Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ

Bengaluru City

ಎಷ್ಟೇ ಪ್ರಭಾವಿಯಾಗಿರಲಿ ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಸಿಎಂ ಕಟ್ಟಾಜ್ಞೆ

Public TV
Last updated: May 21, 2025 8:13 pm
Public TV
Share
4 Min Read
siddaramaiah 11
SHARE

– ಬೆಂಗಳೂರಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ ಬಗ್ಗೆ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು: ಮುಲಾಜಿಲ್ಲದೇ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ನಿವಾಸ ಕಾವೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು, ಮೊದಲಿಗೆ ಮಾನ್ಯತಾ ಟೆಕ್ ಪಾರ್ಕ್ ಬಳಿ ರಾಜಕಾಲುವೆ ಪರಿಶೀಲನೆ ಮಾಡಿದೆವು. ಅಲ್ಲಿ ರಾಜಕಾಲುವೆ ಒತ್ತುವರಿ ಆಗಿದೆ. ಕೂಡಲೇ ತೆರವಿಗೆ ಸೂಚನೆ ನೀಡಿದ್ದೇನೆ. ಮಾನ್ಯತಾ ಟೆಕ್ ಪಾರ್ಕ್‌ನ ಸಿಇಒ ತಮ್ಮ ಸ್ವಂತ ರಸ್ತೆಯಲ್ಲಿ ಚರಂಡಿ ನಿರ್ಮಿಸಿ, 90 ದಿನದಲ್ಲಿ ಪರಿಹಾರ ಮಾಡಿ ಕೊಡುತ್ತೇನೆ ಎಂದಿದ್ದಾರೆ. ಎರಡನೆ ಜಾಗ ಹೆಚ್‌ಬಿಆರ್ ಬಡಾವಣೆ 5ನೇ ಹಂತದಲ್ಲಿ ರಾಜಕಾಲುವೆ ಸಮಸ್ಯೆ ಇದೆ. ಅಲ್ಲಿ ರಾಜಕಾಲುವೆ ತಡೆಗೋಡೆ ನಿರ್ಮಾಣ ಆಗ್ತಿದೆ. ದಬರಿಸ್ ಚರಂಡಿಗೆ ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಒತ್ತುವರಿ ಮುಲಾಜಿಲ್ಲದೇ ತೆರವು ಆಗಬೇಕು ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದನ್ನೂ ಓದಿ: ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

ಬೆಂಗಳೂರಿನ ಮಳೆ ಬಾಧಿತ ಪ್ರದೇಶಗಳ ಭೇಟಿಯ ಭಾಗವಾಗಿ ವಡ್ಡರಪಾಳ್ಯ ಲೇಔಟ್, ಗೆದ್ದಲಹಳ್ಳಿಗಳಿಗೆ ಭೇಟಿನೀಡಿ, ಜನರ ಸಮಸ್ಯೆ ಆಲಿಸಿ, ಸ್ಥಳದಲ್ಲೇ ಪರಿಹಾರ ಮಾರ್ಗೋಪಾಯಗಳನ್ನು ಚರ್ಚಿಸಿದೆ.

ರಾಜಕಾಲುವೆ ವಿಸ್ತೀರ್ಣ 29 ಮೀಟರ್ ಇದೆ, ಆದರೆ ಗೆದ್ದಲಹಳ್ಳಿಯ ಕಾಲುವೆ ಇಕ್ಕಟ್ಟಾಗಿದ್ದು, ಕೇವಲ 8 ಮೀಟರ್ ಇದೆ. ಆದ್ದರಿಂದ ಮೇಲಿನಿಂದ ರಾಜಕಾಲುವೆಯಲ್ಲಿ… pic.twitter.com/Cr9Kjplq97

