Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಧರ್ಮಸಂಕಟದಲ್ಲಿ ಸಿಎಂ ಸಿದ್ದರಾಮಯ್ಯ: ಕೃಷ್ಣ ಮಠಕ್ಕೆ ಹೋಗಲು ಹಿಂದೇಟು, 3 ಸಚಿವರಿಗೆ ರಾಷ್ಟ್ರಪತಿ ಕಾರ್ಯಕ್ರಮದ ಜವಾಬ್ದಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಧರ್ಮಸಂಕಟದಲ್ಲಿ ಸಿಎಂ ಸಿದ್ದರಾಮಯ್ಯ: ಕೃಷ್ಣ ಮಠಕ್ಕೆ ಹೋಗಲು ಹಿಂದೇಟು, 3 ಸಚಿವರಿಗೆ ರಾಷ್ಟ್ರಪತಿ ಕಾರ್ಯಕ್ರಮದ ಜವಾಬ್ದಾರಿ

Districts

ಧರ್ಮಸಂಕಟದಲ್ಲಿ ಸಿಎಂ ಸಿದ್ದರಾಮಯ್ಯ: ಕೃಷ್ಣ ಮಠಕ್ಕೆ ಹೋಗಲು ಹಿಂದೇಟು, 3 ಸಚಿವರಿಗೆ ರಾಷ್ಟ್ರಪತಿ ಕಾರ್ಯಕ್ರಮದ ಜವಾಬ್ದಾರಿ

Public TV
Last updated: June 15, 2017 8:51 am
Public TV
Share
2 Min Read
cm krishna mutt
SHARE

ಉಡುಪಿ: ಸಿಎಂ ಸಿದ್ದರಾಮಯ್ಯ ಇದೀಗ ಧರ್ಮಸಂಕಟಕ್ಕೆ ಸಿಲುಕಿದ್ದಾರಂತೆ. ಉಡುಪಿಯ ಕೃಷ್ಣಮಠಕ್ಕೆ ಯಾವತ್ತೂ ಭೇಟಿ ನೀಡದ ಸಿಎಂ ಇದೀಗ ಅನಿವಾರ್ಯವಾಗಿ ಮಠಕ್ಕೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ಆದರೆ ಈ ಕಾರ್ಯಕ್ರಮವನ್ನು ತಪ್ಪಿಸಿಕೊಳ್ಳುವ ಸಾಧ್ಯತೆಯೇ ಹೆಚ್ಚು ಎನ್ನಲಾಗುತ್ತಿದೆ.

ಇದೇ ಭಾನುವಾರ- ಜೂ.18 ಕ್ಕೆ ರಾಷ್ಟ್ರಪತಿಗಳು ಉಡುಪಿ ಪ್ರವಾಸ ಮಾಡಲಿದ್ದಾರೆ. ಕೃಷ್ಣಮಠ ಭೇಟಿಯೂ ಅದರಲ್ಲಿ ಒಂದು ಪ್ರಮುಖ ಕಾರ್ಯಕ್ರಮ. ಪ್ರೋಟೋಕಾಲ್ ಪ್ರಕಾರ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿಗಳ ಜೊತೆಗೆ ಇರಬೇಕು. ಅವರ ಜೊತೆಗೆ ಕೃಷ್ಣಮಠಕ್ಕೂ ಹೋಗಬೇಕು. ಅಲ್ಲಿಂದ ಕೊಲ್ಲೂರಿಗೂ ಹೋಗಿ ದೇವಿ ಮೂಕಾಂಬಿಕೆಯ ದರ್ಶನ ಮಾಡಬೇಕು. ಕೃಷ್ಣಮಠಕ್ಕೆ ಹೋಗಲ್ಲ ಅಂತ ಮೊದಲೇ ತೀರ್ಮಾನಿಸಿರುವ ಸಿಎಂ ನಿಜಕ್ಕೂ ಈಗ ಧರ್ಮಸಂಕಟದಲ್ಲಿದ್ದಾರೆ.

