– ವಾರ್ನಿಂಗ್ ನೀಡಿ ಮುಖ್ಯ ಕಾರ್ಯದರ್ಶಿಗೆ ಖಾರವಾದ ಪತ್ರ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ವರ್ಸಸ್ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಜಟಾಪಟಿ ಜೋರಾಗಿದ್ದು, ಜಲಸಂಪನ್ಮೂಲ ಇಲಾಖೆ ವರ್ಗಾವಣೆ ವಿಚಾರದಲ್ಲಿ ಮಹಾಸ್ಫೋಟ ಸಂಭವಿಸಿದೆ.
ಡಿಸಿಎಂ ಖಡಕ್ ವಾರ್ನಿಂಗ್ ನೀಡಿ ಮುಖ್ಯ ಕಾರ್ಯದರ್ಶಿಗೆ ಖಾರವಾದ ಪತ್ರ ಬರೆದಿದ್ದಾರೆ. ಪಬ್ಲಿಕ್ ಟಿವಿ ಬಳಿ ಡಿಕೆಶಿ ಬರೆದ ಪತ್ರ ಸಿಕ್ಕಿದೆ. ಮುಖ್ಯಕಾರ್ಯದರ್ಶಿಗೆ ಮೇ 13ರಂದು ಪತ್ರ ಬರೆದಿದ್ದಾರೆ.
ಮೇ 9ರಂದು ಐವರು ಮುಖ್ಯ ಎಂಜಿನಿಯರ್ಗಳನ್ನು ವರ್ಗಾವಣೆಗೊಳಿಸಿ ಆದೇಶಿಸಲಾಗಿತ್ತು. ನನ್ನ ಇಲಾಖೆಗೆ ಒಳಪಡುವ ವರ್ಗಾವಣೆ, ನೇಮಕಾತಿ, ಬೇರೆ ವಿಚಾರಗಳು ನನ್ನ ಗಮನಕ್ಕೆ ಬರಬೇಕು, ನನ್ನ ಪೂರ್ವಾನುಮತಿ ಬೇಕು. ಸರ್ಕಾರ ಬಂದ ಆರಂಭದಲ್ಲೇ ಟಿಪ್ಪಣಿ ಮೂಲಕ ಸೂಚಿಸಿದ್ದೆ ಎಂದು ಖಾರವಾಗಿ ಪತ್ರ ಬರೆದಿದ್ದಾರೆ. ಇದು ಸಹಜವಾಗಿಯೇ ಸಿಎಂ, ಡಿಸಿಎಂ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಎರಡು ದಶಕಗಳ ಮುನಿಸಿಗೆ ಬ್ರೇಕ್ – ಹರಿಪ್ರಸಾದ್ ನಿವಾಸದಲ್ಲಿ ಉಪಹಾರ ಸವಿದ ಸಿಎಂ
ಡಿಕೆಶಿ ಪತ್ರದಲ್ಲಿ ಏನಿದೆ?
ನನ್ನ ಇಲಾಖೆಗೆ ಒಳಪಡುವ ವಿಭಾಗಗಳಿಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಆದೇಶಕ್ಕೆ ನನ್ನ ಅನುಮತಿ ಬೇಕು. ಡಿಪಿಎಆರ್ನಿಂದ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆದ ನಂತರವೇ ಹೊರಡಿಸಬೇಕು.ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿ ಮೂಲಕ ನಿಮಗೆ ತಿಳಿಸಲಾಗಿತ್ತು. ನಂತರ ಮುಖ್ಯ ಎಂಜಿನಿಯರ್ಗಳ ಕರ್ತವ್ಯಕ್ಕೆ ಸಂಬಂಧಿಸಿದ ಕಾರ್ಯವ್ಯಾಪ್ತಿಯನ್ನು ಜಲಸಂಪನ್ಮೂಲ ಇಲಾಖೆಯಿಂದ ಡಿಪಿಎಆರ್ಗೆ ವಹಿಸುವ ಕಡತದಲ್ಲಿಯೂ ಸೂಚನೆ ಕೊಡಲಾಗಿತ್ತು. ಇದನ್ನೂ ಓದಿ: ಕಮಲ್ ಹಾಸನ್ ಸಿನಿಮಾಗಳಿಗೆ ಕರ್ನಾಟಕದಲ್ಲಿ ನಿರ್ಬಂಧ ವಿಧಿಸಿ – ಶಿವರಾಜ ತಂಗಡಗಿ
ನನ್ನ ಗಮನಕ್ಕೆ ತಂದು ನನ್ನ ಅನುಮೋದನೆ ಪಡೆದ ನಂತರವೇ ಡಿಪಿಎಆರ್ನಿಂದ ಆದೇಶ ಹೊರಡಿಸಬಹುದೆಂದು ಸ್ಪಷ್ಟವಾಗಿ ಸೂಚನೆ ನೀಡಿದ್ದೇನೆ. ಆದರೆ ಮೇ 9ರಂದು ಹೊರಡಿಸಿದ ಆದೇಶದಲ್ಲಿ ನನ್ನ ಅನುಮೋದನೆ ಪಡೆಯದೇ ಕೆಲವು ಮುಖ್ಯ ಎಂಜಿನಿಯರ್ಗಳನ್ನು ಜಲಸಂಪನ್ಮೂಲ ಇಲಾಖೆಗೆ ವರ್ಗಾವಣೆ ಮಾಡಿರುವುದು ನನ್ನ ಗಮನಕ್ಕೆ ಬಂದಿದೆ.
ನನ್ನ ಸೂಚನೆಯನ್ನು ಕಡೆಗಣಿಸಿ ಆದೇಶ ಹೊರಡಿಸಿರುವುದನ್ನು ನಾನು ಆಕ್ಷೇಪಿಸುತ್ತಿದ್ದೇನೆ. ಆದ್ದರಿಂದ ಈ ಆದೇಶವನ್ನು ಕೂಡಲೇ ವಾಪಸು ಪಡೆಯಬೇಕು. ಇಂತಹ ವಿಚಾರಗಳ ಬಗ್ಗೆ ಯಾವುದೇ ಆದೇಶ ಹೊರಡಿಸಬೇಕಾದರೆ ನನ್ನ ಪೂರ್ವಾನುಮತಿ ಪಡೆಯಬೇಕು.