ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

Public TV
0 Min Read
siddaramaiah 5

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ (Siddaramaiah) ಸ್ವಾಗತಿಸಿದ್ದಾರೆ.

ಕದನ ವಿರಾಮದ (Ceasefire) ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು.

ಕದನ ವಿರಾಮ ಘೋಷಣೆಯಾದ್ರೂ ಕೂಡ ಎಚ್ಚರಿಕೆಯಿಂದ ಇರಬೇಕು. ಭಯೋತ್ಪಾದನೆಯನ್ನು ನಿಗ್ರಹಿಸುವ ಕೆಲಸ ಮಾಡುತ್ತೇವೆ. ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

Share This Article