Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Bengaluru City

ಮುಡಾ ವಿಚಾರದಲ್ಲಿ ಸಿಎಂಗೆ ಯಾವುದೇ ಆತಂಕ ಇಲ್ಲ: ಜಿ.ಪರಮೇಶ್ವರ್

Public TV
Last updated: September 1, 2024 7:04 pm
Public TV
Share
2 Min Read
G PARAMESHWAR
SHARE

ಬೆಂಗಳೂರು: ಮುಡಾ (MUDA Scam) ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಆತಂಕ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ಸಿಎಂಗೆ ಯಾವುದೇ ಆತಂಕ ಇಲ್ಲ. ಅವರು ಮುಡಾ ವಿಚಾರದಲ್ಲಿ ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ಅದನ್ನೇ ಅವರು ಎಲ್ಲರಿಗೂ ಹೇಳ್ತಿದ್ದಾರೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಅಂತನೇ ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅಂತಾ ಅವರು ಹೇಳ್ತನೇ ಇದ್ದಾರೆ ಎಂದು ಸಿಎಂ ಪರ ಸಮರ್ಥನೆಯ ಮಾತುಗಳನ್ನಾಡಿದರು. ಇದನ್ನೂ ಓದಿ: ಮೈಸೂರು ದಸರಾ 2024| ಗಜಪಡೆಗೆ ಇಂದಿನಿಂದ ಮರಳು ಮೂಟೆ ಹೊರಿಸುವ ತಾಲೀಮು

ಸಿಎಂ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಹೈಕಮಾಂಡ್ ಹೇಳಿದ ಕೆಲವು ವಿಷಯಗಳ ಬಗ್ಗೆಯೂ ಚರ್ಚೆ ನಡೆಸಿದೆವು. ಇಲ್ಲಿನ ವಿದ್ಯಮಾನ, ಕೋರ್ಟ್ ನಡೆ ನೋಡಿಕೊಂಡು ನಂತರ ರಾಷ್ಟ್ರಪತಿಗಳ ಭೇಟಿ ಬಗ್ಗೆ ಚರ್ಚೆ ಮಾಡುತ್ತೇವೆ. ಅಂತಹ ಸಂದರ್ಭ ಬಂದರೆ ದೆಹಲಿಗೆ ಹೋಗುತ್ತೇವೆ ಎಂದರು.

ನಿನ್ನೆಯ ಸಭೆಯಲ್ಲಿ ನ್ಯಾ.ಕುನ್ಹಾ ಅವರ ವರದಿ ಬಗ್ಗೆ ಚರ್ಚೆ ಆಗಲಿಲ್ಲ. ಆಯೋಗಗಳನ್ನು ಮಾಡುವ ಉದ್ದೇಶವೇ ಸತ್ಯ ಪತ್ತೆ ಹಚ್ಚವುದಕ್ಕೆ. ಸರ್ಕಾರಕ್ಕೆ ಸತ್ಯ ಗೊತ್ತಾಗಲು ಆಯೋಗ ಮಾಡ್ತೇವೆ. ಆಯೋಗದವ್ರು ವರದಿ ಏನು ಕೊಟ್ಟಿದ್ದಾರೆ ನೋಡ್ಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಸಂಪುಟ ಸಭೆಯಲ್ಲಿ ಕುನ್ಹಾ ಅವರ ವರದಿ ಬಗ್ಗೆ ಅಜೆಂಡಾ ಬಂದರೆ ಚರ್ಚೆ ಮಾಡುತ್ತೇವೆ. ಸಿಎಂ ಅವರ ಅಜೆಂಡಾ ಬಗ್ಗೆ ನಿರ್ಧರಿಸೋದು ಸಂಪುಟದ ಮುಂದೆ ಬಂದರೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ನಿತೀಶ್‌ ಕುಮಾರ್‌ ಪಕ್ಷದ ನಾಯಕ ತ್ಯಾಗಿ JDU ವಕ್ತಾರ ಸ್ಥಾನಕ್ಕೆ ರಾಜೀನಾಮೆ

ಲೋಕಾಯುಕ್ತದವರು ರಾಜ್ಯಪಾಲರಿಗೆ ಹೆಚ್‌ಡಿಕೆ ( HD Kumaraswamy) ಪ್ರಕರಣದ ಬಗ್ಗೆ ಎಲ್ಲ ಮಾಹಿತಿ ಸಲ್ಲಿಸಿದ್ದಾರೆ. ಅವರು ಈ ಅರ್ಜಿಗಾದರೂ ಕ್ರಮ ತಗೆದುಕೊಳ್ಳಲಿ. ಕೆಐಎಡಿಬಿ ಸಿಎ ನಿವೇಶನ ಕುರಿತ ಬಿಜೆಪಿಯ (BJP) ದೂರಿನ ಬಗ್ಗೆ ರಾಜ್ಯಪಾಲರು ನಮ್ಮ ಜತೆ ಏನೂ ಪ್ರಸ್ತಾಪ ಮಾಡಲಿಲ್ಲ. ನಿನ್ನೆ ಸಿಎಂ ಸಭೆಯಲ್ಲೂ ಅದರ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಆಗ್ರಹಿಸಿದರು.

