Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್‍ಕೊಟ್ಟ ಸಿಟಿ ರವಿ, ಹೆಬ್ಬಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್‍ಕೊಟ್ಟ ಸಿಟಿ ರವಿ, ಹೆಬ್ಬಾರ್

Bengaluru City

ಶ್ರೀನಿವಾಸ ಗೌಡರಿಗೆ ಖಾಲಿ ಕವರ್ ನೀಡಿ ಪೋಸ್‍ಕೊಟ್ಟ ಸಿಟಿ ರವಿ, ಹೆಬ್ಬಾರ್

Public TV
Last updated: February 17, 2020 8:36 pm
Public TV
Share
2 Min Read
srinivas gowda kambala blank check
SHARE

– ವಿಧಾನಸೌಧದಲ್ಲಿ ಸಿಎಂ ಸನ್ಮಾನ
– ಅರ್ಧ ಗಂಟೆ ತಡವಾಗಿ ಬಂತು 3 ಲಕ್ಷದ ಚೆಕ್

ಬೆಂಗಳೂರು: ಕಂಬಳ ವೀರ ಶ್ರೀನಿವಾಸ್‍ಗೌಡರನ್ನು ಕೆಲ ಸಚಿವರು ತಮ್ಮ ಪ್ರಚಾರಕ್ಕಾಗಿ ಬಳಸಿಕೊಂಡ್ರಾ ಎನ್ನುವ ಪ್ರಶ್ನೆ ಎದ್ದಿದೆ. ಇವತ್ತು ಮಂಗಳೂರಿನ ಶ್ರೀನಿವಾಸ್‍ಗೌಡರನ್ನು ವಿಧಾನಸೌಧಕ್ಕೆ ಕರೆಸಿಕೊಂಡ ಸಿಎಂ ಯಡಿಯೂರಪ್ಪ, ಸನ್ಮಾನ ಮಾಡಿದರು.

ಸನ್ಮಾನದ ಬಳಿಕ ಚೆಕ್ ವಿತರಿಸುವಂತೆ ಸೂಚಿಸಿ ಸಿಎಂ ಅಲ್ಲಿಂದ ನಿರ್ಗಮಿಸಿದರು. ಆದರೆ ಚೆಕ್ ಬರುವುದು ತಡವಾದ ಕಾರಣ ಶ್ರೀನಿವಾಸ್ ಗೌಡರಿಗೆ ಖಾಲಿ ಕವರ್ ನೀಡಿ ಸಚಿವರಾದ ಸಿಟಿ ರವಿ ಮತ್ತು ಶಿವರಾಮ್ ಹೆಬ್ಬಾರ್ ಪೋಸ್ ನೀಡಿದರು.

shrinivas gowda kambala

ಇದು ಖಾಲಿ ಕವರ್ ಅಂತಾ ಕೈ ಸನ್ನೆಯಲ್ಲೇ ಸಿಟಿ ರವಿ ತಿಳಿಸುವ ಪ್ರಯತ್ನ ಮಾಡಿದರು. ಅರ್ಧಗಂಟೆ ಬಳಿಕ ಕಾರ್ಮಿಕ ಇಲಾಖೆ ಅಧಿಕಾರಿಗಳು ಶ್ರೀನಿವಾಸ್ ಗೌಡರಿಗೆ 3 ಲಕ್ಷ ರೂಪಾಯಿಯ ಚೆಕ್ ವಿತರಿಸಿದರು. ಇದನ್ನೂ ಓದಿ: ಉಸೇನ್ ಬೋಲ್ಟ್ ದಾಖಲೆ ಮುರಿದ ತುಳುನಾಡ ಕಂಬಳ ಓಟಗಾರ ಶ್ರೀನಿವಾಸ್

ಈಗ ಹೋಗಲ್ಲ: ಕಂಬಳ ಸ್ಪರ್ಧೆಗಳು ಇರುವ ಕಾರಣ ಸದ್ಯಕ್ಕೆ ಭಾರತೀಯ ಕ್ರೀಡಾ ಪ್ರಾಧಿಕಾರಕ್ಕೆ ತೆರಳದೇ ಇರಲು ಶ್ರೀನಿವಾಸ್‍ಗೌಡ ತೀರ್ಮಾನಿಸಿದ್ದಾರೆ. ನಂಗೆ ಕಂಬಳದ ಗದ್ದೆಯೇ ಇಷ್ಟ ಎಂದಿದ್ದಾರೆ.

