ವಿಶ್ವಾಸಮತಕ್ಕೆ ಮುನ್ನವೇ ಕೈಚೆಲ್ಲಿ ಕುಳಿತ ಕಾಂಗ್ರೆಸ್ – ಇನ್ನೂ ಏನೋ ಒಂದು ಆಸೆಯಲ್ಲಿದೆ ಜೆಡಿಎಸ್

Public TV
1 Min Read
CONGRESS JDS

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ಮುಖ್ಯಮಂತ್ರಿಗಳು ವಿಶ್ವಾಸಮತಯಾಚಿಸಲಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ ನಾಯಕರು ಕೈ ಚೆಲ್ಲಿ ಕುಳಿತಿದ್ದಾರೆ.

ಮುಂಬೈಗೆ ಹೋಗಿರೋ ಅತೃಪ್ತರನ್ನು ಮನವೊಲಿಸಿ ಕರೆತರೋದು ಸಾಧ್ಯವಿಲ್ಲ ಅನ್ನೋ ನಿರ್ಧಾರಕ್ಕೆ ಬಂದಿದ್ದಾರೆ. ಹೋಗಿರೋರು ಬರಲ್ಲ. ಇದ್ದವರು ಹೋಗಬೇಡ್ರಪ್ಪಾ ಎಂದು ರೆಸಾರ್ಟ್ ನಲ್ಲಿರೋ ಕಾಂಗ್ರೆಸ್ ಶಾಸಕರಿಗೆ ಹಿರಿಯ ನಾಯಕರು ಮನವಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

CONGRESS JDS 1

ಕಾಂಗ್ರೆಸ್ ನಾಯಕರು ಮತ್ತು ಶಾಸಕರಿಗೆ ಈ ಸರ್ಕಾರ ಉಳಿಯೋದು ಕಷ್ಟ ಅನ್ನೋದು ಈಗಾಗಲೇ ಗೊತ್ತಾಗಿದೆ. ಆದರೆ ಜೆಡಿಎಸ್ ನಾಯಕರು ಮಾತ್ರ ಕೊನೆ ಕ್ಷಣದ ಮ್ಯಾಜಿಕ್ ನಿರೀಕ್ಷೆಯಲ್ಲಿದ್ದಾರೆ. ಅತೃಪ್ತರು ವಾಪಸ್ ಬರ್ತಾರೆ, ಸರ್ಕಾರ ಉಳಿಯುತ್ತದೆ ಅನ್ನೋ ನಂಬಿಕೆಯಲ್ಲಿದ್ದಾರೆ. ಇತ್ತ ನಿನ್ನೆ ರಾತ್ರಿ ಜೆಡಿಎಸ್ ಶಾಸಕರು ತಂಗಿರೋ ದೇವನಹಳ್ಳಿಯ ಖಾಸಗಿ ರೆಸಾರ್ಟ್ ಗೆ ಸಿಎಂ ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

CONGRESS JDS 2

ಕಳೆದ 8 ದಿನಗಳಿಂದ ಜೆಡಿಎಸ್ ಶಾಸಕರು ಇದೇ ರೆಸಾರ್ಟ್ ನಲ್ಲಿ ತಂಗಿದ್ದು, ಸಿಎಂ ಐದು ಬಾರಿ ಭೇಟಿ ನೀಡಿದ್ದಾರೆ. ಈ ನಡುವೆ ಮತ್ತಷ್ಟು ಶಾಸಕರು ಕೈಕೊಡುವ ಭೀತಿಯಲ್ಲಿರುವ ದೋಸ್ತಿಗಳು, ತಮ್ಮ ತಮ್ಮ ಶಾಸಕರು ಇರುವ ರೆಸಾರ್ಟ್ ಗಳಿಗೆ ಬಿಗಿ ಭದ್ರತೆ ಕಲ್ಪಿಸಿದ್ದಾರೆ. ಸ್ವತಃ ಗೃಹ ಸಚಿವ ಎಂ ಬಿ ಪಾಟೀಲ್, ರೆಸಾರ್ಟ್ ಗಳಿಗೆ ಭೇಟಿ ನೀಡಿ ಪೊಲೀಸ್ ಭದ್ರತೆ ಪರಿಶೀಲಿಸಿದ್ದಾರೆ ಎನ್ನಲಾಗಿದೆ.

JDS

ರಾಜ್ಯದ ಮೈತ್ರಿ ಸರ್ಕಾರದ ಅಳಿವು, ಉಳಿವಿನ ಪ್ರಶೆಯಾಗಿರೋ ಅತೃಪ್ತ ಶಾಸಕರ ರಾಜೀನಾಮೆ ಮತ್ತು ಅನರ್ಹತೆ ಸಂಬಂಧಿತ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ನೀಡಲಿದೆ. ಮಂಗಳವಾರ ಸುದೀರ್ಘ ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.

Share This Article
Leave a Comment

Leave a Reply

Your email address will not be published. Required fields are marked *