— Siddaramaiah (@siddaramaiah) May 21, 2025

ಸಾಯಿ ಬಡಾವಣೆಯು ರಾಜಕಾಲುವೆಗಿಂತ ತಗ್ಗು ಪ್ರದೇಶದಲ್ಲಿ ಇದೆ. ಹಾಗಾಗಿ, ನೀರು ಸರಾಗವಾಗಿ ಹರಿಯುತ್ತಿಲ್ಲ. ರೈಲ್ವೆ ಹಳಿಯ ಹತ್ತಿರ ವೆಂಡ್ ದೊಡ್ಡದಿಲ್ಲ. ಆದ್ದರಿಂದ ನೀರು ತುಂಬುತ್ತಿದೆ. ಬ್ಯಾಕ್ ವಾಟರ್ ಬರುತ್ತಿರುವುದರಿಂದ ಅನೇಕ ವರ್ಷದಿಂದ ಸಮಸ್ಯೆ ಆಗಿದೆ. ವೆಂಡ್ಸ್ ಅಗಲ ಮಾಡಲು 2 ಅಡೀಶನಲ್ ವೆಂಡ್ಸ್ ಮಾಡಲು ಸೂಚನೆ ನೀಡಲಾಗಿದೆ. ಅದಕ್ಕೆ 13 ಕೋಟಿ ದುಡ್ಡು ರಿಲೀಸ್ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಮಹದೇವಪುರಕ್ಕೆ ಹೋಗಿದ್ದೆವು. ಅಲ್ಲಿ ಪಣತ್ತೂರ್ ಗಾರ್ಡನ್ ನೀರು ಹರಿಯಲು ಸಮಸ್ಯೆ ಆಗಿದೆ. ಮಳೆ ಬಂದಾಗ ಸಮಸ್ಯೆ ಆಗುತ್ತಿದೆ. ರಸ್ತೆ ಮೇಲೆ 4 ಅಡಿ ನೀರು ನಿಲ್ಲುತ್ತಿದೆ. ಇದಕ್ಕೆ ರೈಲ್ವೆ ಲೈನ್ ಕೆಳಗೆ ಕೇವಲ 30 ಅಡಿ ವಿಸ್ತರಣೆ ಇದೆ. ಇದು ಅಗಲ ಆಗಬೇಕು. ರಸ್ತೆಯೂ ಅಗಲ ಆಗಬೇಕು. ಇಲ್ಲಿ 80% ಕೆಲಸ ಆಗಿದೆ. ಇನ್ನೂ 45 ದಿನದಲ್ಲಿ ಕೆಲಸ ಮುಗಿಸಲು ಸೂಚಿಸಿದ್ದೇವೆ ಎಂದರು.

ಸಾಯಿ ಲೇಔಟ್‌ನಲ್ಲಿ ಮಳೆ ಮತ್ತು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿನೀಡಿ, “ಸಾಯಿ ಲೇಔಟ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ” ಪದಾಧಿಕಾರಿಗಳು ಮತ್ತು ಸದಸ್ಯರಿಂದ ಸಮಸ್ಯೆ ಆಲಿಸಿ, ಮನವಿ ಸ್ವೀಕರಿಸಿದೆ.

ಬಳಿಕ‌ ಮನವಿಯಲ್ಲಿರುವ ಸಮಸ್ಯೆಗಳ ಬಗ್ಗೆ ಆದ್ಯತೆ ಮೇರೆಗೆ ಗಮನ ಹರಿಸಿ, ತಕ್ಷಣಕ್ಕೆ ಸಾಧ್ಯವಿರುವ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳುವಂತೆ… pic.twitter.com/smZR6MGtNP

