರಾಜ್ಯ ಕೇವಲ 15 ಪೈಸೆಯನ್ನು ಮಾತ್ರ ಹಿಂದಕ್ಕೆ ಪಡೆಯುತ್ತಿದೆ ಎಂದು ಅವರು ಆರೋಪಿಸಿದರು.

15ನೇ ಹಣಕಾಸು ಆಯೋಗದಿಂದ ಅತಿಹೆಚ್ಚು ಅನ್ಯಾಯಕ್ಕೊಳಗಾದ ರಾಜ್ಯ ಕರ್ನಾಟಕ. ಇದನ್ನು ಸರಿಪಡಿಸುವ ಜೊತೆಗೆ 16ನೇ ಹಣಕಾಸು ಆಯೋಗದ ಮೇಲೆ ನಾಡಿನ 7 ಕೋಟಿ ಕನ್ನಡಿಗರು ಇಟ್ಟಿರುವ ನಿರೀಕ್ಷೆಗಳೇನು ಎಂಬುದನ್ನು ಅತ್ಯಂತ ಸಮರ್ಥವಾಗಿ ಹಣಕಾಸು ಆಯೋಗದ ಮುಂದಿರಿಸಿದ್ದೇನೆ.

ಹಣಕಾಸು ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗಿನ ಇಂದಿನ ಸಭೆಯಲ್ಲಿ ನನ್ನ… pic.twitter.com/aVANWDTx5l

— CM of Karnataka (@CMofKarnataka) August 29, 2024

15ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನೀಡುವ ಪಾಲು 4.713 ಯಿಂದ 3.647 ಗೆ ತಗ್ಗಿದೆ. ಇದರಿಂದಾಗಿ 2021-26ರ 5 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ರೂ.68,275 ಕೋಟಿ ರೂ. ನಷ್ಟ ಉಂಟಾಗಿದೆ. ಕರ್ನಾಟಕಕ್ಕೆ ದೊರೆತ ಪಾಲಿನಲ್ಲಿ ಉಂಟಾದ ಇಷ್ಟು ದೊಡ್ಡ ಮೊತ್ತದ ಕಡಿತದ ಬಗ್ಗೆ ಹಣಕಾಸು ಆಯೋಗಕ್ಕೆ ಅರಿವಿದ್ದು, ರಾಜ್ಯಕ್ಕೆ 11,495 ಕೋಟಿ ರೂ. ನಿರ್ದಿಷ್ಟ ಅನುದಾನ ಒದಗಿಸಲು ಶಿಫಾರಸ್ಸು ಮಾಡಿದೆ. ಆದರೆ ಕೇಂದ್ರ ಸರ್ಕಾರ ಆಯೋಗದ ಈ ಶಿಫಾರಸ್ಸನ್ನು ಒಪ್ಪಿಕೊಂಡಿಲ್ಲ. ಆದ್ದರಿಂದ ಕರ್ನಾಟಕ ಈ ಅನುದಾನ ಪಡೆಯುವಲ್ಲಿಯೂ ವಂಚಿತವಾಗಿದೆ. ಈ ಎಲ್ಲಾ ಕಾರಣಗಳಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ಕರ್ನಾಟಕಕ್ಕೆ ಒಟ್ಟು 79770ಕೋಟಿ ರೂ. ನಷ್ಟ ಉಂಟಾಗಿದೆ ಅಂತ ಅಂಕಿಅಂಶಗಳನ್ನ ಆಯೋಗದ ಮುಂದಿಟ್ಟರು.

