ಸಿಎಂ ತವರಲ್ಲಿ ವಿಶಿಷ್ಟವಾಗಿ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

Public TV
1 Min Read
smg bsy birthday

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಅತ್ತ ಸಿಎಂ ಸಹ ರಾಜಧಾನಿಯ ತಮ್ಮ ಸ್ವಗೃಹದಲ್ಲಿ ವಿಶೇಷ ಪೂಜೆ-ಹೋಮ ಹವನಗಳಲ್ಲಿ ತೊಡಗಿದ್ದರು. ಆದರೆ ಸಿಎಂ ತವರು ಕ್ಷೇತ್ರ ಶಿವಮೊಗ್ಗದಲ್ಲಿ ಅವರ ಅಭಿಮಾನಿಗಳು ಅವರ ಹುಟ್ಟುಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿದ್ದಾರೆ.

ರೋಗಿಗಳಿಗೆ ಹಣ್ಣು-ಹಂಪಲು ದಾನ ಹಾಗೂ ಬಡವರಿಗಾಗಿ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲುವ ಮೂಲಕ ವಿಶಿಷ್ಟವಾಗಿ ತಮ್ಮ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 78 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ನಗರದ ನಿಜಲಿಂಗಪ್ಪ ಸಭಾಂಗಣದ ಈಶ್ವರನ ದೇವಾಲಯದಲ್ಲಿ ವಿಶೇಷ ಹೋಮ-ಹವನ ಪೂಜೆ ನೆರವೇರಿಸಲಾಯಿತು. ನಂತರ ಬಡವರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೂಡ ಹಮ್ಮಿಕೊಳ್ಳಲಾಗಿತ್ತು.

vlcsnap 2020 02 27 16h53m33s867

ಶಿಬಿರದಲ್ಲಿ ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ ಆರೋಗ್ಯ ತಪಾಸಣೆಯಲ್ಲಿ ಪಾಲ್ಗೊಂಡರು. ಅಲ್ಲದೆ ಸ್ವತಃ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಆರೋಗ್ಯ ಶಿಬಿರ ಮತ್ತು ಹೋಮ-ಹವನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇದಕ್ಕೂ ಮುನ್ನ ನಗರದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ ಒಳರೋಗಿಗಳಿಗೆ, ಹಣ್ಣು-ಹಂಪಲು ಮತ್ತು ಬ್ರೆಡ್ ವಿತರಿಸಲಾಯಿತು.

ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಮತ್ತು ಶಾಸಕರಾದ ರುದ್ರೇಗೌಡ ಕಾರ್ಯಕ್ರಮದಲ್ಲಿ ಭಾಗವಹಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *