ನಿಗದಿಯಾಗಿದ್ದ ಕೊಪ್ಪಳ, ವಿಜಯನಗರ ಸಿಎಂ ಪ್ರವಾಸ ದಿಢೀರ್‌ ರದ್ದು

Public TV
1 Min Read
cm siddaramiah
ಸಾಂದರ್ಭಿಕ ಚಿತ್ರ

ಬಳ್ಳಾರಿ: ಮುಡಾ ಹಗರಣದ (MUDA Scam) ಆರೋಪ ಹಾಗೂ ಬಿಜೆಪಿ- ಜೆಡಿಎಸ್‌ ಪಾದಯಾತ್ರೆಯಿಂದ (BJP-JDS Padayatra) ಸಿಎಂ ಸಿದ್ದರಾಮಯ್ಯ ವಿಚಲಿತರಾದ್ರಾ? ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ನಿಗದಿಯಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ದಿಢೀರ್ ರದ್ದು ಮಾಡಿದ್ದರಿಂದ ಈ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ತಮಿಳುನಾಡಿಗೂ ಕಾವೇರಿ ಹರಿದರೂ ರೈತರಿಗೆ ತಪ್ಪದ ಕಂಟಕ!

TB Dam tungabhadra dam

ಮಂಗಳವಾರ ಕೊಪ್ಪಳ (Koppala) ಹಾಗೂ ವಿಜಯನಗರದಲ್ಲಿ (Vijayanagara) ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು. ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ಸಿಎಂ ಬಾಗಿನ ಅರ್ಪಿಸಬೇಕಿತ್ತು.

ಈ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಸ್ಫೋಟ – ಎನ್‌ಐಎಯಿಂದ ಸ್ಪಾಟ್‌ ಮಹಜರು

ತಾತ್ಕಾಲಿಕವಾಗಿ ಸಿಎಂ ಕಾರ್ಯಕ್ರಮ ಮುಂದೂಡಿಕೆಯಾದ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

 

Share This Article