15ನೇ ಹಣಕಾಸು ಆಯೋಗದ ಅವಧಿಯಲ್ಲಿ ಇತರ ರಾಜ್ಯಗಳಿಗೆ ಪ್ರತಿ ವರ್ಷ 35 ಸಾವಿರ ರೂ. ನಿಂದ 40 ಸಾವಿರ ಕೋಟಿ ರೂ. ಇತರ ರಾಜ್ಯಗಳಿಗೆ ಆದಾಯ ವರ್ಗಾವಣೆ ಮಾಡಿರುವುದನ್ನು ಕರ್ನಾಟಕ ಗಮನಿಸಿದೆ. ಇದು ಜಿಎಸ್‌ಡಿಪಿಯ ಶೇ.1.8ರಷ್ಟಿದೆ. ರಾಜ್ಯದಿಂದ ಹೊರಗೆ ವರ್ಗಾವಣೆಯಾಗುತ್ತಿರುವ ಈ ಮೊತ್ತ ರಾಜ್ಯದ ಒಟ್ಟು ಆದಾಯದ ಶೇ.50ರಿಂದ 55ರಷ್ಟಾಗಿದೆ. ಈ ರೀತಿ ಪಾಲಿನ ಪರಿಗಣನೆಯಲ್ಲಿನ ಅಸಮತೋಲನದಿಂದಾಗಿ ಆರ್ಥಿಕವಾಗಿ ಹಾಗೂ ಜನಸಂಖ್ಯೆ ನಿಯಂತ್ರಣ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕರ್ನಾಟಕ ಹಾಗೂ ಈ ರೀತಿಯ ರಾಜ್ಯಗಳು ದಂಡ ಎದುರಿಸುವಂತಾಗಿದೆ. ಸೆಸ್‌ ಮತ್ತು ಸರ್ಚಾರ್ಜ್‌ ಕೇಂದ್ರ ಮತ್ತು ರಾಜ್ಯಗಳ ನಡುವೆ ಹಂಚಿಕೊಳ್ಳುವ ಬಾಬ್ತಿನಲ್ಲಿ ಬರುವುದಿಲ್ಲ. ವರ್ಷದಿಂದ ವರ್ಷಕ್ಕೆ ಕೇಂದ್ರ ಸರ್ಕಾರ ಸೆಸ್‌ ಮತ್ತು ಸರ್ಚಾರ್ಜ್‌ ಮೇಲಿನ ಅವಲಂಬನೆಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಬಂದಿದೆ. ಇದರಿಂದಾಗಿ ಒಟ್ಟು ತೆರಿಗೆ ಆದಾಯಕ್ಕೆ ಅನುಗುಣವಾಗಿ ಕೇಂದ್ರ ಹಾಗೂ ರಾಜ್ಯಗಳ ನಡುವೆ ಹಂಚಿಕೊಳ್ಳಬಹುದಾದ ಬಾಬ್ತಿನ ಪ್ರಮಾಣ ಹೆಚ್ಚಾಗುತ್ತಿಲ್ಲ. ಇದರಿಂದಾಗಿ ರಾಜ್ಯಗಳಿಗೆ ಬಹಳಷ್ಟು ನಷ್ಟ ಉಂಟಾಗುತ್ತಿದೆ ಅಂತ ಆಯೋಗದ ಗಮನಕ್ಕೆ ತಂದರು.

