Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು; 2-3 ದಿನದಲ್ಲಿ ಹೈಕಮಾಂಡ್ ತೀರ್ಮಾನ‌ ಮಾಡಲಿದೆ: ಸಿದ್ದರಾಮಯ್ಯ

Public TV
Last updated: December 20, 2023 9:03 pm
Public TV
Share
2 Min Read
Siddaramaiah 8
SHARE

ನವದೆಹಲಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಕಸರತ್ತು ಇನ್ನಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಈ ಸಂಬಂಧ ವರದಿ ಪಡೆದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಪಟ್ಟಿ ಪರಿಶೀಲನೆ ಮಾಡಿ ಎರಡು ಮೂರು ದಿನದಲ್ಲಿ ತಮ್ಮ ಅಭಿಪ್ರಾಯ ತಿಳಿಸುವುದಾಗಿ‌ ಹೇಳಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿ ಆಯ್ಕೆ ಸಂಬಂಧ ಬುಧವಾರ ಎಐಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah), ಎಐಸಿಸಿ ಅಧ್ಯಕ್ಷ‌ ಮಲ್ಲಿಕಾರ್ಜುನ್ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (K.C.Venugopal), ಸಂಸದ ರಾಹುಲ್ ಗಾಂಧಿ (Rahul Gandhi), ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಭಾಗಿಯಾಗಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ

rahul gandhi mallikarjun kharge

ಸಭೆಯಲ್ಲಿ ಮೊದಲ‌ ಹಂತದಲ್ಲಿ 37 ಮಂದಿ ಶಾಸಕರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಸಿಎಂ ಪ್ರಸ್ತಾಪಿಸಿದರು. ಆದರೆ ಮೊದಲ‌ ಹಂತದಲ್ಲೆ ಕೆಲವು ಹಿರಿಯ ನಾಯಕರು ಮತ್ತು ಕಾರ್ಯಕರ್ತರಿಗೆ ಅವಕಾಶ ನೀಡುವಂತೆ ರಾಹುಲ್‌ ಗಾಂಧಿ ಹಾಗೂ ಕೆ.ಸಿ ವೇಣುಗೋಪಾಲ್ ಸಲಹೆ ನೀಡಿದರು ಎನ್ನಲಾಗಿದೆ. ಈ ವಿಚಾರದಲ್ಲಿ ಒಮ್ಮತ ಮೂಡದ ಹಿನ್ನೆಲೆ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಮಯ ಬೇಕು ಎಂದು ಸಿಎಂಗೆ ಖರ್ಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಕಳುಹಿಸಿದ ಪಟ್ಟಿಯನ್ನು ಇನ್ನು ವರಿಷ್ಠರು ನೋಡಿಲ್ಲ. ನೋಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ. ಎರಡು ಮೂರು ದಿನದಲ್ಲಿ ಹೈಕಮಾಂಡ್ ನಾಯಕರು ಪ್ರತಿಕ್ರಿಯೆ ನೀಡಬಹುದು. ಆ ಬಳಿಕ ಪಟ್ಟಿ ಬಿಡುಗಡೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆ ನಡೆಸಿದೆ ಎಂದರು. ಇದನ್ನೂ ಓದಿ: ಅಮಿತ್ ಶಾ ಭೇಟಿಯಾದ ಸಿಎಂ – ಬರ ಪರಿಹಾರ ಬಿಡುಗಡೆಗೆ ಆಗ್ರಹ

DKSHI 4 e1698465996919

ಡಿ.ಕೆ ಶಿವಕುಮಾರ್ ಮಾತನಾಡಿ, ಬೆಂಗಳೂರಿನಲ್ಲೂ ಹಲವು ಸಭೆ ನಡೆಸಿ ಪಟ್ಟಿ ತಯಾರಿ ಮಾಡಲಾಗಿತ್ತು. ನಮ್ಮ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದೆ. ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬಹುದು. ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು. ಮೊದಲಿನಿಂದಲೂ ಈ ಪ್ರಸ್ತಾಪ ಇದೆ. ಕಾರ್ಯಕರ್ತರಿಗೆ ಅವಕಾಶ ನೀಡಲು ನಮ್ಮ ವಿರೋಧ ಏನಿಲ್ಲ. ಪಟ್ಟಿ ಬಿಡುಗಡೆ ಬಗ್ಗೆ ಹೈಕಮಾಂಡ್ ನಾಯಕರು ನಿರ್ಧರಿಸಲಿದ್ದಾರೆ ಎಂದರು.

ಮುಂದುವರಿದು ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಯಾಗಿದೆ. ಇದೇ ತಿಂಗಳು 22 ರೊಳಗೆ ಅಭ್ಯರ್ಥಿಗಳ ಆಯ್ಕೆ ಕುರಿತು ವರದಿ ಸಲ್ಲಿಸಲು ಸೂಚಿಸಿದ್ದಾರೆ. ನಾಳೆ ಕ್ಯಾಬಿನೆಟ್ ಸಭೆಯಲ್ಲೂ ಸಿಎಂ ಸಚಿವರಿಗೆ ಈ ಸೂಚನೆ ನೀಡಲಿದ್ದಾರೆ. ಜಿಲ್ಲಾ ಚುನಾವಣಾ ಉಸ್ತುವಾರಿವಾರಿಗಳು ಮೂರು ಅಭ್ಯರ್ಥಿಗಳ ಹೆಸರು ಸೂಚಿಸಬೇಕು. ಅಂತಿಮವಾಗಿ ಯಾರಿಗೆ ಟಿಕೆಟ್ ಎನ್ನುವುದು ಹೈಕಮಾಂಡ್ ನಿರ್ಧರಿಸಲಿದೆ. ಸಂಕ್ರಾಂತಿಯೊಳಗೆ ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಫೈನಲ್‌ ಮಾಡುವ ವಿಚಾರ, ಆ ರೀತಿಯ ಮುಹೂರ್ತ ಏನಿಲ್ಲ. ಎಲ್ಲವೂ ಹೈಕಮಾಂಡ್ ತೀರ್ಮಾನ‌ ಮಾಡಲಿದೆ ಎಂದರು. ಇದನ್ನೂ ಓದಿ: ಇಲ್ಲಿಯವರೆಗೆ ಸಿಕ್ಕಿರಲಿಲ್ಲ, ಮೋದಿಗೆ ಖರ್ಗೆ ಮ್ಯಾಚ್‌ ಆಗಬಲ್ಲ ನಾಯಕ – ಸತೀಶ್‌ ಜಾರಕಿಹೊಳಿ

TAGGED:Congress high commandNew Delhisiddaramaiahಕಾಂಗ್ರೆಸ್ ಹೈಕಮಾಂಡ್ನವದೆಹಲಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
6 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Air India Air Crash
Latest

8 ಸೆಕೆಂಡ್ ನಂತ್ರ ವಿಮಾನ ಹಾರಾಟದಲ್ಲಿ ಅಸಹಜತೆ ಪತ್ತೆ; 7-12 ಸೆಕೆಂಡ್‌ ವರೆಗಿನ ಹಾರಾಟದ ಮೇಲೆ ತನಿಖೆ

Public TV
By Public TV
26 minutes ago
Raichur PDO
Districts

ಕಾಮಗಾರಿ, ಸಾಮಗ್ರಿಗಳ ಖರೀದಿ ಬಿಲ್‌ನಲ್ಲಿ ಲಕ್ಷ ಲಕ್ಷ ಹಣ ಗೋಲ್ಮಾಲ್‌ – ಇಬ್ಬರು ಪಿಡಿಓ ಅಮಾನತು

Public TV
By Public TV
34 minutes ago
bus accident
Bengaluru Rural

ತಿರುಪತಿಯಿಂದ ಬರುತ್ತಿದ್ದ ಆಂಧ್ರ ಬಸ್‌, ಲಾರಿ ನಡುವೆ ಭೀಕರ ಅಪಘಾತ – ಮೂವರು ಸ್ಥಳದಲ್ಲೇ ಸಾವು

Public TV
By Public TV
39 minutes ago
Ramanagara Paramedical Student
Crime

ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಕೆರೆಯಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
41 minutes ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
48 minutes ago
vinay kulkarni
Bengaluru City

ನ್ಯಾಯಾಧೀಶರ ಮುಂದೆ ಹಾಜರಾದ ವಿನಯ್ ಕುಲಕರ್ಣಿ – ಶಾಸಕನನ್ನು ವಶಕ್ಕೆ ಪಡೆದ ಸಿಬಿಐ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?