— Siddaramaiah (@siddaramaiah) May 21, 2025

ಸಿಲ್ಕ್ ಬೋರ್ಡ್ ಜಂಕ್ಷನ್ ಹೋಗಿದ್ದೆ. ಅಲ್ಲಿ ನಾಲ್ಕು ಕಡೆಯಿಂದ ನೀರು ಬರ್ತಿದೆ. ಅವೆಲ್ಲಾ ಸೇರಿಕೊಂಡು ಹೆಚ್‌ಎಸ್‌ಆರ್ ಲೇಔಟ್‌ಗೆ ಹೋಗುತ್ತೆ. ನೀರು ಹೆಚ್ಚಾದಾಗ ಉಕ್ಕಿ ಹರಿದು ಸಮಸ್ಯೆ ಆಗುತ್ತೆ. ಮೆಟ್ರೋ, ಬಿಬಿಎಂಪಿ, ನ್ಯಾಷನಲ್ ಹೈವೇ ಮೂರು ಜನ ಸೇರಿ ಮಾಡಬೇಕಿದೆ. ಗುರಪ್ಪನ ಪಾಳ್ಯದಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ನೀರು ನುಗ್ಗಿದೆ. ಜನಸಂದಣೆ ಜಾಸ್ತಿ ಇದ್ದು, ರಸ್ತೆಗಳು ಚಿಕ್ಕದಿವೆ. ಅಲ್ಲಿ ಎಷ್ಟು ನಷ್ಟ ಆಗಿದೆ, ಸರ್ವೆ ಮಾಡಿಸಿ ಪರಿಹಾರ ಕೊಡಲು ಹೇಳಿದ್ದೇನೆ. ಸಾಯಿ ಲೇಔಟ್ ಬೇರೆ ಕಡೆಯು ಪರಿಹಾರ ಕೊಡಲು ಹೇಳಿದ್ದೇನೆ. ಎಲ್ಲೆಲ್ಲಿ ನೀರು ನುಗ್ಗಿ ನಷ್ಟ ಆಗಿದೆ ಅಲ್ಲಿ ಪರಿಹಾರ ಕೊಡಲು ಹೇಳಿದ್ದೇನೆ ಎಂದು ತಿಳಿಸಿದರು.

ಲೋ ಲೇಯಿಂಗ್ ಏರಿಯಾ ಇದೆಯಲ್ಲ, ಅಲ್ಲಿಗೆ ಬೇಸ್‌ಮೆಂಟ್‌ಗೆ ಪ್ಲಾನ್ ಅಪ್ರೂವಲ್ ಕೊಡಬೇಡಿ ಅಂತ ಬಿಬಿಎಂಪಿಗೆ ಹೇಳಿದ್ದೇನೆ. ಎಲ್ಲಾ ಕಡೆ ಅಲ್ಲ, ತಗ್ಗು ಪ್ರದೇಶ ಮಾತ್ರ. 10 ವರ್ಷದಲ್ಲಿ ಇದು ಎರಡನೇ ಬಾರಿ ಮಳೆ ಹೀಗೆ ಜಾಸ್ತಿ ಬಂದಿರುವುದು. 210 ತಗ್ಗು ಪ್ರದೇಶ ಇದೆ. 166 ಸೂಕ್ಷ್ಮ ಅತಿ ಸೂಕ್ಷ್ಮ ಇದೆ. 166 ಸರಿಪಡಿಸಿದ್ದಾರೆ. ಇನ್ನುಳಿದ ಕಡೆ ಕೆಲಸ ಆರಂಭಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನವರ ಹೃದಯ ಬಗೆದ್ರೆ ರಾಹುಲ್ ಗಾಂಧಿ, ಪಾಕ್ ಪ್ರಧಾನಿ ಬಿರಿಯಾನಿ ತಿನ್ನೋದು ಕಾಣುತ್ತೆ: ಬಿ.ಸಿ ಪಾಟೀಲ್ ವ್ಯಂಗ್ಯ

