ಚುನಾವಣಾ ಬಿಸಿಯಿಂದ ರಿಲ್ಯಾಕ್ಸ್ ಮೂಡಿಗೆ ಸಿಎಂ- ಊಟಿಗೆ ಪಯಣ

Public TV
1 Min Read
Siddaramaiah 1 4

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಲೋಕಸಭಾ ಚುನಾವಣೆಯ (Lok Sabha Election) ಬಿಸಿಯಿಂದ ರಿಲ್ಯಾಕ್ಸ್ ಮೂಡಿಗೆ ಜಾರಿದ್ದಾರೆ. ಅವರು ಹೆಚ್‍ಎಎಲ್‍ನಿಂದ (HAL) ಮೈಸೂರಿಗೆ ಪ್ರಯಾಣ ಬೆಳೆಸಿ ಅಲ್ಲಿಂದ ಊಟಿಗೆ (Ooty) ತೆರಳಲಿದ್ದಾರೆ. ಮೂರು ದಿನಗಳ ಕಾಲ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಸಿದ್ದರಾಮಯ್ಯ ತೆರಳುವ ಮುನ್ನ ಸಚಿವರಿಂದ ಸಿಎಂ ಭೇಟಿ ನೀಡಿದ್ದಾರೆ. ಸಚಿವರಾದ ರಾಮಲಿಂಗಾರೆಡ್ಡಿ, ಮಹದೇವಪ್ಪ, ರಾಜಣ್ಣ ಅವರು ಭೇಟಿಯಾಗಿದ್ದು, ಅನೌಪಚಾರಿಕವಾಗಿ ಸಚಿವರ ಜೊತೆ ಸಿಎಂ ಚರ್ಚೆ ಮಾಡಿದ್ದಾರೆ. ಎರಡನೇ ಹಂತದ ಚುನಾವಣಾ ಮತದಾನ ಮತ್ತು ಪ್ರಸಕ್ತ ರಾಜಕೀಯ ಬೆಳವಣಿಗೆ ಹಾಗೂ ಪೆನ್‍ಡ್ರೈವ್ ಪ್ರಕರಣದ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ಇದನ್ನೂ ಓದಿ: ಕುಟುಂಬದೊಂದಿಗೆ ಚಿಕ್ಕಮಗಳೂರಿಗೆ ತೆರಳಿದ ಡಿಕೆ ಶಿವಕುಮಾರ್‌

ಮನೆಯಿಂದ ಹೊರಟ ಸಿಎಂ ಕಾರ್ ಗ್ಲಾಸ್ ಇಳಿಸದೇ, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು. ಊಟಿ ಪ್ರವಾಸದ ವೇಳೆ ಹೆಚ್.ಸಿ ಮಹದೇವಪ್ಪ ಸಿಎಂಗೆ ಸಾಥ್ ನೀಡಲಿದ್ದಾರೆ.

ಇತ್ತ ಡಿಸಿಎಂ ಡಿಕೆ ಶಿವಕುಮಾರ್ (D.K Shivakumar) ಅವರು ಕುಟುಂಬದ ಸದಸ್ಯರ ಜೊತೆ ಚಿಕ್ಕಮಗಳೂರಿಗೆ ತೆರಳಿದ್ದು, ರೆಸಾರ್ಟ್‍ನಲ್ಲಿ ಕುಟುಂಬದ ಜೊತೆ ಎರಡು ದಿನ ಶಿವಕುಮಾರ್ ವಾಸ್ತವ್ಯ ಹೂಡಲಿದ್ದಾರೆ. ಅವರು ಚಿಕ್ಕಮಗಳೂರಿಗೆ (Chikkamgaluru) ತೆರಳಬೇಕಿದ್ದ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸದಾಶಿವನಗರಕ್ಕೆ ವಾಪಸ್ ಆಗಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಡಿಕೆಶಿ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಇದನ್ನೂ ಓದಿ: ಬಂಗಾಳದಲ್ಲಿ ಮತದಾನದ ವೇಳೆ ಬಿಜೆಪಿ ಅಭ್ಯರ್ಥಿಯೊಂದಿಗೆ ಟಿಎಂಸಿ ನಾಯಕರ ಘರ್ಷಣೆ

Share This Article