Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

Belgaum

ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ: ಸದನದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ

Public TV
Last updated: December 16, 2025 12:49 pm
Public TV
Share
5 Min Read
siddaramaiah r.ashok
SHARE

– ಈಗಲೂ ನಾನೇ, ಮುಂದೆಯೂ ನಾನೇ ಸಿಎಂ – ಬಿಜೆಪಿಗೆ ಸಿಎಂ ಸ್ಪಷ್ಟನೆ

ಬೆಳಗಾವಿ/ಬೆಂಗಳೂರು: ಸಿಎಂ ಬದಲಾವಣೆ, ಐದು ವರ್ಷ ಅಧಿಕಾರ ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಚರ್ಚೆ ನಡೆದಿದೆ. ನೀವೇ ಐದು ವರ್ಷ ಸಿಎಂ ಆಗಿರ್ತೀರಾ ಸರ್ ಎಂಬ ಆರ್.ಅಶೋಕ್ (R.Ashok) ಅವರ ಪ್ರಶ್ನೆಗೆ, ಹೈಕಮಾಂಡ್ ಹೇಳೋವರೆಗೂ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ (Siddaramaiah) ಉತ್ತರಿಸಿದ್ದಾರೆ.

ಕೃಷಿಪತ್ತಿನ ಸಹಕಾರ ಸಂಘಗಳಿಗೆ ಷೇರು ಧನ ಕೊಡುವ ವಿಚಾರದಲ್ಲಿ ತಾರತಮ್ಯ ಆಗಿದೆ ಎಂದು ಸದನದಲ್ಲಿ ಕುಣಿಗಲ್ ರಂಗನಾಥ್ ಪ್ರಶ್ನಿಸಿದ್ದರು. ರಂಗನಾಥ್ ಪ್ರಶ್ನೆಗೆ ಉತ್ತರ ಕೊಡ್ತಿದ್ದ ಸಿಎಂ, ರಂಗನಾಥ್ ನಮ್ಮ ಮೇಲೆ ವಿಶ್ವಾಸ ಇಡಿ. ತಾರತಮ್ಯ ಆಗಿದ್ರೆ ನಿಮ್ಮ ಸಮಸ್ಯೆ ಬಗೆಹರಿಸ್ತೇವೆ ಎಂದರು. ಈ ವೇಳೆ ಅಶೋಕ್ ಮಧ್ಯಪ್ರವೇಶಿಸಿ, ತಾರತಮ್ಯ ಬೇಕು ಅಂತ ಮಾಡಿದ್ದಾರೆ ಅಂದ್ರು. ಅದಕ್ಕೆ ಸಿಎಂ, ನೀವು ಉರಿಯುತ್ತಿರುವ ಬೆಂಕಿಗೆ ತುಪ್ಪ ಹಾಕಬೇಡ ಎಂದರು. ಹಾಗಾದ್ರೆ ಉರಿಯುತ್ತಿದೆಯಾ ನಿಮ್ಮಲ್ಲಿ ಅಂತ ಅಶೋಕ್ ಕೆಣಕಿದರು. ಅದು ಗಾದೆ ಕಣಯ್ಯ ಅಂತ ಸಿಎಂ ಸ್ಪಷ್ಟನೆ ಕೊಟ್ಟರು. ಇದನ್ನೂ ಓದಿ: ಪರಮೇಶ್ವರ್‌ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ

ಈ ವೇಳೆ ಅಶೋಕ್ ಮಾತನಾಡಿ, ಕುಣಿಗಲ್ ರಂಗನಾಥ್ ಅವರು ಡಿಕೆಶಿ ಸಿಎಂ ಆಗೋದಕ್ಕೆ ಪೂಜೆ, ಪುನಸ್ಕಾರ ಮಾಡ್ತಿದ್ದಾರೆ ಎಂದರು. ರಂಗನಾಥ್ ಮಾತನಾಡಿ, ಪೂಜೆ ಪುನಸ್ಕಾರ ಮಾಡ್ತಿರೋದು ನಮ್ಮ ಕ್ಷೇತ್ರಕ್ಕಾಗಿ ಎಂದರು. ಸಿಎಂ ಉರಿಯುತ್ತಿರೋದಕ್ಕೆ ತುಪ್ಪ ಹಾಕಬೇಡ ಅಂದ್ರು, ಅಲ್ಲಿಗೆ ಜಗಳ ಹೊತ್ತಿ ಉರೀತಿದೆ ಅಂತ ಅರ್ಥ ಎಂದು ಅಶೋಕ್ ಟಾಂಗ್ ಕೊಟ್ಟರು. ಗಾದೆ ಅದು, ನಿಮಗೆ ಗಾದೆ ಗೊತ್ತಿಲ್ಲ ಅಂದ್ರೆ ಏನ್ಮಾಡೋದು ಅಂತ ಸಿಎಂ ಸ್ಪಷ್ಟಪಡಿಸಿದರು.