ಬೆಂಗಳೂರಿನಲ್ಲಿ 860 ಕಿಮೀ ರಾಜಕಾಲುವೆ ಇದೆ. 491 ಕಿಮೀ ರಾಜಕಾಲುವೆಯಲ್ಲಿ ಲೈನಿಂಗ್ ಕೆಲಸ ಮುಗಿದಿದೆ. 195 ಕಿಮೀ ಕೆಲಸ ನಡೆಯುತ್ತಿದೆ. 2 ಸಾವಿರ ಕೋಟಿ ಅಂದಾಜಿನಲ್ಲಿ ನಡೆಯುತ್ತಿದೆ. 2026ರ ಫೆಬ್ರವರಿಯಲ್ಲಿ ಮುಗಿಸಲು ಹೇಳಿದ್ದೇವೆ. 173 ಕಿಮೀ ಟೆಂಡರ್ ಆಗಿದೆ. ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೇ ತಗೆದು ಹಾಕಲು ಸೂಚನೆ ನೀಡಲಾಗಿದೆ. ನಮಗೆ ಬಂದಿರುವುದು ಅದೇ ತಾಪತ್ರಯ. ಬಿಜೆಪಿ ಕಾಲದಲ್ಲಿ ರಾಜಕಾಲುವೆ ತೆರವು ಆಗಲಿಲ್ಲ. ಹಿಂದೆ ನಾನು ಇದ್ದಾಗ ತೆರವು ಮಾಡಿಸಿದ್ದೆ. ಈಗ ಮತ್ತೆ ಮಾಡಿಸುತ್ತಿದ್ದೇವೆ. ಯಾರೇ ಆಗಲಿ, ಎಷ್ಟೇ ಪ್ರಭಾವಿ ಆದರೂ ರಾಜಕಾಲುವೆ ಒತ್ತುವರಿ ತೆರವು ಮಾಡುತ್ತೇವೆ ಎಂದು ತಿಳಿಸಿದರು. ಅಲ್ಲದೇ, ವಿದ್ಯುತ್ ಶಾಕ್‌ನಿಂದ ಬಿಟಿಎಂ ಲೇಔಟ್ ನಲ್ಲಿ ಇಬ್ಬರು ತೀರಿಕೊಂಡರು. ಅವರ ಕುಟುಂಬಸ್ಥರಿಗೆ ಕಾರ್ಪೊರೇಷನ್‌ನಿಂದ 5 ಲಕ್ಷ ಕೊಟ್ಟಿದ್ದಾರೆ. ಬೆಸ್ಕಾಂನಿಂದಲೂ 5 ಲಕ್ಷ ಕೊಡುತ್ತೇವೆ ಎಂದು ಭರವಸೆ ನೀಡಿದರು.

TAGGED:bengaluruBengaluru Rainsrajakaluvesiddaramaiahಬೆಂಗಳೂರುರಾಜಕಾಲುವೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

young woman commits suicide due to stomach pain during menstruation in tumakuru
Crime

ಋತುಚಕ್ರದ ವೇಳೆ ಹೊಟ್ಟೆ ನೋವು ತಾಳದೆ ನೇಣಿಗೆ ಶರಣಾದ ಯುವತಿ

Public TV
By Public TV
20 minutes ago
delhi women shot dead
Crime

ಗಂಡನ ಕೊಲೆ ಕೇಸ್‌ ಪ್ರಮುಖ ಸಾಕ್ಷಿಯಾಗಿದ್ದ ಮಹಿಳೆಗೆ ಗುಂಡಿಕ್ಕಿ ಹತ್ಯೆ

Public TV
By Public TV
33 minutes ago
Kerala MLA Rahul Mamkootathil
Latest

ಮದುವೆ ಹೆಸರಲ್ಲಿ ರೇಪ್, ಗರ್ಭಪಾತಕ್ಕೆ ಒತ್ತಾಯ – ಕೇರಳದ ಕಾಂಗ್ರೆಸ್ ಉಚ್ಚಾಟಿತ ಶಾಸಕ ಅರೆಸ್ಟ್

Public TV
By Public TV
43 minutes ago
Hassan Son Kills Father
Crime

ಕೌಟುಂಬಿಕ ಕಲಹ – ಸ್ಟೀಲ್ ರಾಡ್‌ನಿಂದ ಹೊಡೆದು ತಂದೆಯ ಹತ್ಯೆಗೈದ ಪುತ್ರ

Public TV
By Public TV
2 hours ago
Karwar
Crime

JDS ಮುಖಂಡೆ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ ಕೇಸ್‌ – ಆರೋಪಿ ಎಸ್ಕೇಪ್‌

Public TV
By Public TV
2 hours ago
Saifullah Kasuri
Latest

ಭಾರತಕ್ಕೆ ನನ್ನನ್ನು ಕಂಡರೆ ಭಯ, ಪಾಕ್‌ ಸೇನೆಯಿಂದ ನನಗೆ ಆಹ್ವಾನ – ಪಹಲ್ಗಾಮ್ ಸಂಚುಕೋರನಿಂದ ಪುಂಗಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?