Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ – ಪ್ರವಾಹದ ಸಂಪೂರ್ಣ ಮಾಹಿತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ – ಪ್ರವಾಹದ ಸಂಪೂರ್ಣ ಮಾಹಿತಿ

Bengaluru City

ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ – ಪ್ರವಾಹದ ಸಂಪೂರ್ಣ ಮಾಹಿತಿ

Public TV
Last updated: August 10, 2019 1:46 pm
Public TV
Share
2 Min Read
CM BSY
SHARE

ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್‍ವೈ, ಕಳೆದ ಒಂದು ವಾರದಿಂದ ಮಹಾರಾಷ್ಟ್ರ ಮತ್ತು ನಮ್ಮ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಭೂ ಕುಸಿತದಿಂದಾಗಿ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಆಸ್ತಿ- ಪಾಸ್ತಿ ಸೇರಿದಂತೆ ಸಾಕಷ್ಟು ನಷ್ಟವಾಗಿದೆ. ರಾಜ್ಯದ ಸುಮಾರು ಅರ್ಧ ಭಾಗ ವರುಣನ ರುದ್ರನರ್ತನಕ್ಕೆ ಬಲಿಯಾಗಿದೆ. ಕಳೆದ 45 ವರ್ಷದಲ್ಲಿ ಇಷ್ಟು ದೊಡ್ಡ ಭೀಕರ ಪ್ರವಾಹವನ್ನು ರಾಜ್ಯ ಕಂಡಿರಲಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ @BSYBJP ಅವರನ್ನು ಸರ್ಕಾರಿ ನೌಕರರ ಸಂಘದ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ಭೇಟಿ ಮಾಡಿದರು.
ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ,ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡ ಪಾಟೀಲ್, ಖಜಾಂಚಿ ಶ್ರೀನಿವಾಸ,ಗೌರವಾಧ್ಯಕ್ಷ ಶಿವರುದ್ರಯ್ಯ ಮತ್ತು ಪದಾಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಕಳಸದ್ ಉಪಸ್ಥಿತರಿದ್ದರು. pic.twitter.com/nSWS8OxPDa

— CM of Karnataka (@CMofKarnataka) August 10, 2019

ಪ್ರವಾಹದ ಮಾಹಿತಿ:
ಈವರೆಗೆ 16 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಇದರಿಂದ 24 ಜನ ಮೃತಪಟ್ಡಿದ್ದಾರೆ. ಈಗಾಗಲೇ ಮೃತ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಕೊಡಲಾಗಿದೆ. ಅಧಿಕಾರಿಗಳ ಜೊತೆ ಚರ್ಚೆ ಮಾಡಿ 80 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಿದ್ದೇವೆ. ಒಟ್ಟು 1,024 ಗ್ರಾಮಗಳು ಮಳೆ ಮತ್ತು ಪ್ರವಾಹದ ಭೀಕರತೆಯನ್ನು ಎದುರಿಸುತ್ತಿವೆ. 2.35 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. 220 ಜಾನುವಾರುಗಳ ಸಾನ್ನಪ್ಪಿದ್ದು, 44 ಸಾವಿರ ಜಾನುವಾರಗಳನ್ನು ಸ್ಥಳಾಂತರ ಮಾಡಲಾಗಿದೆ. ರಾಜ್ಯದಲ್ಲಿ ಒಟ್ಟು 624 ಪರಿಹಾರ ಕೇಂದ್ರಗಳ ತೆರೆಯಲಾಗಿದೆ ಎಂದರು. ಪರಿಹಾರ ಕೇಂದ್ರದಲ್ಲಿ 1.57 ಲಕ್ಷಕ್ಕೂ ಹೆಚ್ಚ ಜನ ಆಶ್ರಯ ಮಾಡುತ್ತಿದ್ದಾರೆ. ಅವರಿಗೆ ಬೇಕಾದ ಎಲ್ಲ ಸೌಲಭ್ಯವನ್ನು ಒದಗಿಸಲಾಗಿದೆ. 3.22 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, 12,651 ಮನೆಗಳು ಸಂಪೂರ್ಣ ಹಾನಿಯಾಗಿದೆ ಎಂದು ಸಿಎಂ ಬಿಎಸ್‍ವೈ ಅವರು ತಿಳಿಸಿದರು.

ಮಂಗಳೂರಿಗೆ ರೈಲು ಮತ್ತು ರಸ್ತೆ ಸಂಪರ್ಕ ಕಡಿದುಹೋಗಿದೆ. ಇತ್ತ ಕೊಡಗಿನಲ್ಲಿ ಭೂಕುಸಿತ ಉಂಟಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಮೂರು ತಂಡಗಳಾಗಿ ಶಾಸಕರು ತೆರಳಿದ್ದಾರೆ. ಬೆಳಗಾವಿ, ಧಾರವಾಡ, ಗದಗ, ಚಿಕ್ಕೋಡಿ, ಬಾಗಲಕೋಟೆ, ಕೂಡಲಸಂಗಮ, ಬಾದಾಮಿ ಸೇರಿದಂತೆ ಅನೇಕ ಕಡೆ ಭೇಟಿ ನೀಡಿದ್ದೇನೆ. ಈಗಾಗಲೇ ನದಿ ತೀರದ ಜನರಿಗೆ ಎಚ್ಚರಿಕೆ ಕೊಡಲಾಗಿದೆ. ಹೇಮಾವತಿ ಮತ್ತು ತುಂಗಭದ್ರಾ ನದಿಗಳಲ್ಲೂ ಹೆಚ್ಚುವರಿ ನೀರು ಹರಿಸಲು ನಿರ್ಧಾರ ಆಗಿದೆ. ಜಲಾಶಯಗಳಿಗೆ ಹೆಚ್ವುವರಿ ಒಳಹರಿವು ಬರುತ್ತಿದೆ. ಆದ್ದರಿಂದ ಹೊರ ಹರಿವು ಹೆಚ್ಚಿಸಲಾಗಿದೆ ಎಂದರು.

