ಕಲಬುರಗಿ: ಐದು ಗ್ಯಾರಂಟಿ (Congress Guarantee) ಯೋಜನೆಗಳ ಪೈಕಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಇಂದು (ಶನಿವಾರ) ಕಲಬುರಗಿ (Kalaburagi) ನಗರದಲ್ಲಿ ವಿದ್ಯುಕ್ತವಾಗಿ ಚಾಲನೆ ಸಿಗಲಿದೆ. ಇದಕ್ಕಾಗಿ ನಗರದ ಎನ್ವಿ ಕಾಲೇಜು ಮೈದಾನದಲ್ಲಿ ಕಲಬುರಗಿ ಜಿಲ್ಲಾಡಳಿತ ಮತ್ತು ಜೆಸ್ಕಾಂ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇಂದು ಬೆಳಗ್ಗೆ 11:30 ಕ್ಕೆ 10 ಜನ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಶೂನ್ಯ ವಿದ್ಯುತ್ ಬಿಲ್ ನೀಡುವುದರ ಮೂಲಕ ಸಿಎಂ ಸಿದ್ದರಾಮಯ್ಯ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ. ಶಿವಕುಮಾರ್, ಇಂಧನ ಸಚಿವ ಕೆ.ಜೆ ಜಾರ್ಜ್, ಸಚಿವರಾದ ಪ್ರಿಯಾಂಕ್ ಖರ್ಗೆ, ಈಶ್ವರ ಖಂಡ್ರೆ, ರಹೀಂಖಾನ್ ಸೇರಿದಂತೆ ಅನೇಕ ಸಚಿವರು, ಶಾಸಕರು ಹಾಗೂ ಸಂಸದರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ಫಾರಿನ್ನಿಂದ ಬಂದ ಹೆಚ್ಡಿಕೆಯಿಂದ ಮಿಡ್ನೈಟ್ ಬಾಂಬ್?: ಮೆಸ್ನಲ್ಲಿ ನಡೆದ ಸಭೆಯಲ್ಲಿ YST!
ಕಾರ್ಯಕ್ರಮಕ್ಕೆ ಕರ್ನಾಟಕ ಭಾಗದ ಏಳು ಜಿಲ್ಲೆಗಳ 20 ಸಾವಿರಕ್ಕೂ ಅಧಿಕ ಜನ ಬರಲಿದ್ದಾರೆ. 2024 ರ ಲೋಕಸಭಾ ಚುನಾವಣೆ ದೃಷ್ಟಿಕೋನದಿಂದ ಕಾಂಗ್ರೆಸ್ ಸರ್ಕಾರ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಲ್ಲಿ ಚಾಲನೆ ಮಾಡುವುದರ ಮೂಲಕ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಾಕ್ಷಿಯಾಗಲಿದೆ.
ಸಮಾರಂಭಕ್ಕೆ ಜನರನ್ನು ಕರೆತರಲು 282 ಸಾರಿಗೆ ಬಸ್ಗಳನ್ನು ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರಿಕೆ ವಹಿಸಿ ಎನ್ವಿ ಕಾಲೇಜು ಮೈದಾನದ ಸುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಇದನ್ನೂ ಓದಿ: ಉಡುಪಿಯಿಂದ ಅದೆಷ್ಟು ವೀಡಿಯೋಗಳು ಅಫ್ಘಾನಿಸ್ತಾನ, ಪಾಕಿಸ್ತಾನಕ್ಕೆ ಹೋಗಿದ್ಯೋ ಗೊತ್ತಿಲ್ಲ – ಮುತಾಲಿಕ್ ಆತಂಕ
Web Stories