ಹಂಚಿಕೊಳ್ಳಬಹುದಾದ ಬಾಬ್ತಿನಲ್ಲಿ ಸೆಸ್‌ ಮತ್ತು ಸರ್ಚಾರ್ಜ್ ನಿಂದಾಗಿ ರಾಜ್ಯಕ್ಕೆ 2017-18 ರಿಂದ 2024-25 ನೇ ಅವಧಿಯಲ್ಲಿ 53,359 ಕೋಟಿ ರೂ. ನಷ್ಟ ಉಂಟಾಗಿದೆ. ಕೇಂದ್ರ ಸರ್ಕಾರದ ಪಾಲಿನಲ್ಲಿ ಇಷ್ಟೆಲ್ಲಾ ಕಡಿತ ಉಂಟಾಗಿದ್ದರೂ, ರಾಜ್ಯ ಸರ್ಕಾರ ತಾನು ನುಡಿದಂತೆ ಐದು ಗ್ಯಾರಂಟಿಯಂತಹ ಪ್ರಮುಖ ಯೋಜನೆಗಳ ಜಾರಿಯಲ್ಲಿ ಬದ್ಧತೆಯನ್ನು ತೋರಿಸಿದೆ. ಬಂಡವಾಳ ವೆಚ್ಚದಲ್ಲಿ ಸಹ ನಾವು ಯಾವುದೇ ಹೊಂದಾಣಿಕೆಯನ್ನು ಮಾಡಿಲ್ಲ. ಬಂಡವಾಳ ವೆಚ್ಚದಲ್ಲಿ ಹೆಚ್ಚಳ ಉಂಟಾಗಿದ್ದರೂ, ಕರ್ನಾಟಕ 2013-14 ರ ಅವಧಿಯಿಂದಲೂ ಬಂಡವಾಳ ವೆಚ್ಚದ ಮೊತ್ತವನ್ನು ತನ್ನ ಜಿಎಸ್‌ಡಿಪಿಯ ಶೇ.2ರ ಮಿತಿಯಲ್ಲಿಯೇ ನಿರ್ವಹಿಸಿದೆ. ಬಂಡವಾಳ ವೆಚ್ಚದಲ್ಲಿ ರಾಜ್ಯ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಆದರೆ ಕೇಂದ್ರ ಹಣಕಾಸು ಪಾಲಿನಲ್ಲಿನ ಕಡಿತದಿಂದಾಗಿ ರಾಜ್ಯಗಳಿಗೆ ಭೌತಿಕ ಮತ್ತು ಮಾನವ ಮೂಲಸೌಲಭ್ಯಗಳ ಮೇಲೆ ಹೂಡಿಕೆಗೆ ಅನೇಕ ಮಿತಿಗಳು ಎದುರಾಗಿವೆ. ಈ ವಿಷಯವನ್ನು ಪರಿಹರಿಸಬೇಕಾಗಿದೆ ಎಂದು ಮನವಿ ಮಾಡಿದರು.

ಆರ್ಥಿಕವಾಗಿ ಬಲಿಷ್ಠವಾಗಿರುವ ರಾಜ್ಯಗಳು ಇತರ ಬಡ ರಾಜ್ಯಗಳಿಗೆ ನೆರವಾಗಲು ಬದ್ಧವಾಗಿವೆ. ಆದರೆ ಇದು ತಮ್ಮದೇ ನಾಡಿನ ಜನರನ್ನು ಅಥವಾ ಆರ್ಥಿಕ ದಕ್ಷತೆಯನ್ನು ಸಂಕಷ್ಟಕ್ಕೆ ಸಿಲುಕಿಸಬಾರದು. ರಾಜ್ಯಗಳು ಗಳಿಸುವ ಸಂಪನ್ಮೂಲದ ಒಂದು ದೊಡ್ಡ ಪಾಲು ಅವುಗಳ ನಡುವೆಯೇ ಹಂಚಿಕೆಯಾಗಬೇಕು. ರಾಜ್ಯವು ಸಹ ಪ್ರಾದೇಶಿಕ ಅಸಮಾನತೆಯನ್ನು ಎದುರಿಸುತ್ತಿವೆ. ಉದಾಹರಣೆಗೆ ಕಲ್ಯಾಣ ಕರ್ನಾಟಕದ ಪ್ರದೇಶ. ಇದರೊಂದಿಗೆ ನಗರೀಕರಣದ ಸವಾಲುಗಳನ್ನು ಎದುರಿಸುತ್ತಿವೆ. ಈ ಕುರಿತು ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಮನವಿ ಮಾಡಿದರು.

TAGGED:15th Finance Commission16th Finance Commissioncm siddaramaiah
Share This Article
Facebook Whatsapp Whatsapp Telegram

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
7 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
8 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
8 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
9 hours ago
Eshwar Khandre
Bengaluru City

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

Public TV
By Public TV
9 hours ago
weather
Bengaluru City

ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?