Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Chitradurga

ಶ್ರೀಗಳು ಬಂದಾಗ ಬುದ್ಧಿ ಅಂತೀವಿ, ತಳಸಮುದಾಯವರು ಬುದ್ಧಿವಂತರಾದ್ರೂ ಏಕವಚನದಲ್ಲಿ ಮಾತಾಡ್ತಿವಿ: ಸಿಎಂ

Public TV
Last updated: July 20, 2024 8:50 pm
Public TV
Share
3 Min Read
CM Siddaramaiah Bhovi Gurpeeth Bhovi Development Corporation
SHARE

– ಶಿಕ್ಷಣದ ಮಹತ್ವ ಸಾರಿದ ಸಿಎಂ

ಚಿತ್ರದುರ್ಗ: ಮೇಲ್ವರ್ಗದ ಶ್ರೀಗಳು ಬಂದಾಗ ಬುದ್ಧಿ ಅಂತೀವಿ. ತಳಸಮುದಾಯವರು ಬುದ್ಧಿವಂತರಾದರು ಏಕವಚನದಲ್ಲಿ ಮಾತಾಡ್ತಿವಿ. ಹೀಗಾಗಿ ಶಿಕ್ಷಣ ಪಡೆಯಬೇಕು, ಸ್ವಾಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕರೆ ನೀಡಿದ್ದಾರೆ.

ಭೋವಿ ಗುರುಪೀಠದ (Bhovi Gurpeeth) ಆವರಣದಲ್ಲಿ ನಡೆದ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಧೀಕ್ಷಾ ರಜತ ಮಹೋತ್ಸವದಲ್ಲಿ ಅವರು ಮಾತನಾಡಿದರು. ಈ ವೇಳೆ, 25 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಶ್ರೀಗಳು ಮುಂದಿನ ನೂರು ವರ್ಷಗಳ ಕಾಲ ಭೋವಿ ಗುರುಪೀಠದ ಪೀಠಾಧಿಪತಿ ಆಗಿರಲಿ. ವೈಯಕ್ತಿಕವಾಗಿ ಹಾಗೂ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸಿತ್ತೇನೆ. ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಸದಾ ಭೋವಿ ಸಮಾಜಕ್ಕೆ ಮಾರ್ಗದರ್ಶಕರಾಗಿರಲಿ ಎಂದಿದ್ದಾರೆ.

CM Siddaramaiah Bhovi Gurpeeth

ಶೋಷಿತ, ಹಿಂದುಳಿದ ಸಮಾಜಕ್ಕೆ ಮಾರ್ಗದರ್ಶನ ಮಾಡುವವರು ಇರಬೇಕು. ಬಸವಾದಿ ಶರಣರು, ಅಂಬೇಡ್ಕರ್ ಹೇಳಿದಂತೆ ಸಮಸಮಾಜ ನಿರ್ಮಾಣ ಆಗಬೇಕು. ಅವಕಾಶದಿಂದ ವಂಚಿತ ಜನರು ಮುಖ್ಯವಾಹಿನಿಗೆ ಬರಬೇಕು. ಆಗ ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ದೇಶಕ್ಕೆ ಸಿಕ್ಕ ಸ್ವಾತಂತ್ರ್ಯ ಸಾರ್ಥಕವಾಗಲು ದುರ್ಬಲ ವರ್ಗದ ಜನರಿಗೆ ಸಾಮಾಜಿಕ, ಆರ್ಥಿಕಶಕ್ತಿ ಬರಬೇಕು ಆಗ ರಾಜಕೀಯ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನಮ್ಮಲ್ಲಿ ಮೇಲು, ಕೀಳು, ಬಡವ, ಬಲ್ಲಿದ, ಅಕ್ಷರಸ್ಥ, ಅನಕ್ಷರಸ್ಥ ತಾರತಮ್ಯ ಇರಬಾರದು. ಅಸಮಾನತೆ ನಿರ್ಮೂಲನೆ ಆದರೆ ಮಾತ್ರ ಸಮಸಮಾಜ ನಿರ್ಮಾಣ ಆಗಲಿದೆ. ಯಾರೋ ಸ್ವಾರ್ಥಿಗಳು, ಪಟ್ಟಬದ್ರ ಹಿತಾಸಕ್ತಿಗಳು ಜಾತಿ ಅಸಮಾನತೆ ನಿರ್ಮಾಣ ಮಾಡಿದ್ದಾರೆ. ಜಾತಿ ವ್ಯವಸ್ಥೆ ಪರಿಣಾಮವಾಗಿ ನಾವೆಲ್ಲ ಅವಕಾಶದಿಂದ ವಂಚಿತರಾಗಿದ್ದೇವೆ. ಶಿಕ್ಷಣದ ಅವಕಾಶ ಸಿಕ್ಕವರು ಆರ್ಥಿಕವಾಗಿ ಸಬಲರಾಗಿದ್ದಾರೆ. ಅವಕಾಶ ಸಿಗದವರು ಮೇಲೆ ಬರಲು ಸಾಧ್ಯವಾಗಿಲ್ಲ. ವಿದ್ಯೆ ಕಲಿಯಲು ಕೆಲವರಿಗೆ ಅವಕಾಶ ಇಲ್ಲ. ಆದರೆ ವಿದ್ಯೆ ಕಲಿಯಲು ಎಲ್ಲರಿಗೂ ಅರ್ಹತೆ ಇದೆ ಎಂದು ಅವರು ಹೇಳಿದ್ದಾರೆ.

ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿಯವರ ದೀಕ್ಷಾ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದೆ.

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ. ಸ್ವಾರ್ಥಿ ಮನುಷ್ಯರ ಸೃಷ್ಟಿ. ವಿದ್ಯೆ ಕಲಿಯಲು ಅವಕಾಶ ಸಿಕ್ಕ ಕೆಲವರು ಮಾತ್ರ ಆರ್ಥಿಕವಾಗಿ ಮೇಲೆ ಬಂದರು. ವಿದ್ಯೆಯ ಅವಕಾಶ ಇಲ್ಲದವರು… pic.twitter.com/WrfWJJfNdV

— Siddaramaiah (@siddaramaiah) July 20, 2024

ಭೋವಿ ಮಠದಿಂದ ನಿರಂತರ ಸಂಘಟನೆ, ಶಿಕ್ಷಣ, ಹೋರಾಟ
ಭೋವಿ ಸಮುದಾಯದಲ್ಲಿ ಹುಟ್ಟಿದವರು ಸಹ ಐಎಎಸ್ ಅಧಿಕಾರಿಗಳಾಗಲು ಅವಕಾಶವಿದೆ. ನಾವೆಲ್ಲ ಮನುಷ್ಯರಾಗಿ ಸ್ವಾಭಿಮಾನದಿಂದ ಬದುಕಬೇಕು. ನಮ್ಮಲ್ಲಿ ಗುಲಾಮಗಿರಿ ಇದ್ದ ಹಿನ್ನೆಲೆಯಲ್ಲಿ ಈಗಲೂ ಕೆಲವರು ಗುಲಾಮಗಿರಿಯಿಂದ ಹೊರಗೆ ಬರಲು ಸಾಧ್ಯವಾಗಿಲ್ಲ. ಮೇಲ್ವರ್ಗದ ಶ್ರೀಗಳು ಬಂದಾಗ ಬುದ್ಧಿ ಅಂತೀವಿ. ತಳಸಮುದಾಯವರು ಬುದ್ಧಿವಂತರಾದರು ಏಕವಚನದಲ್ಲಿ ಮಾತಾಡ್ತಿವಿ. ಹೀಗಾಗಿ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಈ ಮಠದ ಶ್ರೀಗಳು ನಿರಂತರವಾಗಿ ಸಂಘಟನೆ, ಶಿಕ್ಷಣ, ಹೋರಾಟ ಮಾಡಿದ ಪರಿಣಾಮ ಮಠ ಬೆಳೆದಿದೆ ಎಂದು ಅವರು ತಿಳಿಸಿದ್ದಾರೆ.