ಮುಖ್ಯಮಂತ್ರಿ @BSYBJP ಅವರು ಇಂದು ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಕಳಸದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/3m7Byu7cUu

— CM of Karnataka (@CMofKarnataka) August 10, 2019

ಕೇಂದ್ರ ಸರ್ಕಾರ ಸಕಾಲಕ್ಕೆ ಸ್ಪಂದಿಸಿದೆ. ವಾಯು, ಭೂ, ನೌಕಾ ಪಡೆಗಳ ಸಿಬ್ಬಂದಿ ತುರ್ತು ಕಾರ್ಯಾಚರಣೆಗೆ ಇಳಿದಿವೆ. ವಾಯುಪಡೆಯ ನಾಲ್ಕು ಹೆಲಿಕಾಪ್ಟರ್‌ಗಳು, ಅಗ್ನಿಶಾಮಕ ದಳ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಪಕ್ಷಾತೀತವಾಗಿ ಶಾಸಕರು, ಸಂಸದರ ತಂಡಗಳು ವಾಸ್ತವ ಸ್ಥಿತಿ ಅರಿತುಕೊಂಡು ಕಾರ್ಯಾಚರಣೆ ಮಾಡುತ್ತಿದ್ದಾರೆ. ಯಾರೂ ಧೈರ್ಯಗುಂದುವ ಅಗತ್ಯ ಇಲ್ಲ. ರಾಜ್ಯ, ಕೇಂದ್ರ ಸರ್ಕಾರಗಳ ನೆರವು ಕೊಡಲು ಸಿದ್ಧ ಇವೆ. ಎಷ್ಟೇ ಖರ್ಚಾದರೂ ಸಂತ್ರಸ್ತರಿಗೆ ಸುರಕ್ಷತೆ ಮತ್ತು ಪುನರ್ವಸತಿ ಕಲ್ಪಿಸಿ ಕೊಡುತ್ತೇವೆ ಎಂದರು.

ಪರಿಹಾರ ನಿಧಿ:
ಸರ್ಕಾರಿ ನೌಕರರು ತಮ್ಮ ಒಂದು ದಿನದ ವೇತನ 150 ಕೋಟಿ ರೂ. ಕೊಡುವುದಾಗಿ ಫೋಷಿಸಿದ್ದಾರೆ. ಬೇರೆ ಬೇರೆ ನಿಗಮ ಮಂಡಳಿಯಿಂದ 50 ಕೋಟಿ ಕೊಡುತ್ತೇವೆ ಎಂದಿದ್ದಾರೆ. ಸುಧಾಮೂರ್ತಿ ಅವರು 10 ಕೋಟಿ ರೂ. ಕೊಟ್ಟಿದ್ದಾರೆ. ಪೊಲೀಸ್ ಮತ್ತು ಸಾರಿಗೆ ಇಲಾಖೆ ಒಂದು ದಿನ ಸಂಬಳವನ್ನು ಕೊಡಲು ಒಪ್ಪಿದ್ದಾರೆ. ಹಾಲು ಉತ್ಪಾದಕ ಘಟಕದಿಂದ 1 ಕೋಟಿ ರೂ. ಕೊಟ್ಟಿದ್ದಾರೆ. ಶಾಸಕರ ಕ್ಷೇಮಾಭಿವೃದ್ದಿ ನಿಧಿಯಿಂದ 2 ಕೋಟಿ ರೂ. ಕೊಡಲಾಗಿದೆ. ಹೀಗೆ ಅನೇಕರು ಅವರ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ ಎಂದು ಸಿಎಂ ಬಿಎಸ್‍ವೈ ಅವರು ತಿಳಿಸಿದರು.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು ಹಾಗೂ ಪ್ರವಾಹ ಸಂತ್ರಸ್ತರೊಡನೆ ಮಾತನಾಡಿ ಸಾಂತ್ವನ ಹೇಳಿದರು. pic.twitter.com/zf2hAzwrmk

— CM of Karnataka (@CMofKarnataka) August 10, 2019

TAGGED:cm yeddyurappafloodPress MeetPublic TVrainReliefriverನದಿಪಬ್ಲಿಕ್ ಟಿವಿಪರಿಹಾರಪ್ರವಾಹಮಳೆಸಿಎಂ ಯಡಿಯೂರಪ್ಪಸುದ್ದಿಗೋಷ್ಠಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
52 seconds ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
12 minutes ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
29 minutes ago
Groom dies in an accident while going for a pre wedding shoot sakleshpur hassan
Hassan

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
30 minutes ago
Madhya Pradesh Pickup SUV accident
Crime

ಡಿವೈಡರ್ ಹಾರಿ ಎಸ್‌ಯುವಿಗೆ ಪಿಕಪ್ ಡಿಕ್ಕಿ – 15 ಮಂದಿ ದುರ್ಮರಣ

Public TV
By Public TV
1 hour ago
Donald Trump sad unhappy
Latest

Iran War| ನಾಳೆಗೆ 60 ದಿನಗಳ ಡೆಡ್‌ಲೈನ್‌ ಅಂತ್ಯ – ಸಂಕಷ್ಟದಲ್ಲಿ ಟ್ರಂಪ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?