ಡಾ.ಸೋಮೇಶ್ವರ ಅವರಿಗೆ ಜೀವಮಾನ ಪುರಸ್ಕಾರ

Public TV
2 Min Read
bengaluru price ashwath narayan

ಬೆಂಗಳೂರು: ವಿಜ್ಞಾನ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿರುವ ಡಾ. ಸಿ.ಎ. ವಿರಕ್ತ ಮಠ ಮತ್ತು ಡಾ. ಬಿ. ಶಿವಾನಂದಪ್ಪ ಅವರಿಗೆ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2022ನೇ ಸಾಲಿನ ಸಿ.ಎನ್.ಆರ್. ರಾವ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಮಂಗಳವಾರ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ತಜ್ಞರಿಗೆ ಅಕಾಡೆಮಿ ಪ್ರಶಸ್ತಿ ಹಾಗೂ ಫೆಲೋಶಿಪ್‌ಗಳನ್ನು ಐಟಿ- ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಸಿ.ಎನ್. ಅಶ್ವಥ್‌ನಾರಾಯಣ ಅವರು ಪ್ರದಾನ ಮಾಡಿದರು.

ashwath narayan 2

ಪ್ರೊ. ಕೆ.ವಿ. ರಾವ್ ಮತ್ತು ಡಾ. ನಾ. ಸೋಮೇಶ್ವರ ಅವರಿಗೆ ಅಕಾಡೆಮಿ ವತಿಯಿಂದ ವಿಜ್ಞಾನ ಸಂವಹನೆಗಾಗಿ ಕೊಡ ಮಾಡುವ ಜೀವಮಾನ ಪುರಸ್ಕಾರಗಳನ್ನು ನೀಡಲಾಯಿತು.

ನಂತರ ಮಾತನಾಡಿದ ಸಚಿವರು, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ತೊಡಗಿಕೊಂಡಿರುವವರು ಸಮಾಜದ ವಾಸ್ತವ ಪರಿಸ್ಥಿತಿಗಳನ್ನು ಆಧರಿಸಿ ಸಂಶೋಧನೆ ಮಾಡಿದರೆ ಅದರಿಂದ ಸಮುದಾಯಗಳ ಸಬಲೀಕರಣ ಸುಗಮವಾಗುತ್ತದೆ ಎಂದರು.

ಕರ್ನಾಟಕ ರಾಜ್ಯವು ಸಂಶೋಧನೆ ಮತ್ತು ನಾವಿನ್ಯತೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಇದನ್ನು ಬೇರೆ ರಾಜ್ಯಗಳಿಗೆ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಸಂಶೋಧನೆ ಮತ್ತು ನಾವಿನ್ಯತೆಗೆ ಸರ್ಕಾರವು ಸಾಕಷ್ಟು ಉತ್ತೇಜನ ಕೊಡುತ್ತಿದೆ ಎಂದು ಹೇಳಿದರು.

ರಾಜ್ಯವು ನವೋದ್ಯಮ ವಲಯದಲ್ಲೂ ಕೂಡ ಭಾರತಕ್ಕೆ ನಂಬರ್ ಒನ್ ಆಗಿದ್ದು, ಈ ಸ್ಥಾನವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು. ಇದಕ್ಕಾಗಿ ಸರ್ಕಾರವು ವಿಜ್ಞಾನಿಗಳ ತಂತ್ರಜ್ಞಾನಿಗಳ ಮತ್ತು ಹೂಡಿಕೆದಾರರ ಸಹಕಾರವನ್ನು ಬಯಸುತ್ತದೆ. ಪ್ರಯೋಗಾಲಯಗಳಲ್ಲಿ ಸಿದ್ಧವಾಗುವ ವಿಜ್ಞಾನದ ಫಲಿತಗಳು ತಂತ್ರಜ್ಞಾನದ ಮೂಲಕ ಜನರನ್ನು ತಲುಪುತ್ತವೆ. ಇವು ಸಮುದಾಯಗಳ ಕೈಗೆ ಅಂತಿದ್ದರೆ ಕೆಟಕುವಂತೆ ಇದ್ದರೆ ಮಾತ್ರ ಸಂಶೋಧನೆಗಳಿಗೆ ಬೆಲೆ ಬರುತ್ತದೆ ಎಂದರು.

