– ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ
– 123 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ; ಸಿಎಂ ಮಾಹಿತಿ
ಬೆಂಗಳೂರು: ಈ ವರ್ಷ ವಾಡಿಕೆಗಿಂತ ಹೆಚ್ಚು ಮುಂಗಾರು (Monsoon) ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ರೆ ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಿರುವುದಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ನಗರ ಮತ್ತು ಗ್ರಾಮೀಣ ಭಾಗದ ಕುಡಿಯುವ ನೀರಿನ (Drinking Water) ಸಮಸ್ಯೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಗ್ಗೆ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಡಿಸಿ ಹಾಗೂ ಸಿಇಓಗಳು ಪಾಲ್ಗೊಂಡಿದ್ದರು. ಇದನ್ನೂ ಓದಿ: ಅಯ್ಯೋ ನನಗೆ ಹೊಟ್ಟೆ ಬಂದಿದೆ ಎಂದಿದ್ದ ನಟಿ ರಿತಿಕಾ ಸಿಂಗ್ ಸೊಂಟ ಬಳ್ಳಿಯಂತಾಗಿದ್ದು ಹೇಗೆ ಗೊತ್ತಾ?
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಒಂದಷ್ಟು ಸಲಹೆ, ಸೂಚನೆಗಳನ್ನು ನೀಡಿದೆ. ಅವು ಈ ಕೆಳಗಿನಂತಿವೆ
• ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ… pic.twitter.com/GGXZqpEGaI
— Siddaramaiah (@siddaramaiah) May 5, 2025
ಸಭೆಯಲ್ಲಿ ಮಾತನಾಡಿದ ಸಿಎಂ, ಶುದ್ಧ ಕುಡಿಯುವ ನೀರಿಗೆ ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಸಮಸ್ಯೆ ಆಗಬಾರದು ಜಿಲ್ಲಾಧಿಕಾರಿಗಳಿಗೆ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸ್ಪಷ್ಟ ಸೂಚನೆ ನೀಡಿದರು. ಇದನ್ನೂ ಓದಿ: Sonu Nigam | ಕನ್ನಡಿಗರ ಆಕ್ರೋಶಕ್ಕೆ ಮಣಿದ ಗಾಯಕ – ಕ್ಷಮೆಯಾಚಿಸಿದ ಸೋನು ನಿಗಮ್
ರಾಜ್ಯದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದ್ರೆ ವಾಡಿಕೆಗಿಂತ ಶೇ.55ರಷ್ಟು ಮಾನ್ಸೂನ್ ಪೂರ್ವ ಹೆಚ್ಚು ಮಳೆಯಾಗಿದೆ. 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ, ಎಲ್ಲಾ ಜಲಾಶಯಗಳಲ್ಲಿ ಶೇ.50ರಿಂದ ಶೇ.60 ರಷ್ಟು ಹೆಚ್ಚಿನ ನೀರಿನ ಸಂಗ್ರಹವಿದೆ. ಈ ವರ್ಷವೂ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಾನ್ಸೂನ್ ವಿಳಂಬವಾದರೆ 6,319 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎಂದು ಗುರುತಿಸಲಾಗಿದೆ. ಪ್ರಸ್ತುತ 551 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, 123 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಅಗತ್ಯ ಸಂದರ್ಭದಲ್ಲಿ ನೀರು ಪಡೆಯಲು ಈಗಾಗಲೇ 3 ಸಾವಿರ ಖಾಸಗಿ ಬೋರ್ವೆಲ್ ಗುರುತಿಸಲಾಗಿದ್ದು, 480 ಬೋರ್ವೆಲ್ಗಳನ್ನ ಖಾಸಗಿಯವರಿಂದ ಬಾಡಿಗೆ ಪಡೆದು ನೀರು ಒದಗಿಸಲಾಗುತ್ತಿದೆ ಎಂದು ವಿವರಿಸಿದರು.
ಹಣ ಕಾಸಿನ ಕೊರತೆ ಇಲ್ಲ. ಎಷ್ಟು ಬೇಕಾದರೂ ಹಣ ಕೊಡುತ್ತೇವೆ. ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು. ಕುಡಿಯುವ ನೀರಿನ ನಿರ್ವಹಣೆಗೆ ಯಾವುದೇ ಹಣಕಾಸಿನ ಕೊರತೆ ಇರುವುದಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ತಾಕೀತು ಮಾಡಿದರು.
ಪ್ರತಿ ವರ್ಷ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಸಮಸ್ಯೆಯನ್ನು ಶಾಶ್ವತವಾಗಿ ನೀಗಿಸಲು ಯೋಜನೆ ರೂಪಿಸಬೇಕು. ಅಗತ್ಯಬಿದ್ದರೆ ಮಾತ್ರ ಬೋರ್ವೆಲ್ಗಳನ್ನ ಕೊರೆಯಬೇಕು. ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬೋರ್ವೆಲ್ ಕೊರೆದು ವೆಚ್ಚ ದುರುಪಯೋಗ ಮಾಡಬಾರದು ಅಂತ ಡಿಸಿಗಳಿಗೆ ನಿರ್ದೇಶನ ನೀಡಿದರು. ಇದನ್ನೂ ಓದಿ: ಮಹದೇವಪ್ಪ ರಾಂಪುರೆ ಮೆಡಿಕಲ್ ಕಾಲೇಜ್ ಸ್ಟೈಫಂಡ್ ಹಗರಣ – 81.21 ಕೋಟಿ ದುರುಪಯೋಗ ಸಾಬೀತು