ವಿಜಯಪುರ: ಸಿಎಂಗೆ ಬಿಆರ್ ಪಾಟೀಲ್ (BR Patil) ಅವರು ಪತ್ರ ಬರೆದಿದ್ದಾರೆ. ಸಿಎಂ ಅದರ ಬಗ್ಗೆ ನಿರ್ಣಯ ಮಾಡುತ್ತಾರೆ ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda)ಹೇಳಿದ್ದಾರೆ.
ವಿಜಯಪುರದಲ್ಲಿ (Vijayapura) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸದನದಲ್ಲಿ ಏನು ಹೇಳಿದ್ದೇನೆ ಎಂಬುದರ ಬಗ್ಗೆ ಮಾಹಿತಿ ಇದೆ. ನಿಮಗೆ ಕೊಡುತ್ತೇನೆ. ಅದನ್ನು ನೀವು ನೋಡಿ. ನಂತರ ನೀವೇ ನಿರ್ಧರಿಸಿ ಎಂದರು. ಇದನ್ನೂ ಓದಿ: ನಾನು ತಪ್ಪು ಮಾಡಿಲ್ಲ: ಕೋರ್ಟ್ ಆದೇಶದ ಬಳಿಕ ಡಿಕೆಶಿ ಫಸ್ಟ್ ರಿಯಾಕ್ಷನ್
ನಾನು ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ವಿಚಾರದಲ್ಲಿ ನನ್ನನ್ನು ಸಿಎಂ ಅವರು ಸಂಪರ್ಕಿಸಿಲ್ಲ. ಬಿಆರ್ ಪಾಟೀಲ್ ಪತ್ರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೇ ನಿರ್ಧಾರ ಮಾಡುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಡಿ.ಕೆ.ಶಿವಕುಮಾರ್ಗೆ ರಿಲೀಫ್; ಮೇಲ್ಮನವಿ ಹಿಂಪಡೆದ ಮನವಿ ಪರಿಗಣಿಸಿದ ಹೈಕೋರ್ಟ್
ತನಿಖೆ ಮಾಡಿ ಎಂಬ ಬಿಆರ್ ಪಾಟೀಲ್ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ಇಲಾಖೆ ನನಗೆ ಸಂಬಂಧಿಸಿದ್ದಲ್ಲ. ನಾನು ಅದರ ಬಗ್ಗೆ ಮಾತ್ರ ಉತ್ತರ ನೀಡಿದ್ದೇನೆ. ತನಿಖೆ ಮಾಡುವುದು ಬಿಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು ಎಂದು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ಶಾಸಕರಾದವರಿಗೆ ನಿಗಮ-ಮಂಡಳಿ ಸ್ಥಾನ ಇಲ್ಲ: ಡಿಕೆಶಿ