ಸಿಎಂ ಮಠಕ್ಕೆ ಬರಲೇ ಬೇಕು ಎಂದು ಉಡುಪಿ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತು ಸ್ಥಳೀಯ ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿದ್ದಾರೆ. ಆದರೆ ಕುರುಬ ಸಮುದಾಯದ ಅಸಮಾಧಾನದ ಭೀತಿಯಿಂದ ಸಿಎಂ ಉಡುಪಿಗೆ ಬರಲು ನಿರಾಕರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ರಾಷ್ಟ್ರಪತಿಗಳ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನ ಪ್ರಮೋದ್ ಮಧ್ವರಾಜ್, ರಮೇಶ್ ಕುಮಾರ್ ಸೇರಿದಂತೆ ಮೂವರು ಸಚಿವರಿಗೆ ಸಿಎಂ ನೀಡಿದ್ದು, ಈ ಮೂಲಕ ತಾವು ಕೃಷ್ಣಮಠಕ್ಕೆ ಬರೋದ್ರಿಂದ ಜಾಣತನದಿಂದ ಜಾರಿಕೊಂಡಿದ್ದಾರೆ ಎನ್ನಲಾಗಿದೆ.

ಇಷ್ಟಕ್ಕೂ ಸಿಎಂ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಯಾಕೆ ಬರಲ್ಲ? ಅನ್ನೋ ಪ್ರಶ್ನೆಗೆ ಬಲವಾದ ಕಾರಣಗಳಿದೆ.

ಕಾರಣ 1: ಉಡುಪಿಯ ಕೃಷ್ಣಮಠದಲ್ಲಿ ಒಂದುವರೆ ದಶಕದ ಹಿಂದೆ ನಡೆದ ಕನಕಗೋಪುರ ವಿವಾದ. ಕನಕನ ಕಿಂಡಿಯ ಮೇಲಿನ ಗೋಪುರ ಕೆಡವಿದಾಗ ಸಿದ್ದರಾಮಯ್ಯ ವಿರೋಧಿಸಿದ್ದರು. ಕುರುಬ ಸಮುದಾಯದ ಪ್ರತಿನಿಧಿಯಾಗಿ ಹೋರಾಟ ಮಾಡಿದ್ದರು. ಸಿಎಂ ಮತ್ತು ಕೃಷ್ಣಮಠದ ಸಂಬಂಧ ಅಲ್ಲಿಂದ ಹಳಸುತ್ತಲೇ ಬಂದಿತ್ತು.

ಕಾರಣ 2: ಕೃಷ್ಣಮಠದ ಸರ್ಕಾರಿಕರಣವಾಗಬೇಕು ಎಂದು ಪ್ರತಿಪಾದಿಸಿದವರಲ್ಲಿ ಸಿಎಂ ಪ್ರಮುಖರು. ಹೋರಾಡುತ್ತಾ ಬಂದ ಸಿದ್ದರಾಮಯ್ಯ ಸಿಎಂ ಆದ ಬಳಿಕ ಯಾಕೋ ತಣ್ಣಗಾಗಿದ್ದರು.

ಕಾರಣ 3: ಇನ್ನೊಂದು ಕಾರಣ ಬಹಳ ಕುತೂಹಲಕಾರಿ. ಬಾಲ್ಯದಲ್ಲಿ ಸಿದ್ದರಾಮಯ್ಯನವರು ತಂದೆಯ ಜೊತೆಗೆ ಮಠಕ್ಕೆ ಬಂದಾಗ ಆಗಿನ ಸ್ವಾಮಿಗಳು ಪ್ರಸಾದವನ್ನು ಎತ್ತರದಿಂದ ಕೈಗೆ ಹಾಕಿದ್ದರಂತೆ. ಹೀಗೆ ಪ್ರಸಾದ ಕೊಟ್ಟು ಅವಮಾನ ಮಾಡಿದ್ದಂತೆ. ಈ ಕಾರಣಕ್ಕೆ ಸಿದ್ದರಾಮಯ್ಯ ಕೃಷ್ಣಮಠಕ್ಕೆ ಕಾಲಿಟ್ಟಿಲ್ಲ ಎನ್ನಲಾಗುತ್ತಿದೆ.

ಕಳೆದ ನಾಲ್ಕುವರ್ಷದ ಅಧಿಕಾರಾವಧಿಯಲ್ಲಿ ಸಿದ್ದರಾಮಯ್ಯ ನಾಲ್ಕು ಬಾರಿ ಉಡುಪಿಗೆ ಬಂದ್ರೂ ಒಂದು ಬಾರಿಯೂ ಕೃಷ್ಣಮಠಕ್ಕೆ ಬಂದಿಲ್ಲ.

ಏನೇ ಆದ್ರೂ ಸಿದ್ದರಾಮಯ್ಯನವರನ್ನು ಮಠಕ್ಕೆ ಕರೆಸೋದು ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸವಾಲಾಗಿದೆ. ಮಠಕ್ಕೆ ಭೇಟಿ ನೀಡದೆ ಪ್ರತಿಷ್ಟೆ ಕಾಯ್ದುಕೊಳ್ಳೋದು ಸಿದ್ದರಾಮಯ್ಯನವರಿಗೂ ಸವಾಲಾಗಿದೆ. ಒಂದು ವೇಳೆ ಸಿಎಂ ಬರದೇ ಇದ್ದರೆ ಇದು ಕೇವಲ ಉಡುಪಿ ಮಠಕ್ಕಲ್ಲ ರಾಷ್ಟ್ರದ ಪ್ರಥಮ ಪ್ರಜೆಗೆ ಮಾಡಿದ ಅವಮಾನ ಎಂದು ಹೇಳಲಾಗುತ್ತಿದೆ. ರಾಷ್ಟ್ರಪತಿಯಾಗಿ ಕರ್ನಾಟಕ ರಾಜ್ಯಕ್ಕೆ ಪ್ರಣಬ್ ಮುಖರ್ಜಿ ಅವರ ಕೊನೆಯ ಭೇಟಿ ಇದು ಅನ್ನೋದು ಕೂಡಾ ಗಮನಾರ್ಹ. ರಾಷ್ಟ್ರೀಯ ಕಾಂಗ್ರೆಸ್ ನ ಅತ್ಯುನ್ನತ ನಾಯಕನಿಗೆ ಅವರದೇ ಪಕ್ಷದ ಸಿಎಂ ಒಬ್ಬರು ಮಾಡುವ ಅವಮಾನ ಎಂದು ಪ್ರಜ್ಞಾವಂತರು ಹೇಳುತ್ತಿದ್ದಾರೆ.

ramesh kumar 1

pramod madhwaraj

TAGGED:cmpresidentPublic TVsiddaramaiahsrikrishna muttudupiಉಡುಪಿಕೃಷ್ಣಮಠಪಬ್ಲಿಕ್ ಟಿವಿರಾಷ್ಟ್ರಪತಿಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

virat kohli anushka sharma
Cricket

IPLನಲ್ಲಿ ಕೇವಲ 1 ರನ್‌ನಿಂದ 66ನೇ ಅರ್ಧಶತಕ ಮಿಸ್‌ ಮಾಡಿಕೊಂಡ ಕೊಹ್ಲಿ – ಪತ್ನಿ ಅನುಷ್ಕಾ ರಿಯಾಕ್ಷನ್‌ ಹೇಗಿತ್ತು?

Public TV
By Public TV
10 minutes ago
Raichuru Accident 1
Districts

ಮಂತ್ರಾಲಯ ಬಳಿ ಭೀಕರ ಅಪಘಾತ – ಮೂರು ವರ್ಷದ ಮಗು ಸೇರಿ 8 ಜನ ದುರ್ಮರಣ

Public TV
By Public TV
17 minutes ago
Strait of Hormuz India Flagged Fuel Tanker
Latest

ಒಮನ್‌ ಭಾಗದ ಹಾರ್ಮುಜ್‌ ಜಲಸಂಧಿ ಮೂಲಕ ಹಡಗುಗಳ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡುತ್ತಾ ಇರಾನ್?

Public TV
By Public TV
56 minutes ago
Vinay Kulkarni 3
Bengaluru City

ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ – ಇಂದು ಶಿಕ್ಷೆ ಪ್ರಮಾಣ ಪ್ರಕಟ, ಎಲ್ಲರ ಚಿತ್ತ ಕೋರ್ಟ್‌ನತ್ತ

Public TV
By Public TV
1 hour ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
9 hours ago
Bus carrying Vinay Kulkarni to jail catches fire bengaluru CBI
Bengaluru City

ಜೈಲಿಗೆ ವಿನಯ್‌ ಕುಲಕರ್ಣಿಯನ್ನು ಕರೆತರುತ್ತಿದ್ದ ಬಸ್ಸಿನಲ್ಲಿ ಬೆಂಕಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?