ಗೌರವ ಫೆಲೋಶಿಪ್ ಪಡೆದವರು: ಸಿಎಲ್‌ಎಲ್ ಗೌಡ, ಡಿ.ಜೆ. ಭಾಗ್ಯರಾಜ್, ಸಿ.ಎಸ್. ಪ್ರಸಾದ್, ಎಸ್.ಎಸ್. ಹೊನ್ನಪ್ಪಗೋಳ್, ಲಲಿತ ಆರ್ ಗೌಡ, ಕೆ.ಎಂ. ಶಂಕರ್, ಬಿ. ತಿಮ್ಮೇಗೌಡ, ಮನೋಹರ ಕುಲಕರ್ಣಿ, ಬಾಲಸುಬ್ರಮಣಿಯನ್, ಟಿ.ವಿ. ರಾಮಚಂದ್ರ, ಎಸ್. ವಿಶ್ವನಾಥ್, ನವಕಾಂತ್ ಭಟ್, ಎ. ಆದಿಮೂರ್ತಿ, ಜಿ.ಡಿ. ವೀರಪ್ಪಗೌಡ, ಎ.ವಿ. ಕುರುಪದ್, ಆರ್.ಆರ್. ನವಲಗುಂದ, ಎ.ಕೆ. ಸೂದ್, ಎಸ್.ಪಿ. ದಂಡಿನ್, ಆರ್. ಉಮಾಶಂಕರ್, ಎಚ್. ಸುದರ್ಶನ್, ಹೆಚ್. ರಾಮಕೃಷ್ಣರಾವ್ ಮತ್ತು ಶ್ರೀದೇವಿ ಸಿಂಗ್ ಅವರಾಗಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹಂತಕರು ಯಾರೆಂದು ಗೊತ್ತಾಗಿದೆ, ಶೀಘ್ರವೇ ಬಂಧನ ಮಾಡ್ತೇವೆ: ಆರಗ ಜ್ಞಾನೇಂದ್ರ

ಫೆಲೋಶಿಪ್ ಪುರಸ್ಕೃತರು: ಅಬ್ರಹಾಂ ವರ್ಗೀಸ್, ಕೆ.ಎಂ. ಇಂದಿರೇಶ, ಎನ್.ಕೆ.ಎಸ್. ಗೌಡ, ಎಸ್.ಆರ್. ರಮೇಶ್, ಬಿ. ರಂಗಸ್ವಾಮಿ, ಕೆ. ವೆಂಕಟರಾಮನ್, ಎಚ್. ರೇವಣ್ಣ ಸಿದ್ದಪ್ಪ, ಎಸ್.ಜಿ. ಶ್ರೀಕಂಠೇಶ್ವರ ಸ್ವಾಮಿ, ಎಂ.ಬಿ. ರಜನಿ, ಎಂ. ಜೆಡ್ ಸಿದ್ದಿಕಿ, ಕೆ.ಎನ್.ಬಿ. ಮೂರ್ತಿ, ಕೆ.ಎಂ. ರೂಪಾ, ಎನ್.ಬಿ. ನಡುವಿನಮನಿ, ಅರುಣ್ ಇನಾಮ್ದಾರ್, ಸುಪರ್ಣ ರಾಯ್, ಜಿ. ಜಗದೀಶ್, ಎಂ.ಕೆ. ರಬಿನಾಯ್, ಕೆ.ಎನ್. ಅಮೃತೇಶ್, ರವಿಶಂಕರ್ ರೈ, ಕೃಷ್ಣ ಇಸಲೂರು, ವಿಶಾಲ್ ರಾವ್, ವಿಜಯಲಕ್ಷ್ಮಿ ಡೇಗಾ ಮತ್ತು ಜಗದೀಶ್ ಆರ್ ತೋನಣ್ಣನವರ್. ಫಿಲೋಶಿಪ್ ಪುರಸ್ಕೃತರಾಗಿದ್ದಾರೆ. ಇದನ್ನೂ ಓದಿ: ಹಿಜಬ್ ನಿಷೇಧದ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ವಿಳಂಬ: ಸಿಜೆಐ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *