ಪ್ರಧಾನಿಗಳು ಜೈಲಿಗೆ ಹೋದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆ: ಸಿಎಂ ಸಿದ್ದರಾಮಯ್ಯ

Public TV
2 Min Read
cm modi

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರು ಜೈಲಿಗೆ ಹೋಗಿ ಬಂದವರನ್ನು ಪಕ್ಕದಲ್ಲಿ ಕೂರಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ಮಾತಾಡ್ತಾರೆಂದು ಬಿಜೆಪಿಯವರ ಬಗ್ಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯನವರು ವಾಗ್ದಾಳಿ ನಡೆಸಿದರು.

ಬೆಳಗಾವಿಯ ಅಥಣಿಯಲ್ಲಿ ನಡೆದ ಜನಾಶೀರ್ವಾದ ಯಾತ್ರೆ ವೇಳೆ ಮಾತನಾಡಿದ ಅವರು, ಪ್ರಧಾನಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಪಕ್ಕದಲ್ಲಿ ಕೂತಿರುವವರು ಜೈಲಿಗೆ ಹೋಗಿದ್ದವರು ಎಂಬುವುದು ತಿಳಿದಿಲ್ಲವಾ ಎಂದು ಪ್ರಶ್ನಿಸಿದರು.

vlcsnap 2018 02 24 19h10m41s235ರಾಜ್ಯದ ಜನತೆಗೆ ಚುನಾವಣೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿದ್ದೇವೆ. ನೀವು (ಬಿಜೆಪಿ) ಕೇಂದ್ರದಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದಿರಾ? ಪ್ರಧಾನಿಗಳೇ ಬನ್ನಿ ಅಭಿವೃದ್ಧಿ ಬಗ್ಗೆ ಮಾತಾಡೋಣವೆಂದು ಎಂದು ಸವಾಲು ಎಸೆದರು.

ಉದ್ಯಮಿಗಳ ಸಾಲಮನ್ನಾ: ಕೇಂದ್ರ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಿ ಎಂದರೆ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ. ನಿಮಗೆ ನಾಚಿಕೆಯಾಗಬೇಕು. ರೈತರ ಸಾಲ ಮನ್ನಾ ಮಾಡಿ ಎಂದರೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಹಣ ನೀಡಿಲ್ಲ ಎಂದು ಹೇಳುತ್ತಾರೆ ಎಂದರು.

ನಮ್ಮ ಸರ್ಕಾರ ಹಲವು ಜನಪರ ಕಾರ್ಯಕ್ರಮಗಳನ್ನು ಕೊಟ್ಟಿದೆ. ಅಮಿತ್ ಶಾ, ಮೋದಿ ಅವರು ನೂರು ಬಾರಿ ರಾಜ್ಯಕ್ಕೆ ಬಂದು ತಿಪ್ಪರಲಾಗಾ ಹಾಕಿದರೂ ಬಿಜೆಪಿ ಗೆಲುವುದಿಲ್ಲ. ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಇಡೀ ದೇಶದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿದೆ. ಸಮಾವೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದೀರಾ, ಇದನ್ನು ನೋಡಿದರೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಸಹ ರಾಜ್ಯಕ್ಕೆ ಬಂದರು ಕೇಂದ್ರದ ಸಾಧನೆಗಳನ್ನು ಹೇಳುತ್ತಿಲ್ಲ. ಅದರ ಬದಲಾಗಿ ರಾಜ್ಯ ಸರ್ಕಾರದ ಮೇಲೆ ಆಧಾರರಹಿತ, ಸುಳ್ಳು ಆರೋಪ ಮಾಡ್ತಿದ್ದಾರೆಂದು ಆರೋಪಿಸಿದರು.

vlcsnap 2018 02 24 19h09m46s197

ರಾಜ್ಯ ಸರ್ಕಾರದ ವಿರುದ್ಧದ ಆರೋಪಗಳಿಗೆ ದಾಖಲೆ ನೀಡಲು ಮೋದಿ ಅವರು ವಿಫಲರಾಗಿದ್ದಾರೆ. ಅವರು ಪ್ರಧಾನಿ ಆಗಲು ಆರ್ಹರಲ್ಲ. ಪಿಎನ್ ಬಿ ಬ್ಯಾಂಕಿಗೆ ನೀರವ್ ಮೋದಿಯವರು ವಂಚನೆ ಮಾಡಿ ಓಡಿ ಹೋಗಿದ್ದಾರೆ. ಪ್ರಧಾನಿಗಳ ಬೆಂಬಲ ಇಲ್ಲದೇ ನೀರವ್ ದೇಶ ಬಿಟ್ಟು ಹೋಗಲು ಆಗುತ್ತಿತ್ತ ಎಂದು ಪ್ರಶ್ನಿಸಿದರು. ಇದಕ್ಕೂ ಮುನ್ನ ಸಾಧನ ಸಮಾವೇಶ ಯಾತ್ರೆಯನ್ನು ಯಶ್ವಸಿಯಾಗಿ ಏರ್ಪಡಿಸಿದ್ದ ಜಿಲ್ಲೆಯ ನಾಯಕರಿಗೆ ಅಭಿನಂದನೆ ಸಲ್ಲಿಸಿದರು.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಕಳೆದ ಬಾರಿ ಪ್ರವಾಸದಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಯಾತ್ರೆ ಮಾಡಿದ್ದರು. ಈ ಬಾರಿ ಮುಂಬೈ ಕರ್ನಾಟಕದಲ್ಲಿ ಯಾತ್ರೆ ಮುಂದುವರೆಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗಾವಿಯ ಅಥಣಿಯಲ್ಲಿ ಯಾತ್ರೆಯನ್ನು ಆರಂಭಿಸಿದರು. ರಾಹುಲ್ ಅವರನ್ನು ನೋಡಲು ಜಿಲ್ಲೆಯ ಹಲವು ಭಾಗಗಳಿಂದ ಹೆಚ್ಚು ಜನರು ಭಾಗವಹಿಸಿದ್ದರು.

https://www.youtube.com/watch?v=rzVirCafVr4

vlcsnap 2018 02 24 19h09m14s131

vlcsnap 2018 02 24 19h10m26s78

Share This Article
Leave a Comment

Leave a Reply

Your email address will not be published. Required fields are marked *