https://twitter.com/CMofKarnataka/status/1229369073038848000

ಈ ಮೊದಲೇ ನಾನು ಕಂಬಳದಲ್ಲಿ ಭಾಗವಹಿಸುತ್ತೇನೆ ಎಂದು ಕೋಣದ ಯಜಮಾನರಿಗೆ ಮಾತು ನೀಡಿದ್ದೇನೆ. ಈ ಋತುವಿನ ಎರಡು ಕಂಬಳ ಬಾಕಿಯಿದೆ. ಈ ಸಂಬಂಧ ಈಗಾಗಲೇ ನಾನು ಒಪ್ಪಂದ ಮಾಡಿಕೊಂಡಿದ್ದೇನೆ. ಕಂಬಳದ ಋತು ಮುಗಿದ ಬಳಿಕ ಸಾಯ್ ಮೌಲ್ಯಮಾಪನಕ್ಕೆ ಹಾಜರಾಗುತ್ತೇನೆ ಎಂದಿದ್ದಾರೆ.

ವೇಣೂರು- ಪೆಂರ್ಬುಡ ‘ಸೂರ್ಯ-ಚಂದ್ರ’ ಜೋಡುಕರೆ ಕಂಬಳದಲ್ಲೂ ಶ್ರೀನಿವಾಸ ಗೌಡ ಅವರ ಮೂರು ಚಿನ್ನದ ಪದಕವನ್ನು ಗೆದ್ದಿದ್ದಾರೆ. ಈ ಮೂಲಕ ಗೌಡರು ಗೆದ್ದ ಪದಕಗಳ ಸಂಖ್ಯೆ 157ಕ್ಕೆ ಏರಿಕೆಯಾಗಿದೆ.

ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಶ್ರೀ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು. #Kambala @KirenRijiju #Olympics #Karnataka

— Vice-President of India (@VPIndia) February 16, 2020

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ,”ಶ್ರೀನಿವಾಸರ ಪ್ರತಿಭೆಯನ್ನು ಗುರುತಿಸಿ, ಒಲಿಂಪಿಕ್ಸ್ ಗೆ ಅವರ ಕೌಶಲವನ್ನು ಅಣಿಗೊಳಿಸಲು ತರಬೇತಿ ನೀಡುವುದಾಗಿ ತಿಳಿಸಿರುವ ಕೇಂದ್ರ ಕ್ರೀಡಾ ಸಚಿವ ಶ್ರೀ ಕಿರೆಣ್ ರಿಜಿಜು ಅವರಿಗೆ ನನ್ನ ಅಭಿನಂದನೆಗಳು. ಕಂಬಳ ಸ್ಪರ್ಧೆಯ ವೇಳೆ ಅಪರೂಪದ ಸಾಧನೆ ಮಾಡಿ, ಉಸೇನ್ ಬೋಲ್ಟ್ ನೊಂದಿಗೆ ಹೋಲಿಸಲ್ಪಡುತ್ತಿರುವ ಕರ್ನಾಟಕದ ಶ್ರೀನಿವಾಸ ಗೌಡ ಕೀರ್ತಿ ಪಡೆದಿದ್ದಾರೆ. ದೇಶದಲ್ಲಿ ಸಾಕಷ್ಟು ಸುಪ್ತ ಪ್ರತಿಭೆಗಳಿದ್ದು, ಅವರ ಪೂರ್ಣ ಸಾಮರ್ಥ್ಯದ  ಸಾಕಾರಕ್ಕಾಗಿ ಅದನ್ನು ತಿಳಿಯುವ, ಮನ್ನಣೆ ನೀಡುವ, ಗೌರವಿಸುವ ಮತ್ತು ಪೋಷಿಸುವ  ಅಗತ್ಯವಿದೆ” ಎಂದು ಬರೆದು ಶ್ಲಾಘಿಸಿದ್ದರು.

Srinivas Kambala

ಶ್ರೀನಿವಾಸ ಗೌಡ ಕಡು ಬಡತನದ ಕುಟುಂಬದಿಂದ ಬಂದಿದ್ದಾರೆ. ಮೂಡುಬಿದ್ರೆಯ ಮಿಜಾರಿನ ಅಶ್ವತ್ಥಪುರದ ನಿವಾಸಿಯಾಗಿರುವ ಶ್ರೀನಿವಾಸ ಗೌಡ, ಪರಿಶಿಷ್ಟ ವರ್ಗಕ್ಕೆ ಸೇರಿದ ಕುಡುಂಬಿ ಜನಾಂಗದ ವ್ಯಕ್ತಿ. ಆದರೆ,ಕಂಬಳದಲ್ಲಿ ಮಾಡಿದ ಸಾಧನೆ ಮಾತ್ರ ಶ್ರೀನಿವಾಸ ಅವರನ್ನು ಖ್ಯಾತಿಯ ಉತ್ತುಂಗಕ್ಕೆ ಏರಿಸಿದೆ. ಅತಿ ವೇಗದ ಓಟದ ದಾಖಲೆಯ ಉಸೇನ್ ಬೋಲ್ಟ್ ಮೀರಿಸುವ ಸಾಧನೆ ಮಾಡಿದ್ದಾಗಿ ಹೋಲಿಸಲಾಗುತ್ತಿದೆ.ಇಂಥ ಖ್ಯಾತಿ ಬಂದಿದ್ದರೂ, ಶ್ರೀನಿವಾಸ ಮಾತ್ರ ಎಂದಿನಂತೇ ಕಂಬಳದಲ್ಲಿತೊಡಗಿಸಿಕೊಂಡಿದ್ದಾರೆ. ಕಂಬಳ ಬಿಟ್ಟರೆ ಕಟ್ಟಡ ಕೆಲಸದ ಕಾರ್ಮಿಕನಾಗಿ ದುಡಿಯುತ್ತಿದ್ದಾರೆ.

ಶ್ರೀನಿವಾಸ ಗೌಡರ ಸಾಧನೆ ವಿಶ್ವದ ಗಮನ ಸೆಳೆದಿದ್ದರೂ, ಪದಕದ ಬೇಟೆ ನಿಂತಿಲ್ಲ. ನಿನ್ನೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ನಡೆದ ಕಂಬಳದಲ್ಲಿ ಮೂರು ವಿಭಾಗದಲ್ಲಿ ಮತ್ತೆ ಮೂರು ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಈ ಬಾರಿಯ ಕಂಬಳದ ಋತುವಿನಲ್ಲಿ ಸತತವಾಗಿ ಚಿನ್ನದ ಪದಕ ಗೆಲ್ಲುತ್ತಾ ಬಂದು ದಾಖಲೆ ಮಾಡಿದ್ದಾರೆ. ಈ ಬಾರಿ ಇನ್ನೆರಡು ಕಂಬಳ ಮಾತ್ರ ಉಳಿದಿದ್ದು, ನಾಲ್ಕು ಕೋಣಗಳ ಜೊತೆ ಓಡುವ ಶ್ರೀನಿವಾಸ ಗೌಡ ಚಿನ್ನಕ್ಕೆ ಲಗ್ಗೆಯಿಟ್ಟು ಹೊಸ ದಾಖಲೆ ನಿರ್ಮಿಸುವ ಇರಾದೆಯಲ್ಲಿದ್ದಾರೆ.

TAGGED:bengaluruCT RavikambalaShivram HebbaarSrinivasa Gowdayeddyurappaಕಂಬಳಬಿಜೆಪಿ. ಶಿವರಾಂ ಹೆಬ್ಬಾರ್ಯಡಿಯೂರಪ್ಪಶ್ರೀನಿವಾಸ ಗೌಡಸಿಟಿ ರವಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
38 minutes ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
51 minutes ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
1 hour ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
2 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
2 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?