ಭೋವಿ ಸಮಾಜದಿಂದ ಶಿಕ್ಷಣ ಸಂಸ್ಥೆ ನಿರ್ಮಾಣ ಮಾಡಲು ಸರ್ಕಾರದಿಂದ ನಾವು ಸಹಾಯ ಮಾಡುತ್ತೇವೆ. ಎಲ್ಲರಿಗೂ ಶಿಕ್ಷಣ ಸಿಕ್ಕರೆ ಮಾತ್ರ ಅಭಿವೃದ್ಧಿ ಸಾಧ್ಯ. ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಬೇಕು. 2013ರಲ್ಲಿ ಎಸ್‍ಸಿಎಸ್‍ಪಿ, ಟಿಎಸ್‍ಪಿ ಕಾಯ್ದೆ ನಾವು ತಂದಿದ್ದೆವು. ಈ ವರ್ಷ 39.121 ಕೋಟಿ ರೂ. ಎಸ್‍ಸಿ, ಎಸ್‍ಟಿಗೆ ಮೀಸಲಿಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ.

ಭೋವಿ ಅಭಿವೃದ್ಧಿ ನಿಗಮ ಮರುನಾಮಕರಣ:
ಭೋವಿ ಅಭಿವೃದ್ಧಿ ನಿಗಮವನ್ನು (Bhovi Development Corporation) ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮಾಡಬೇಕು ಎನ್ನುವ ಬೇಡಿಕೆ ಇದೆ. ಈ ಬೇಡಿಕೆಯನ್ನು ಈಡೇರಿಸಲಾಗುವುದು. ಸಿದ್ಧರಾಮೇಶ್ವರ ಅಧ್ಯಯನಪೀಠಕ್ಕಾಗಿ ಬೇಡಿಕೆ ಇದೆ. ಈ ಬೇಡಿಕೆಯನ್ನೂ ಈಡೇರಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಮಂತ್ರಾಲಯಕ್ಕೆ ಭೇಟಿ:
ಮಂತ್ರಾಲಯಕ್ಕೆ ಶ್ರೀಗಳ ಆಹ್ವಾನದ ವಿಚಾರವಾಗಿ, ನಾನು ಈವರೆಗೂ ಮಂತ್ರಾಲಯಕ್ಕೆ ಹೋಗಿಲ್ಲ. ಪೂಜ್ಯರು ಆಹ್ವಾನ ನೀಡಿದ್ದು, ಮುಂದಿನ ದಿನಗಳಲ್ಲಿ ಹೋಗುತ್ತೇನೆ. ಸ್ವಾಮೀಜಿಯವರು ನನ್ನ ಬಗ್ಗೆ ಕೆಲವು ಒಳ್ಳೆಯಮಾತುಗಳನ್ನಾಡಿ ಆಶೀರ್ವಾದ ಮಾಡಿದರು. ನಾನು ಅವರಿಗೆ ಯಾವಾಗಲೂ ಚಿರಋಣಿಯಾಗಿರುತ್ತೇನೆ ಎಂದಿದ್ದಾರೆ.

TAGGED:Bhovi Development CorporationBhovi Gurpeethcm siddaramaiah
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
9 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
10 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
11 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
13 hours ago

You Might Also Like

jaishankar 1
Latest

ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

Public TV
By Public TV
5 hours ago
Starlink satellite
Latest

ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

Public TV
By Public TV
5 hours ago
PAF
Latest

ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

Public TV
By Public TV
6 hours ago
Ramalinga Reddy 1
Districts

ಕದನ ವಿರಾಮದ ಬಗ್ಗೆ ಸಮಾಧಾನ ಇಲ್ಲ, ಪಾಕಿಸ್ತಾನಕ್ಕೆ ಇನ್ನೂ ಬುದ್ಧಿ ಕಲಿಸಬೇಕಾಗಿತ್ತು: ರಾಮಲಿಂಗಾ ರೆಡ್ಡಿ

Public TV
By Public TV
6 hours ago
A.N.Pramod Vice Admiral
Latest

ಪಾಕ್‌ ಮತ್ತೆ ಬಾಲ ಬಿಚ್ಚಿದ್ರೆ ನಾವೇನು ಮಾಡ್ತೀವಿ ಅಂತ ಅವರಿಗೆ ಗೊತ್ತಾಗಿದೆ: ನೌಕಾ ಪಡೆ ಎಚ್ಚರಿಕೆ

Public TV
By Public TV
6 hours ago
BSF Soldier Deepak Chimngakham copy
Latest

ಜಮ್ಮು ಗಡಿಯಲ್ಲಿ ಪಾಕ್‌ ಗುಂಡಿನ ದಾಳಿ – ಗಂಭೀರ ಗಾಯಗೊಂಡಿದ್ದ BSF ಯೋಧ ಹುತಾತ್ಮ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?