Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ವಿದ್ಯಾರ್ಥಿಗಳು ಓದಿದ್ದೇ ದಂಡ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ವಿದ್ಯಾರ್ಥಿಗಳು ಓದಿದ್ದೇ ದಂಡ: ಸಿದ್ದರಾಮಯ್ಯ

Bengaluru City

ವಿಜ್ಞಾನ ಓದಿಯೂ ಮೌಢ್ಯ ನಂಬಿದರೆ ವಿದ್ಯಾರ್ಥಿಗಳು ಓದಿದ್ದೇ ದಂಡ: ಸಿದ್ದರಾಮಯ್ಯ

Public TV
Last updated: October 14, 2025 4:39 pm
Public TV
Share
3 Min Read
Siddaramaiah 1 3
SHARE

ಬೆಂಗಳೂರು: ವಿಜ್ಞಾನ ಓದಿಯೂ ಮೌಢ್ಯ ನಂಬುತ್ತೀರಿ ಅಂದರೆ ವಿದ್ಯಾರ್ಥಿಗಳು ಓದಿದ್ದೇ ದಂಡ. ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ (CM Siddaramaiaha) ಹೇಳಿದರು.

ನೃಪತುಂಗ ವಿಶ್ವವಿದ್ಯಾಲಯದ (Nrupathunga University) ಆವರಣದಲ್ಲಿ ನಿರ್ಮಾಣ ಆಗಿದ್ದ ಕಟ್ಟಡ ಉದ್ಘಾಟನೆ ಮಾಡಿ ಮಾತನಾಡಿದ ಅವರು, ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ. ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.ಇದನ್ನೂ ಓದಿ: ಆರ್‌ಎಸ್‌ಎಸ್‌ನವರು ಅತಿರೇಕ ಮಾಡೋದು ಬಿಡಬೇಕು: ಬೇಳೂರು ಗೋಪಾಲಕೃಷ್ಣ

ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ. ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ. ಬಹಳ ಹಿಂದೆಯೇ ಬಸವಾದಿ ಶರಣರು ಮೌಢ್ಯ, ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ ಇವತ್ತಿಗೂ ಮೌಢ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಢ್ಯವನ್ನು ಬಿತ್ತುತ್ತಾರೆ. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಢ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಢ್ಯ ಮತ್ತು ಮೌಢ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಇಂದು ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನೆ ನೆರವೇರಿಸಿ, ವಿದ್ಯಾರ್ಥಿಗಳ ಕಲಿಕಾ ಜೀವನ ಉಜ್ವಲವಾಗಲಿ ಎಂದು ಶುಭ ಹಾರೈಸಿದೆ.

ಸಮಾರಂಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಫ್ರೊ.ಫಜೀಹ ಸುಲ್ತಾನ, ಸಿಬ್ಬಂದಿವರ್ಗ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. pic.twitter.com/bzWqPWDctI

— Siddaramaiah (@siddaramaiah) October 14, 2025

ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ಧಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು. ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರು ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ತಿಳಿಸಿದರು.

ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು.

ವಿಜ್ಞಾನದ… pic.twitter.com/Tu4UdX2nbt

— Siddaramaiah (@siddaramaiah) October 14, 2025

52 ಕೋಟಿ ರೂ. ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂ. ಬೇಡಿಕೆ ಸಲ್ಲಿಸಿದ್ದು, ಸರ್ಕಾರ ಕೊಡಲು ಸಿದ್ಧವಿದೆ ಎಂದು ಘೋಷಿಸಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.ಇದನ್ನೂ ಓದಿ: ಯುಪಿ, ಮಹಾರಾಷ್ಟ್ರದಲ್ಲಿ ಟೀಕೆ ಟಿಪ್ಪಣಿ ಮಾಡಿದ್ರೆ ಜೈಲಿಗೆ ಹೋಗ್ತಿದ್ರು – ಕಿರಣ್ ಮಜುಂದಾರ್ ಷಾ ಟ್ವೀಟ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

TAGGED:bengaluruKarnataka CMNrupathunga Universitysiddaramaiahನೃಪತುಂಗ ವಿಶ್ವವಿದ್ಯಾಲಯಬೆಂಗಳೂರುಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

mentally ill woman spends 10 days with husbands decomposing body in chikkamagaluru
Chikkamagaluru

ಚಿಕ್ಕಮಗಳೂರಲ್ಲೊಂದು ಮನಕಲಕುವ ಘಟನೆ – ಪತಿ ಮೃತದೇಹದ ಜೊತೆ 10 ದಿನ ಕಳೆದ ಮಾನಸಿಕ ಅಸ್ವಸ್ಥ ಮಹಿಳೆ

Public TV
By Public TV
17 minutes ago
David Miller
Latest

ಸಿಕ್ಸ್‌ ಬದಲು ಬೌಂಡರಿ ನೀಡಿದ್ದರಿಂದ ಡೆಲ್ಲಿಗೆ ಸೋಲು – ಏನಿದು ವಿವಾದ?

Public TV
By Public TV
34 minutes ago
Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
50 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
1 hour ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?