ಇನ್ನೊಂದ್ಸಲ ಗಾದೆ ಹೇಳಿ ಸರ್ ಅಂತ ಅಶೋಕ್ ಕಿಚಾಯಿಸಿದರು. ಆಂ, ಇನ್ನೊಂದ್ಸಲ ಹೇಳಲಾ? ಉರಿಯುತ್ತಿರುವ ಬೆಂಕಿಗೆ ತುಪ್ಪ ಹಾಕಬೇಡಿ, ವಿಪಕ್ಷ ಇರೋದೇ ಉಪ್ಪು ಹಾಕೋದಿಕ್ಕೆ ಅಂತ ಸಿಎಂ ಮತ್ತೆ ಹೇಳಿದರು. ನಾವು ಉಪ್ಪು ಹಾಕ್ತಿಲ್ಲ, ಅವರೇ ಹಾಕ್ತಿದ್ದಾರೆ ಎಂದರು ಅಶೋಕ್. ರಂಗನಾಥ್ ಅವರು ಸುಮ್ಮನೆ ಇದ್ದಾರೆ, ನೀವ್ಯಾಕೆ ಸುಮ್ಮನಿರಲ್ಲ ಅಂತ ಸಿಎಂ ಪ್ರಶ್ನಿಸಿದರು. ಅವರು ಸುಮ್ಮನೆ ಇರಲ್ಲ ಸರ್, ಬಹಳ ಸಲ ಕೇಳಿದೆ, ಪೂಜೆ ವ್ರತ ಮಾಡ್ತಿದೀನಿ ಡಿಕೆಶಿ ಒಂದ್ಸಲ ಸಿಎಂ ಆಗೋದು ಕನಸು ಅಂದ್ರು ಅಂತ ಅಶೋಕ್ ಮಾತನಾಡಿದರು. ವಿಪಕ್ಷದವ್ರು ನೀವು ಏನೇ ಪ್ರಚೋದನೆ, ಕಿತಾಪತಿ ಮಾಡಿದ್ರೂ ನಮ್ಮಲ್ಲಿ ಯಾರೂ ಪ್ರಚೋದನೆ ಆಗಲ್ಲ ಅಂತ ಸಿಎಂ ತಿರುಗೇಟು ಕೊಟ್ಟರು.

ನೀವೇ ಐದು ವರ್ಷ ಸಿಎಂ ಆಗೀರ್ತೀರಾ ಸರ್ ಅಂತ ಅಶೋಕ್ ಪ್ರಶ್ನಿಸಿದರು. ಅದನ್ನ ನೀನ್ಯಾಕೆ ಕೇಳ್ತೀಯಾ? ಐದು ವರ್ಷ ಇರಿ ಅಂತ ಜನ ಆಶೀರ್ವಾದ ಮಾಡಿದ್ದಾರೆ, ನಾವೇ ಐದು ವರ್ಷ ಇರ್ತೇವೆ ಅಂತ ಸಿಎಂ ಹೇಳಿದರು. ನಾವು ಎದುರು ಮನೆಯವ್ರು ಸರ್, ಕೇಳ್ತೀವಿ, ನೀವು ಐದು ವರ್ಷ ಇರೋದು ಗ್ಯಾರಂಟಿನಾ ಸರ್ ಎಂದು ಅಶೋಕ್ ಮತ್ತೆ ಪ್ರಶ್ನಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪರಮೇಶ್ವರ್, ಜನ ಐದು ವರ್ಷ ಆಡಳಿತ ಮಾಡಿ ಅಂತ ಆಶೀರ್ವಾದ ಮಾಡಿದ್ದಾರೆ. ಐದು ವರ್ಷ ನಾವು ಇರ್ತೀವಿ ಅಂದಮೇಲೆ ನಿಮಗೇಕೆ ಅನುಮಾನ ಎಂದು ಹೇಳಿದರು. ಪರಮೇಶ್ವರ್ ಅವರೊಬ್ಬರೇ ಸರ್, ನಾನು ನೋಡಿದ ಹಾಗೆ ಅವರು ಯಾವಾಗಲೂ ನಿಮ್ಮ ಜತೆ ನಿಂತಿದ್ದಾರೆ ಸರ್, ಏನಾದರೂ ಅವಕಾಶ ಆದರೆ ಬ್ಲ್ಯಾಕ್ ಹಾರಿಸ್ತಾರೆ ಎಂದು ಅಶೋಕ್ ಟಾಂಗ್ ಕೊಟ್ಟರು. ಇದನ್ನೂ ಓದಿ: ಸಿಎಂ-ಡಿಸಿಎಂ ಶನಿವಾರ ದೆಹಲಿ ಪ್ರಯಾಣ – ಡಿಕೆ ಆಪ್ತರೂ ಕೂಡ ದಿಲ್ಲಿಗೆ ತೆರಳಲು ಸಿದ್ಧತೆ

140 ಶಾಸಕರು ನಮ್ ಜತೆ ಇದ್ದಾರೆ, ಜನ ಐದು ವರ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. 2028 ಕ್ಕೂ ನಾವೇ ಬರ್ತೇವೆ. ಬಿಜೆಪಿಯನ್ನು ಜನ ಯಾವತ್ತೂ ಅಧಿಕಾರಕ್ಕೆ ತರಲ್ಲ. ಜನರ ಆಶೀರ್ವಾದ ಪಡ್ಕೊಂಡು ಬಂದಿದ್ದೀರಾ ನೀವು? ಆಪರೇಷನ್ ಕಮಲ ಮಾಡಿ ಹಿಂಬಾಗಿಲ ಮೂಲಕ ಬಂದಿದ್ದೀರ, ಜನ ನಿಮಗೆ ಆಶೀರ್ವಾದ ಮಾಡಲ್ಲ ಅಂತ ಸಿಎಂ ಟಾಂಗ್ ಕೊಟ್ಟರು. 2018 ರಲ್ಲಿ ಜನ ನಿಮಗೂ ಆಶೀರ್ವಾದ ಮಾಡಿರ್ಲಿಲ್ಲ. ಜೆಡಿಎಸ್ ಜತೆ ಸೇರಿ ಸರ್ಕಾರ ಮಾಡಿದ್ರಲ್ಲ, ಅವರ ಮನೆ ಬಾಗಿಲಿಗೆ ಹೋಗಿದ್ರಲ್ಲ ಅಂತ ಅಶೋಕ್ ತಿರುಗೇಟು ಕೊಟ್ಟರು. ನಾವು ಅವರ ಮನೆ ಬಾಗಿಲಿಗೆ ಹೋಗಿರಲಿಲ್ಲ. ಬಿಜೆಪಿ ಬರಬಾರದು ಅಂತ ಅವರೇ ಬಂದಿದ್ರು, ನೀವ್ಯಾಕೆ ಅವರ ಜತೆ ಹೋಗಿದ್ದೀರಿ ಅಂತ ಸಿಎಂ ಮರುಪ್ರಶ್ನೆ ಹಾಕಿದರು.

ನೀವ್ಯಾಕೆ ಜೆಡಿಎಸ್ ಜತೆ ಹೋದ್ರಿ ಅಂತ ಬಿಜೆಪಿ ಸಿಎಂ ಪ್ರಶ್ನಿಸಿದಾಗ ಪ್ರಿಯಾಂಕ್ ಖರ್ಗೆ ಎದ್ದುನಿಂತು ಬೆಂಬಲ ಸೂಚಿಸಿದರು. ಆಗ ಅಶೋಕ್ ಬೆಂಬಲಕ್ಕೆ ಅರವಿಂದ್ ಬೆಲ್ಲದ್, ಸುನಿಲ್ ಕುಮಾರ್ ಬಂದರು.

ಸಿಎಂ ಮಾತನಾಡಿ, ನಿಮ್ಮಲ್ಲಿ ಅಧ್ಯಕ್ಷ ಸ್ಥಾನಕ್ಕೆ ಯಾಕೆ ಕಚ್ಚಾಟ? ನಾವು ಹೈಕಮಾಂಡ್ ಹೇಳಿದಂಗೆ ಕೇಳ್ತೀವಿ, ಜನ ಆಶೀರ್ವಾದ ಮಾಡಿದ್ದಾರೆ ನಮಗೆ, ಜನ ಖುಷಿ ಆಗಿದ್ದಾರೆ, ನಿಮಗೆ ಅಸೂಯೆ, ಹೊಟ್ಟೆ ಕಿಚ್ಚು. ನಾವು ಐದು ವರ್ಷ ತುಂಬಿಸ್ತೇವೆ, ಮುಂದೆಯೂ ನಾವೇ ಗೆದ್ದು ಬರ್ತೇವೆ, ಮತ್ತೆ ನಾವೇ ಅಧಿಕಾರ ಮಾಡ್ತೇವೆ ಎಂದರು. ಸಿಎಂ ಮಾತಿಗೆ ಇತರೆ ಸದಸ್ಯರು ಮೇಜು ಕುಟ್ಟಿದರು.

ಸದನದಲ್ಲಿ ಟಕ್ಕರ್ ಪ್ರತಿ ಟಕ್ಕರ್
ಸಿಎಂ ಸ್ಥಾನದ ಗೊಂದಲ ಬಗ್ಗೆ ಬಿಜೆಪಿ ಆರೋಪಗಳಿಗೆ ಸದನದಲ್ಲಿ ಸಿಎಂ ಸ್ಪಷ್ಟನೆ ನೀಡಿದರು. ನಮ್ಮಲ್ಲಿ ಹೈಕಮಾಂಡ್ ಇದೆ, ಹೈಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ಕೇಳ್ತೇವೆ. ಜನ ನಮಗೆ ಆಶೀರ್ವಾದ ಮಾಡಿದ್ದಾರೆ, ಬಿಜೆಪಿವರಿಗೆ ಜನ ಆಶೀರ್ವಾದ ಮಾಡಲ್ಲ, ಇವರು ವಿಪಕ್ಷ ಸ್ಥಾನದಲ್ಲಿ ಶಾಶ್ವತವಾಗಿ ಇರ್ತಾರೆ ಅಂತ ಸಿಎಂ ಟಾಂಗ್ ಕೊಟ್ಟರು.

ಯತ್ನಾಳ್ ಮಾತನಾಡಿ, ಐದು ವರ್ಷ ಸಿಎಂ ಯಾರು ಅನ್ನೋದಷ್ಟೇ ಪ್ರಶ್ನೆ. ಸಿದ್ದರಾಮಯ್ಯ ಇರ್ತಾರೋ ಬೇರೆಯವ್ರು ಬರ್ತಾರೋ ಎಂದು ಪ್ರಶ್ನಿಸಿದರು. ಸುರೇಶ್ ಕುಮಾರ್ ಮಾತನಾಡಿ, ಇಷ್ಟು ದಿನ ಸಿಎಂ ನಾನೇ ಮುಂದುವರೀತೇನೆ ಅಂತಿದ್ರು. ಈಗ ಏಕವಚನದಿಂದ ಬಹುವಚನಕ್ಕೆ ಬಂದಿದ್ದಾರೆ. ನಾನು ಅನ್ನೋ ಕಡೆ ನಾವು ಅಂತಿದ್ದಾರೆ. ಪ್ರಾಯಶಹಃ ಕನಕದಾಸರು ಹೇಳಿದ್ದ ನಾನು ಹೋದಲ್ಲಿ ಮಾತ್ರ ಹೋಗುತ್ತೇನೆ ಅನ್ನೋದನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಕಾಲೆಳೆದರು.

ಸಿಎಂ ಪ್ರತಿಕ್ರಿಯಿಸಿ, ನಾನು ಹೋದರೆ ಹೋದೇನು… ಇದು ಕನಕದಾಸರು ಹೇಳಿರೋದು. ಕನಕದಾಸರಿಗೂ ನನಗೂ ಹೋಲಿಕೆ ಮಾಡಬೇಡಿ. ನಾವು ಸರ್ಕಾರದಲ್ಲಿ. ಇದು ಬಹುವಚನ. ನಾನೇ ಮುಖ್ಯಮಂತ್ರಿ, ಈಗಲೂ ಮುಖ್ಯಮಂತ್ರಿ ಎಂದರು.

ಸುನಿಲ್ ಕುಮಾರ್ ಎದ್ದುನಿಂತು, ನಾನೇ ಮುಂದಿನ ಐದು ವರ್ಷ ಸಿಎಂ ಅಂದಿದ್ರರಲ್ಲ ನೀವು ಈಗೇನಂತೀರಿ ಎಂದು ಪ್ರಶ್ನಿಸಿದರು. ಸಿಎಂ ಪ್ರತಿಕ್ರಿಯಿಸಿ, ನೀವ್ಯಾಕೆ ಮೂರು ಜನ ಸಿಎಂ ಮಾಡಿದ್ರಿ? ಈಗಲೂ ನಾನೇ ಮುಖ್ಯಮಂತ್ರಿ, ಈಗಲೂ ನಾನೇ ಮುಖ್ಯಮಂತ್ರಿ, ಮುಂದೇನೂ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವವರೆಗೂ ನಾನೇ ಮುಖ್ಯಮಂತ್ರಿ ಎಂದು ಸಿಎಂ ಉತ್ತರ ಕೊಟ್ಟರು. ನೀವು ಯಾಕ್ರಿ ಮೂರು ಮೂರು ಸಿಎಂ ಬದಲಾಯಿಸಿದ್ರಿ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

TAGGED:belagavi sessionbjpcongressPower Sharingsiddaramaiahಅಧಿಕಾರ ಹಂಚಿಕೆಕಾಂಗ್ರೆಸ್ಚಳಿಗಾಲದ ಅಧಿವೇಶನಬಿಜೆಪಿಬೆಳಗಾವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
13 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
53 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?