ರಾಜ್ಯಪಾಲರ (Governor) ಮುಂದೆ ಪ್ರಾಸಿಕ್ಯೂಷನ್‌ಗೆ ಯಾವುದೇ ಅರ್ಜಿ ಬಾಕಿ ಇಲ್ಲದಿರುವ ವಿಚಾರದ ಕುರಿತು ಮಾತನಾಡಿ, ನಮ್ಮ ದೃಷ್ಟಿಕೋನವೇ ಬೇರೆ, ರಾಜ್ಯಪಾಲರ ದೃಷ್ಟಿಕೋನವೇ ಬೇರೆ. ಅವರಿಗೆ ಫೈಲ್ ಹೋದ ಮೇಲೆ ಅವರು ಸ್ಪಷ್ಟೀಕರಣ ಕೇಳಿ ವಾಪಸ್ ಲೋಕಾಯುಕ್ತಕ್ಕೆ ಕಳಿಸಿದ್ದಾಗಿ ಹೇಳಿದರು. ಆದರೆ ಸ್ಪಷ್ಟನೆ ಕೇಳಿ ಫೈಲ್ ವಾಪಸ್ ಕಳಿಸೋವರೆಗೂ ಅದು ರಾಜ್ಯಪಾಲರ ಬಳಿಯೇ ಇತ್ತು. ಆಗ ಆ ಅರ್ಜಿ ಅವರ ಮುಂದೆ ಇದ್ದ ಹಾಗೆಯೇ ಅಲ್ವಾ? ಆಗೆಲ್ಲ ಯಾಕೆ ಅವರು ಸುಮ್ನಿದ್ರು ಎಂದು ಪ್ರಶ್ನಿಸಿದರು.

ಈಗ ಹೆಚ್‌ಡಿಕೆ ಪ್ರಕರಣದ ಅರ್ಜಿ ಬಾಕಿ ಇದೆ ಅಂತಾ ರಾಜ್ಯಪಾಲರು ಅಂದಿದ್ದಾರೆ. ಈಗ ಈ ಬಗ್ಗೆಯಾದರೂ ಅವರು ಕ್ರಮ ತಗೋಬೇಕಲ್ಲ. ಇನ್ನೂ ರೆಡ್ಡಿ, ಜೊಲ್ಲೆ, ನಿರಾಣಿ ವಿರುದ್ಧದ ಅರ್ಜಿ ಲೋಕಾಯುಕ್ತದಿಂದ ಸ್ಪಷ್ಟನೆ ಸಹಿತ ವಾಪಸ್ ರಾಜ್ಯಪಾಲರಿಗೆ ಕಳಿಸಲಾಗುತ್ತದೆ. ಆಗ ಅದನ್ನು ತಿರಸ್ಕರಿಸುವ, ಪುರಸ್ಕರಿಸುವ ವಿಚಾರ ಅವರಿಗೆ ಬಿಟ್ಟಿದ್ದು ಎಂದರು. ಇದನ್ನೂ ಓದಿ: ಬೆಂಗಳೂರಲ್ಲಿ ಕಾರಿನ ಗಾಜು ಒಡೆದು ಕಳ್ಳತನ – ನಾಲ್ವರ ಬಂಧನ

TAGGED:bengalurucm siddaramaiahG Parameshwarhd kumaraswamyಜಿ.ಪರಮೇಶ್ವರ್ಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

Supreme Court 1
Karnataka

ಮುರುಘಾ ಮಠದ ಆಸ್ತಿ ಕೇಸ್ – ಸುಪ್ರೀಂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ನೋಟಿಸ್

Public TV
By Public TV
2 minutes ago
AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
26 minutes ago
Nikhil Kumaraswamy
Bengaluru City

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

Public TV
By Public TV
31 minutes ago
Delhi Police
Crime

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

Public TV
By Public TV
46 minutes ago
Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
1 hour ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?